AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ

Bengaluru Rains: ಬೆಂಗಳೂರಿನಲ್ಲಿ ಇಂದು (ಮೇ 21) ಸಂಜೆ ಭಾರಿ ಗಾಳಿ ಮತ್ತು ಗುಡುಗು ಸಹಿತ ಭಾರೀ ಮಳೆ ಇಡೀ ರಾಜಧಾನಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ನಗರದ ರಸ್ತೆಗಳ ಮೇಲೆ ನೀರು ತುಂಬಿಕೊಂಡು ಟ್ರಾಫಿಕ್ ಜಾಮ್ ಉಂಟಾಗಿದ್ದರೆ, ಹಲವಡೆ ಮರಳು ಬಿದ್ದಿವೆ. ಇನ್ನು ಭಾರಿ ಗಾಳಿ ಮಳೆಯಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ
Namma Metro
ರಮೇಶ್ ಬಿ. ಜವಳಗೇರಾ
|

Updated on: May 21, 2026 | 9:56 PM

Share

ಬೆಂಗಳೂರು, (ಮೇ 21): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು  ಸುರಿದ ಮಳೆಯು (Bengaluru rainss) ನಮ್ಮ ಮೆಟ್ರೋ (Namma Metro) ಪ್ರಯಾಣಿಕರ ದೈನಂದಿನ ಸಂಚಾರವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಹೌದು… ಇಂದು (ಮೇ 21) ಸಂಜೆ ಭಾರೀ ಗಾಳಿ ಮಳೆಯಿಂದಾಗಿ ಬೆಂಗಳೂರು (Bengaluru) ಮೆಟ್ರೋ ರೈಲು ನಿಗಮ ವ್ಯಾಪ್ತಿಯ ಹಸಿರು ಮತ್ತು ನೇರಳೆ ಸೇರಿದಂತೆ ಎಲ್ಲಾ ಪ್ರಮುಖ ಮೆಟ್ರೋ ಮಾರ್ಗಗಳ ರೈಲು ಸೇವೆಗಳಲ್ಲಿ ವಿಳಂಬ ಉಂಟಾಗಿದೆ.  ಇದರಿಂದ ಪ್ರಯಾಣಿಕರು ಪರದಾಡುವಂತಾಗಿದ್ದು. ಈ ಬಗ್ಗೆ ಬಿಎಂಆರ್​​​​ಸಿಎಲ್  (BMRCL) ವಿಶೇಷ ಮನವಿ ಮಾಡಿಕೊಂಡಿದೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಭಾರಿ ಗಾಳಿ ಮಳೆಯಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
  • ಇಂದು ಸಂಜೆ ಸುರಿದ ಮಳೆಗೆ ಎಲ್ಲಾ ಮೆಟ್ರೋ ಮಾರ್ಗಗಳ ರೈಲು ಸಂಚಾರದಲ್ಲಿ ವ್ಯತ್ಯಯ
  • ಅನಾನುಕೂಲತೆಗೆ ವಿಷಾದಿಸ್ತೇವೆ ಎಂದ ಬಿಎಂಆರ್​ಸಿಎಲ್

ಬಿಎಂಆರ್​​ಸಿಎಲ್ ಮಾಧ್ಯಮ ಪ್ರಕಟಣೆ

ಘಟನೆಗೆ ಸಂಬಂಧಿಸಿದಂತೆ ತುರ್ತು ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್‌, ಭಾರೀ ಗಾಳಿ ಹಾಗೂ ಮಳೆಯಿಂದಾಗಿ ಎಲ್ಲಾ ಮೆಟ್ರೋ ಮಾರ್ಗಗಳ ಸೇವೆಯಲ್ಲಿ ವಿಳಂಬ ಉಂಟಾಗಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದೆ. ಈ ಅನಾನುಕೂಲತೆಗೆ ವಿಷಾಧಿಸುತ್ತೇವೆ. ಸುರಕ್ಷಿತವಾಗಿ ರೈಲುಗಳನ್ನು ಕಾರ್ಯಾಚರಣೆ ಮಾಡಬೇಕಿರುವುದರಿಂದ ವೇಳಾಪಟ್ಟಿಯಲ್ಲಿ ಕೊಂಚ ಏರುಪೇರಾಗಿದೆ. ಪರಿಸ್ಥಿತಿ ತಿಳಿಯಾಗುವವರೆಗೆ ಸಾರ್ವಜನಿಕರು ಮತ್ತು ಪ್ರಯಾಣಿಕರು ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ಕೋರಿದೆ.

ಮೇ 24ರಂದು 1 ಗಂಟೆ ಮುಂಚಿತವಾಗಿ ಮೆಟ್ರೋ ಸೇವೆ

ಇನ್ನು ಇದೇ ಮೇ 24ರಂದು ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿಯೇ ನಮ್ಮ ಮೆಟ್ರೋ ಸೇವೆ ಇರಲಿದೆ. ಭಾನುವಾರ ಯುಪಿಎಸ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಅನುಕೂಲಕ್ಕಾಗಿ ಒಂದು ಗಂಟೆ ಮುಂಚಿತವಾಗಿ ಮೆಟ್ರೋ ಸೇವೆ ಆರಂಭಿಸಲಾಗುತ್ತಿದೆ. ಬೆಳ್ಳಿಗ್ಗೆ 7 ಗಂಟೆ ಬದಲಾಗಿ 6 ಗಂಟೆಯಿಂದಲೇ ಮೆಟ್ರೋ ಕಾರ್ಯಾಚರಣೆ ಪ್ರಾರಂಭವಾಗಿದೆ.

ನೇರಳೆ ಮಾರ್ಗದ ವೈಟ್ ಫೀಲ್ಡ್ ಟು ಚೆಲ್ಲಘಟ್ಟ, ಹಸಿರು‌ ಮಾರ್ಗದ ಮಾದವಾರ ಟು ಚೆಲ್ಲಘಟ್ಟ, ಹಳದಿ‌ ಮಾರ್ಗದ ಆರ್ ವಿ ರೋಡ್ ಟು ಬೊಮ್ಮಸಂದ್ರ ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಭಾನುವಾರ ಆರು ಗಂಟೆಯಿಂದಲೇ ಮೆಟ್ರೋ ಸಂಚಾರ ಪ್ರಾರಂಭವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!