AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್, ಸೆಪ್ಟೆಂಬರ್ 6ರಿಂದ ಮೆಟ್ರೋ ಮಿತ್ರ ಆರಂಭ; ಹೇಗೆ ಕಾರ್ಯನಿರ್ವಹಿಸುತ್ತೆ? ಇಲ್ಲಿದೆ ವಿವರ

Metro Mitra; ಪ್ರಯಾಣಿಕರು ಒಮ್ಮೆ ಕ್ಯುಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದರೆ, ಅದು ಅವರನ್ನು ನಿಲ್ದಾಣದ 5 ​​ಕಿಮೀ ವ್ಯಾಪ್ತಿಯಲ್ಲಿರು ಪ್ರಮುಖ ಪ್ರದೇಶಗಳನ್ನು ಪಟ್ಟಿ ಮಾಡಲಾದ ಲಿಂಕ್‌ಗೆ ಕರೆದೊಯ್ಯುತ್ತದೆ. ಪ್ರಯಾಣಿಕರು ನಿರ್ದಿಷ್ಟ ಸ್ಥಳವನ್ನು ಆಯ್ಕೆ ಮಾಡಿದ ನಂತರ, ರೈಡ್ ಅನ್ನು ಬುಕ್ ಮಾಡಲು ಒಂದು-ಬಾರಿಯ ಪಾಸ್‌ವರ್ಡ್ ಅಥವಾ ಒಟಿಪಿಯನ್ನು ಕಳುಹಿಸಲಾಗುತ್ತದೆ. ಆಮೇಲೆ ಏನು ಮಾಡಬೇಕು? ಇಲ್ಲಿದೆ ವಿವರ

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್, ಸೆಪ್ಟೆಂಬರ್ 6ರಿಂದ ಮೆಟ್ರೋ ಮಿತ್ರ ಆರಂಭ; ಹೇಗೆ ಕಾರ್ಯನಿರ್ವಹಿಸುತ್ತೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Sep 04, 2023 | 3:42 PM

Share

ಬೆಂಗಳೂರು, ಸೆಪ್ಟೆಂಬರ್ 4: ನಮ್ಮ ಯಾತ್ರಿ ಅಪ್ಲಿಕೇಶನ್‌ನ ಯಶಸ್ಸಿನ ನಂತರ, ಆಟೋ ರಿಕ್ಷಾ ಚಾಲಕರ ಒಕ್ಕೂಟ (ARDU) ಇದೀಗ ಸೆಪ್ಟೆಂಬರ್ 6 ರಂದು ಮೆಟ್ರೋ ಮಿತ್ರವನ್ನು (Metro Mitra) ಪ್ರಾರಂಭಿಸಲು ಸಿದ್ಧವಾಗಿದೆ. ಇದು ಮೆಟ್ರೋ ನಿಲ್ದಾಣಗಳಿಂದ ಪ್ರಮುಖ ಪ್ರದೇಶಗಳಿಗೆ ಪ್ರಯಾಣಿಕರನ್ನು ಕರೆದೊಯ್ಯುವ ಗುರಿಯನ್ನು ಹೊಂದಿದೆ. ಈ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಗ್ರಾಹಕರು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವ ಅಗತ್ಯವಿಲ್ಲ. ಬದಲಿಗೆ, ಅವರು ಕೇವಲ ಕ್ಯುಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಸೇವೆಯನ್ನು ಪಡೆಯಬಹುದಾಗಿದೆ.

ಏನಿದು ಮೆಟ್ರೋ ಮಿತ್ರ?

ಇದು ನಗರದಾದ್ಯಂತ ಮೆಟ್ರೋ ನಿಲ್ದಾಣಗಳಿಂದ ಪ್ರಮುಖ ಪ್ರದೇಶಗಳಿಗೆ ಪ್ರಯಾಣಿಕರನ್ನು ಕರೆದೊಯ್ಯುವ ಗುರಿಯೊಂದಿಗೆ ಆಟೋ ರಿಕ್ಷಾ ಚಾಲಕರ ಒಕ್ಕೂಟ ಅಭಿವೃದ್ಧಿಪಡಿಸಿದ ಅಪ್ಲಿಕೇಶನ್ ಆಗಿದೆ. ಹಲವಾರು ಆಟೋ ಚಾಲಕರು ಕಡಿಮೆ ದೂರದ ಪ್ರಯಾಣದ ಬೇಡಿಕೆಯನ್ನು ನಿರಾಕರಿಸುತ್ತಾರೆ. ಇದರಿಂದ ಗ್ರಾಹಕರಿಗೆ ಮೆಟ್ರೋ ನಿಲ್ದಾಣವನ್ನು ತಲುಪುದು ಅಥವಾ ಮೆಟ್ರೋ ನಿಲ್ದಾಣದಿಂದ ಬೇರೆಡೆಗೆ ತೆರಳುವುದು ಸಮಸ್ಯೆಯಾಗುತ್ತಿದೆ. ಇದೀಗ ಮೆಟ್ರೋ ಮಿತ್ರ ತಂತ್ರಜ್ಞಾನವು ಸಮಸ್ಯೆಯನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ಮೆಟ್ರೋ ಮಿತ್ರ ಹೇಗೆ ಕೆಲಸ ಮಾಡುತ್ತದೆ?

ಮೆಟ್ರೋ ಮಿತ್ರದಲ್ಲಿ ಬಳಸಲಾದ ತಂತ್ರಜ್ಞಾನದ ಕಾರಣ ಗ್ರಾಹಕರು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವ ಅಗತ್ಯವಿಲ್ಲ. ಬದಲಾಗಿ, ಪ್ರಯಾಣಿಕರು ಆಟೋವನ್ನು ಬುಕ್ ಮಾಡಲು ಮೆಟ್ರೋ ನಿಲ್ದಾಣಗಳ ಹೊರಗೆ ಪ್ರದರ್ಶಿಸಲಾದ ಕ್ಯುಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಬಹುದು.

ಪ್ರಯಾಣಿಕರು ಒಮ್ಮೆ ಕ್ಯುಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದರೆ, ಅದು ಅವರನ್ನು ನಿಲ್ದಾಣದ 5 ​​ಕಿಮೀ ವ್ಯಾಪ್ತಿಯಲ್ಲಿರು ಪ್ರಮುಖ ಪ್ರದೇಶಗಳನ್ನು ಪಟ್ಟಿ ಮಾಡಲಾದ ಲಿಂಕ್‌ಗೆ ಕರೆದೊಯ್ಯುತ್ತದೆ. ಪ್ರಯಾಣಿಕರು ನಿರ್ದಿಷ್ಟ ಸ್ಥಳವನ್ನು ಆಯ್ಕೆ ಮಾಡಿದ ನಂತರ, ರೈಡ್ ಅನ್ನು ಬುಕ್ ಮಾಡಲು ಒಂದು-ಬಾರಿಯ ಪಾಸ್‌ವರ್ಡ್ ಅಥವಾ ಒಟಿಪಿಯನ್ನು ಕಳುಹಿಸಲಾಗುತ್ತದೆ. ಅಪ್ಲಿಕೇಶನ್ ಅನ್ನು ಸ್ಥಾಪಿಸಿದ ಆಟೋ ಚಾಲಕರಿಗೆ ಸಂದೇಶ ರವಾನೆಯಾಗುತ್ತದೆ. ನಂತರ ಅವರು ಪ್ರಯಾಣಿಕರನ್ನು ಕರೆದೊಯ್ಯಲು ಸ್ಥಳಕ್ಕೆ ಆಗಮಿಸುತ್ತಾರೆ.

ಸರ್ಕಾರ ನಿಗದಿಪಡಿಸಿದ ಮೀಟರ್ ದರದ ಪ್ರಕಾರ ಪ್ರಯಾಣಿಕರಿಗೆ ಶುಲ್ಕ ವಿಧಿಸಲಾಗುತ್ತದೆ. ತಂತ್ರಜ್ಞಾನದ ನಿರ್ವಹಣೆಗೆ ಹೆಚ್ಚುವರಿಯಾಗಿ 10 ರೂ. ವಿಧಿಸಲಾಗುತ್ತದೆ ಎಂದು ‘ನ್ಯೂಸ್ 9’ ವರದಿ ಮಾಡಿದೆ.

ಆರಂಭದಲ್ಲಿ, ಈ ಸೇವೆಯು ಮೆಟ್ರೋ ನಿಲ್ದಾಣಗಳಿಂದ ವಿವಿಧ ಸ್ಥಳಗಳಿಗೆ ಪ್ರಯಾಣಿಸಲು ಲಭ್ಯವಿರುತ್ತದೆ. ಮುಂದಿನ ಕೆಲವು ತಿಂಗಳುಗಳಲ್ಲಿ ಪ್ರಮುಖ ಸ್ಥಳಗಳಿಂದ ಮೆಟ್ರೋ ನಿಲ್ದಾಣಗಳಿಗೆ ಸೇವೆಯನ್ನು ಒದಗಿಸಲಾಗುವುದು ಎಂದು ಎಆರ್​ಡಿಯು ತಿಳಿಸಿದೆ.

ಇದನ್ನೂ ಓದಿ: ಮೆಟ್ರೋ ನಿಲ್ದಾಣದಲ್ಲಿನ ಅವ್ಯವಸ್ಥೆಯನ್ನು ಪರಿಹರಿಸಲು ಬಿಎಂಆರ್​ಸಿಎಲ್​​ನಿಂದ ವಿಶೇಷ ಕಾರ್ಯಾಚರಣೆ

‘ಮೆಟ್ರೋ ಮಿತ್ರ’ ಸೇವೆಗಳನ್ನು ತನ್ನ ವಾಟ್ಸಾಪ್ ಚಾಟ್‌ಬಾಕ್ಸ್‌ನೊಂದಿಗೆ ಸಂಯೋಜಿಸಲು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಜೊತೆಗೆ ಎಆರ್​ಡಿಯು ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಇದನ್ನು ಟಿಕೆಟ್‌ಗಳನ್ನು ಬುಕ್ ಮಾಡಲು ಬಳಸಲಾಗುತ್ತದೆ.

ಬೆಂಗಳೂರಿನ ಮೆಟ್ರೋ ರೈಲು ನಿಲ್ದಾಣಗಳ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಪ್ರಯಾಣಿಕರಿಗೆ ನೆರವಾಗುವ ಉದ್ದೇಶದೊಂದಿಗೆ ಈ ಯೋಜನೆ ಜಾರಿಗೆ ಎಆರ್​ಡಿಯು ಮುಂದಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ