Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸರ್ಕಾರಕ್ಕೆ ಸ್ವಾಭಿಮಾನ ಇದ್ದರೆ ಎಂಇಎಸ್ ನಿಷೇಧಿಸಲಿ; ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ಹೇಳಿಕೆ

ಪಾಕಿಸ್ತಾನದ ಗಡಿಯ ಹಾಗೆ ಬೆಳಗಾವಿಯಲ್ಲಿ ನಡೆದುಕೊಳ್ತಿದ್ದಾರೆ. ಬೆಳಗಾವಿಯಲ್ಲಿ ಎಮ್ಇಸಿ ಪುಂಡರು ಉಗ್ರರಂತೆ ನಡೆದುಕೊಳ್ಳುತ್ತಿದ್ದಾರೆ. ಬೆಳಗಾವಿ ಜಿಲ್ಲೆ ರಾಜಕಾರಣಿಗಳು ತೆವಲಿಗಾಗಿ ಸಹಿಸಿಕೊಂಡಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್​ನವರು ಎಮ್ಇಎಸ್ ಸಹಿಸಿಕೊಂಡಿದ್ದಾರೆ.

ಕರ್ನಾಟಕ ಸರ್ಕಾರಕ್ಕೆ ಸ್ವಾಭಿಮಾನ ಇದ್ದರೆ ಎಂಇಎಸ್ ನಿಷೇಧಿಸಲಿ; ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ಹೇಳಿಕೆ
ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ
Follow us
TV9 Web
| Updated By: sandhya thejappa

Updated on: Dec 18, 2021 | 2:38 PM

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಸ್ವಾಭಿಮಾನ ಇದ್ದರೆ ಎಂಇಎಸ್ ನಿಷೇಧಿಸಲಿ. ಎಂಇಎಸ್ ಗೂಂಡಾಗಿರಿ ಮಾಡುತ್ತಿದೆ, ದೌರ್ಜನ್ಯ ಮಾಡುತ್ತಿದೆ. ಎಂಇಎಸ್ ಪುಂಡರು ಕನ್ನಡಿಗರ ಸ್ವಾಭಿಮಾನ ಕೆರಳಿಸುತ್ತಿದ್ದಾರೆ. ಕನ್ನಡಿಗರ ಮನೆಗಳಿಗೆ ಬೆಂಕಿ ಹಚ್ಚಿ ಪುಂಡಾಟಿಕೆ ಮಾಡುತ್ತಿದ್ದಾರೆ. ಎಲ್ಲವನ್ನೂ ಸಹಿಸಿಕೊಂಡಿರುವ ಇದು ರಣಹೇಡಿ ಸರ್ಕಾರ. ಗೂಂಡಾ ಕಾಯ್ದೆಯಡಿ ಎಂಇಎಸ್ ಪುಂಡರನ್ನು ಬಂಧಿಸಬೇಕು ಅಂತ ಬೆಂಗಳೂರಿನಲ್ಲಿ ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ಆಗ್ರಹಿಸಿದ್ದಾರೆ.

ಪಾಕಿಸ್ತಾನದ ಗಡಿಯ ಹಾಗೆ ಬೆಳಗಾವಿಯಲ್ಲಿ ನಡೆದುಕೊಳ್ತಿದ್ದಾರೆ. ಬೆಳಗಾವಿಯಲ್ಲಿ ಎಮ್ಇಸಿ ಪುಂಡರು ಉಗ್ರರಂತೆ ನಡೆದುಕೊಳ್ಳುತ್ತಿದ್ದಾರೆ. ಬೆಳಗಾವಿ ಜಿಲ್ಲೆ ರಾಜಕಾರಣಿಗಳು ತೆವಲಿಗಾಗಿ ಸಹಿಸಿಕೊಂಡಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್​ನವರು ಎಮ್ಇಎಸ್ ಸಹಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಜಕೀಯ ನಾಯಕರು ರಣಹೇಡಿಗಳಾ? ಸೋಮವಾರ ಸದನದಲ್ಲಿ ಮಾತಾಡದಿದ್ದರೆ ಅವರು ರಣಹೇಡಿಗಳು ಅಂತ ನಾರಾಯಣಗೌಡ ಆಕ್ರೋಶ ಹೊರಹಾಕಿದ್ದಾರೆ.

ರಾಜಕಾರಣಿಗಳಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು. ಗೂಂಡಾಗಿರಿ ಮಾಡುವ ಎಂಇಎಸ್ ಹುಚ್ಚರಿಗೆ ಪಾಠ ಕಲಿಸಬೇಕು. ಎಂಇಎಸ್ ನಿಷೇಧದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ರಾಜ್ಯದಲ್ಲಿ ಕರವೇ ಬೃಹತ್ ಹೋರಾಟ ಮಾಡಲಿದೆ ಅಂತ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಬಾವುಟ ಸುಟ್ಟಿದ್ದು ಕ್ಷಮಿಸಲಾರದ ಅಪರಾಧ; ವಾಟಾಳ್ ನಾಗರಾಜ್ ಬೆಳಗಾವಿಯಲ್ಲಿ ಎಮ್ಇಎಸ್ ಪುಂಡಾಟ, ಗೂಂಡಾಗಿರಿ, ರೌಡಿತನ ಜಾಸ್ತಿಯಾಗಿದೆ. ಶಿವಸೇನೆ ಕನ್ನಡದ ಬಾವುಟ ಸುಟ್ಟಿದ್ದು ಕ್ಷಮಿಸಲಾರದ ಅಪರಾಧ. ಇದನ್ನು ಕನ್ನಡ ಚಳವಳಿ ವಾಟಾಳ್ ಪಕ್ಷ ತೀವ್ರವಾಗಿ ಖಂಡಿಸುತ್ತೆ. ಇಂದಿನಿಂದ ಎನ್ಇಎಸ್, ಶಿವಸೇನೆ ವಿರುದ್ಧ ರಾಜ್ಯಾದ್ಯಂತ ಹೋರಾಟ ಹೋರಾಟ ಮಾಡಲಿದೆ. ಕರ್ನಾಟಕ ಸರ್ಕಾರ ಬದುಕಿಲ್ಲ, ಸಂಪೂರ್ಣ ಹೋಗಿದೆ. ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು ಮಾತ್ರ ಉಳಿದಿವೆ. ನಾಳೆ ರಾಮನಗರದಲ್ಲಿ ಪ್ರತಿಭಟನೆ ಮಾಡುತ್ತೇವೆ. ಸೋಮವಾರ ಎನ್ಇಎಸ್ ವಿರುದ್ಧ ಕರಾಳ ದಿನಾಚರಣೆ ಮಾಡಲಾಗುತ್ತದೆ ಅಂತ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಇದನ್ನೂ ಓದಿ

ತಗ್ಗಿದ ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಕಲೆಕ್ಷನ್; ಬಾಕ್ಸ್​ ಆಫೀಸ್​ ಗಳಿಕೆ​ ಬಗ್ಗೆ ಇಲ್ಲಿದೆ ಮಾಹಿತಿ

ಸಚ್ಚಿದಾನಂದ ಆಶ್ರಮದಲ್ಲಿ ಕಾರ್ಯಸಿದ್ಧಿ ಹನುಮಾನ್ ದೇವಾಲಯ ಉದ್ಘಾಟನೆ ಮಾಡಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ

ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ