AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಖ್ರಿ ಸರ್ಕಲ್ ಅಪಘಾತ: ನಲಪಾಡ್ ಗನ್‌ಮ್ಯಾನ್​ ಕೋರ್ಟ್​ಗೆ ಹಾಜರ್, ಜಡ್ಜ್​ ಏನಂದ್ರು?

ಬೆಂಗಳೂರು: ಫೆಬ್ರವರಿ 9ರಂದು ನಗರದ ಮೇಖ್ರಿ ಸರ್ಕಲ್‌ ಬಳಿ ಸರಣಿ ಅಪಘಾತ ಸಂಬಂಧ ಮಹಮ್ಮದ್ ನಲಪಾಡ್ ಬಾಡಿಗಾರ್ಡ್ ಬಾಲಕೃಷ್ಣಗೆ ಜಾಮೀನು ದೊರೆತಿದೆ. ಬಾಲಕೃಷ್ಣಗೆ 3 ಸಾವಿರ ಕ್ಯಾಷ್ ಶ್ಯೂರಿಟಿ ಮೇರೆಗೆ ಜಾಮೀನು ನೀಡಿ 7ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಸರಣಿ ಕಾರು ಅಪಘಾತ ಸಂಬಂಧ ನಲಪಾಡ್ ಪರವಾಗಿ ನಾನೇ ಆಕ್ಸಿಡೆಂಟ್ ಮಾಡಿದ್ದು ಎಂದು ಬಾಲಕೃಷ್ಣ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ. ಘಟನೆ ಸಂಬಂಧ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇರೆಗೆ ಸದಾಶಿವನಗರ ಪೊಲೀಸರು ದೂರು ದಾಖಲಿಸಿಕೊಂಡು, ಗನ್​ಮ್ಯಾನ್ ಬಾಲಕೃಷ್ಣನನ್ನು […]

ಮೇಖ್ರಿ ಸರ್ಕಲ್ ಅಪಘಾತ: ನಲಪಾಡ್ ಗನ್‌ಮ್ಯಾನ್​ ಕೋರ್ಟ್​ಗೆ ಹಾಜರ್, ಜಡ್ಜ್​ ಏನಂದ್ರು?
ಸಾಧು ಶ್ರೀನಾಥ್​
|

Updated on:Feb 13, 2020 | 11:20 AM

Share

ಬೆಂಗಳೂರು: ಫೆಬ್ರವರಿ 9ರಂದು ನಗರದ ಮೇಖ್ರಿ ಸರ್ಕಲ್‌ ಬಳಿ ಸರಣಿ ಅಪಘಾತ ಸಂಬಂಧ ಮಹಮ್ಮದ್ ನಲಪಾಡ್ ಬಾಡಿಗಾರ್ಡ್ ಬಾಲಕೃಷ್ಣಗೆ ಜಾಮೀನು ದೊರೆತಿದೆ. ಬಾಲಕೃಷ್ಣಗೆ 3 ಸಾವಿರ ಕ್ಯಾಷ್ ಶ್ಯೂರಿಟಿ ಮೇರೆಗೆ ಜಾಮೀನು ನೀಡಿ 7ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಸರಣಿ ಕಾರು ಅಪಘಾತ ಸಂಬಂಧ ನಲಪಾಡ್ ಪರವಾಗಿ ನಾನೇ ಆಕ್ಸಿಡೆಂಟ್ ಮಾಡಿದ್ದು ಎಂದು ಬಾಲಕೃಷ್ಣ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ. ಘಟನೆ ಸಂಬಂಧ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇರೆಗೆ ಸದಾಶಿವನಗರ ಪೊಲೀಸರು ದೂರು ದಾಖಲಿಸಿಕೊಂಡು, ಗನ್​ಮ್ಯಾನ್ ಬಾಲಕೃಷ್ಣನನ್ನು ಬಂಧಿಸಿದ್ದರು. ಪೊಲೀಸರು ವಿಚಾರಣೆ ನಡೆಸಿ ಇಂದು 7ನೇ ಎಸಿಎಂಎಂ ಕೋರ್ಟ್​ಗೆ ಹಾಜರುಪಡಿಸಿದ್ದರು.

ಸರಣಿ ಅಪಘಾತ ಹಿನ್ನೆಲೆ: ಸರಣಿ ಅಪಘಾತದಿಂದ ಬೈಕ್ ಸವಾರ ಪ್ರಫುಲ್ ಎಂಬಾತನ ಕಾಲು ಮೂಳೆ ಮುರಿದಿತ್ತು. ಅಪಘಾತದ ಬಳಿಕ ದುಬಾರಿ ಕಾರನ್ನ ಬಿಟ್ಟು ಚಾಲಕ ಮತ್ತೊಂದು ಕಾರಿನಲ್ಲಿ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸದಾಶಿವನಗರ ಪೊಲೀಸರು ಕಾರನ್ನು ಜಪ್ತಿ ಮಾಡಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಪ್ರಕರಣ ಬೆನ್ನು ಹತ್ತಿದ ಪೊಲೀಸರು, ಪ್ರತ್ಯಕ್ಷದರ್ಶಿಗಳ ಹೇಳಿಕೆ ಹಾಗೂ ಟೆಕ್ನಿಕಲ್ ಸಾಕ್ಷ್ಯಗಳನ್ನ ಆಧರಿಸಿ ತನಿಖೆ ನಡೆಸಿದ್ದರು.

ಈ ನಡುವೆ ಅಪಘಾತ ಮಾಡಿದ್ದು ತಾನೇ ಎಂದು ಗನ್​ಮ್ಯಾನ್ ಬಾಲಕೃಷ್ಣ ಮುಂದೆ ಬಂದಿದ್ದ. ಆದ್ರೆ ಸಾಕ್ಷ್ಯಾಧಾರಗಳಿಂದ ಕಾರು ಚಲಾಯಿಸುತ್ತಿದ್ದದ್ದು ಮಹಮ್ಮದ್ ನಲಪಾಡ್ ಎಂದು ಸಾಬೀತಾದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸದಾಶಿವನಗರ ಸಂಚಾರಿ ಠಾಣೆ ಪೊಲೀಸರಿಂದ ನಲಪಾಡ್​ಗೆ ನೋಟಿಸ್ ಸಹ ಜಾರಿಗೊಳಿಸಿದ್ದಾರೆ.

Published On - 2:41 pm, Wed, 12 February 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!