AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1-8ನೇ ತರಗತಿ ಆರಂಭ ಬಗ್ಗೆ ಆ.30ಕ್ಕೆ ನಿರ್ಧಾರ ಸಾಧ್ಯತೆ; ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

1ರಿಂದ 8ನೇ ತರಗತಿ ಆರಂಭದ ಕುರಿತು ನಾಳೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಸಭೆ ನಡೆಯುತ್ತದೆ. ಸಿಎಂ ಜೊತೆ ಚರ್ಚೆ ನಡೆಸಲಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ನಾಳೆ (ಆಗಸ್ಟ್ 30) ತಿಳಿಯಲಿದೆ.

1-8ನೇ ತರಗತಿ ಆರಂಭ ಬಗ್ಗೆ ಆ.30ಕ್ಕೆ ನಿರ್ಧಾರ ಸಾಧ್ಯತೆ; ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 29, 2021 | 9:14 AM

Share

ಬೆಂಗಳೂರು: ಈಗಾಗಲೇ 9, 10 ಮತ್ತು 11ನೇ ತರಗತಿ ಮಕ್ಕಳಿಗೆ ಶಾಲೆ ಮತ್ತು ಕಾಲೇಜಿಗೆ ಹೋಗುವ ಅವಕಾಶ ಸಿಕ್ಕಿದೆ. ಕೊರೊನಾ (Coronavirus) ಮೂರನೇ ಅಲೆ ನಡುವೆ ಆಗಸ್ಟ್ 23ರಿಂದ ಮಕ್ಕಳಿಗೆ ಆಫ್​ಲೈನ್​ ತರಗತಿಗೆ ಹಾಜರಾಗಲು ಸರ್ಕಾರ ಅನುಮತಿ ನೀಡಿದೆ. ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡು 9ರಿಂದ 11ನೇ ತರಗತಿವರೆಗೆ ಆಫ್​ಲೈನ್ ಶಿಕ್ಷಣ ನೀಡಲಾಗುತ್ತಿದೆ. ಅದರಂತೆ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತಿಸುತ್ತಿದ್ದು, ಈ ಬಗ್ಗೆ ನಾಳೆ ಮಹತ್ವದ ಸಭೆ ನಡೆಯಲಿದೆ. ಸದ್ಯ ಕೊರೊನಾ ಸೋಂಕು ನಿಯಂತ್ರಣದಲ್ಲಿರುವ ಕಾರಣ ಪ್ರಾಥಮಿಕ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ.

1ರಿಂದ 8ನೇ ತರಗತಿ ಆರಂಭದ ಕುರಿತು ನಾಳೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಸಭೆ ನಡೆಯುತ್ತದೆ. ಸಿಎಂ ಜೊತೆ ಚರ್ಚೆ ನಡೆಸಲಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ನಾಳೆ (ಆಗಸ್ಟ್ 30) ತಿಳಿಯಲಿದೆ. ಶೇ.2 ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಚಿಂತನೆ ನಡೆಸುತ್ತಿದ್ದು, ಸರ್ಕಾರ ತಾಂತ್ರಿಕ ಸಲಹಾ ತಜ್ಞರ ಸಲಹೆಯನ್ನು ಪಡೆಯಲಿದೆ. ತಜ್ಞರು 1ರಿಂದ 8ನೇ ತರಗತಿ ವರೆಗೆ ಶಾಲೆಗಳನ್ನು ತೆರೆಯಲು ಗ್ರೀನ್ ಸಿಗ್ನಲ್ ನೀಡಿದರೆ ಸೆಪ್ಟಂಬರ್ ಮೊದಲ ವಾರದಲ್ಲಿಯೇ ಶಾಲೆ ಪುನಾರಂಭವಾಗುವ ಸಾಧ್ಯತೆ ಹೆಚ್ಚಿದೆ.

ಈ ಬಗ್ಗೆ ಆಗಸ್ಟ್ 26ರಂದು ಮಾತನಾಡಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 1 ರಿಂದ 8ನೇ ತರಗತಿಯವರೆಗೆ ಶಾಲೆಗಳು ಆರಂಭಿಸುವ ಕುರಿತು ಆಗಸ್ಟ್ 30ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಕರೆದಿದ್ದು, ಅದೇ ದಿನ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಶಾಲೆ ಆರಂಭಕ್ಕೆ ಪೋಷಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸಮಿತಿಯಲ್ಲಿರುವ ಡಾ.ದೇವಿ ಪ್ರಸಾದ್ ಶೆಟ್ಟಿಯವರು 6 ರಿಂದ 8ನೇ ತರಗತಿ ಆರಂಭ ಮಾಡಬಹುದು ಎಂದಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ

ಮಕ್ಕಳಿಗಾಗಿ ನೀತಿಕತೆ: ಪ್ರೀತಿ ಮತ್ತೆ ದಯೆಯಿಂದ ಏನನ್ನು ಬೇಕಾದರೂ ಗೆಲ್ಲಬಹುದು

ಆಗಸ್ಟ್ 30ರಂದು 1ರಿಂದ 8 ನೇ ತರಗತಿವರೆಗಿನ ಶಾಲೆ ಆರಂಭದ ಕುರಿತು ಅಂತಿಮ ತೀರ್ಮಾನ: ಶಿಕ್ಷಣ ಸಚಿವ ಬಿ ಸಿ ನಾಗೇಶ್

(meeting will be held tomorrow under the leadership of Basavaraja Bommai to start class 1to 8 in Karnataka)

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ