AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1-8ನೇ ತರಗತಿ ಆರಂಭ ಬಗ್ಗೆ ಆ.30ಕ್ಕೆ ನಿರ್ಧಾರ ಸಾಧ್ಯತೆ; ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

1ರಿಂದ 8ನೇ ತರಗತಿ ಆರಂಭದ ಕುರಿತು ನಾಳೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಸಭೆ ನಡೆಯುತ್ತದೆ. ಸಿಎಂ ಜೊತೆ ಚರ್ಚೆ ನಡೆಸಲಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ನಾಳೆ (ಆಗಸ್ಟ್ 30) ತಿಳಿಯಲಿದೆ.

1-8ನೇ ತರಗತಿ ಆರಂಭ ಬಗ್ಗೆ ಆ.30ಕ್ಕೆ ನಿರ್ಧಾರ ಸಾಧ್ಯತೆ; ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on: Aug 29, 2021 | 9:14 AM

Share

ಬೆಂಗಳೂರು: ಈಗಾಗಲೇ 9, 10 ಮತ್ತು 11ನೇ ತರಗತಿ ಮಕ್ಕಳಿಗೆ ಶಾಲೆ ಮತ್ತು ಕಾಲೇಜಿಗೆ ಹೋಗುವ ಅವಕಾಶ ಸಿಕ್ಕಿದೆ. ಕೊರೊನಾ (Coronavirus) ಮೂರನೇ ಅಲೆ ನಡುವೆ ಆಗಸ್ಟ್ 23ರಿಂದ ಮಕ್ಕಳಿಗೆ ಆಫ್​ಲೈನ್​ ತರಗತಿಗೆ ಹಾಜರಾಗಲು ಸರ್ಕಾರ ಅನುಮತಿ ನೀಡಿದೆ. ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡು 9ರಿಂದ 11ನೇ ತರಗತಿವರೆಗೆ ಆಫ್​ಲೈನ್ ಶಿಕ್ಷಣ ನೀಡಲಾಗುತ್ತಿದೆ. ಅದರಂತೆ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತಿಸುತ್ತಿದ್ದು, ಈ ಬಗ್ಗೆ ನಾಳೆ ಮಹತ್ವದ ಸಭೆ ನಡೆಯಲಿದೆ. ಸದ್ಯ ಕೊರೊನಾ ಸೋಂಕು ನಿಯಂತ್ರಣದಲ್ಲಿರುವ ಕಾರಣ ಪ್ರಾಥಮಿಕ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ.

1ರಿಂದ 8ನೇ ತರಗತಿ ಆರಂಭದ ಕುರಿತು ನಾಳೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಸಭೆ ನಡೆಯುತ್ತದೆ. ಸಿಎಂ ಜೊತೆ ಚರ್ಚೆ ನಡೆಸಲಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ನಾಳೆ (ಆಗಸ್ಟ್ 30) ತಿಳಿಯಲಿದೆ. ಶೇ.2 ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಚಿಂತನೆ ನಡೆಸುತ್ತಿದ್ದು, ಸರ್ಕಾರ ತಾಂತ್ರಿಕ ಸಲಹಾ ತಜ್ಞರ ಸಲಹೆಯನ್ನು ಪಡೆಯಲಿದೆ. ತಜ್ಞರು 1ರಿಂದ 8ನೇ ತರಗತಿ ವರೆಗೆ ಶಾಲೆಗಳನ್ನು ತೆರೆಯಲು ಗ್ರೀನ್ ಸಿಗ್ನಲ್ ನೀಡಿದರೆ ಸೆಪ್ಟಂಬರ್ ಮೊದಲ ವಾರದಲ್ಲಿಯೇ ಶಾಲೆ ಪುನಾರಂಭವಾಗುವ ಸಾಧ್ಯತೆ ಹೆಚ್ಚಿದೆ.

ಈ ಬಗ್ಗೆ ಆಗಸ್ಟ್ 26ರಂದು ಮಾತನಾಡಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 1 ರಿಂದ 8ನೇ ತರಗತಿಯವರೆಗೆ ಶಾಲೆಗಳು ಆರಂಭಿಸುವ ಕುರಿತು ಆಗಸ್ಟ್ 30ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಕರೆದಿದ್ದು, ಅದೇ ದಿನ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಶಾಲೆ ಆರಂಭಕ್ಕೆ ಪೋಷಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸಮಿತಿಯಲ್ಲಿರುವ ಡಾ.ದೇವಿ ಪ್ರಸಾದ್ ಶೆಟ್ಟಿಯವರು 6 ರಿಂದ 8ನೇ ತರಗತಿ ಆರಂಭ ಮಾಡಬಹುದು ಎಂದಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ

ಮಕ್ಕಳಿಗಾಗಿ ನೀತಿಕತೆ: ಪ್ರೀತಿ ಮತ್ತೆ ದಯೆಯಿಂದ ಏನನ್ನು ಬೇಕಾದರೂ ಗೆಲ್ಲಬಹುದು

ಆಗಸ್ಟ್ 30ರಂದು 1ರಿಂದ 8 ನೇ ತರಗತಿವರೆಗಿನ ಶಾಲೆ ಆರಂಭದ ಕುರಿತು ಅಂತಿಮ ತೀರ್ಮಾನ: ಶಿಕ್ಷಣ ಸಚಿವ ಬಿ ಸಿ ನಾಗೇಶ್

(meeting will be held tomorrow under the leadership of Basavaraja Bommai to start class 1to 8 in Karnataka)

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?