AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ IPL 2024 ಪಂದ್ಯ: ಈ ನಾಲ್ಕು ದಿನ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ (IPL) ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ(Namma Metro) ಅವಧಿ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ IPL 2024 ಪಂದ್ಯ: ಈ ನಾಲ್ಕು ದಿನ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ
ನಮ್ಮ ಮೆಟ್ರೋ
Kiran Surya
| Edited By: |

Updated on: Apr 12, 2024 | 4:45 PM

Share

ಬೆಂಗಳೂರು, ಏ.12: ಈಗಾಗಲೇ ಐಪಿಎಲ್​ ಶುರುವಾಗಿದ್ದು, ಕ್ರಿಕೆಟ್​ ಪ್ರೇಮಿಗಳು ಸಂತಸದಲ್ಲಿದ್ದಾರೆ. ಅದರಂತೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ (IPL) ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ(Namma Metro) ಅವಧಿ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಆದೇಶ ಹೊರಡಿಸಿದೆ. ಪಂದ್ಯದ ವೇಳೆ ಮೆಟ್ರೋ ಸಂಚಾರದ ಅವಧಿಯನ್ನ ಮಧ್ಯರಾತ್ರಿ ಮಧ್ಯರಾತ್ರಿ 11.30 ವರೆಗೂ ವಿಸ್ತರಿಸಿದೆ.

ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ

ಇನ್ನು ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ ಕೂಡ ಲಭ್ಯವಿದ್ದು, ಪಂದ್ಯದ ವೇಳೆ ಮಧ್ಯಾಹ್ನ 2 ಗಂಟೆಯಿಂದ ಎಲ್ಲಾ ನಿಲ್ದಾಣಗಳಲ್ಲಿ 50 ರೂಪಾಯಿ ಪೇಪರ್ ಟಿಕೆಟ್ ಸಿಗಲಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್​ಗೆ ವ್ಯವಸ್ಥೆ ಮಾಡಲಾಗಿದೆ. ಪೇಪರ್ ಟಿಕೆಟ್ ಪಡೆದು ಎಲ್ಲಾ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ಇದೆ. ಆದರೆ, ಈ ಟಿಕೆಟ್ ರಾತ್ರಿ 8 ರಿಂದ ದಿನದ ಸೇವೆಗಳು ಕೊನೆಗೊಳ್ಳುವರೆಗೆ ಮಾತ್ರ ಮಾನ್ಯವಾಗಲಿದೆ.

ಇದನ್ನೂ ಓದಿ:ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಲೈವ್​ ಪಂದ್ಯ​ ನೋಡ್ತ​ ಬೆಟ್ಟಿಂಗ್, ಬುಕ್ಕಿಗಳ ಬಂಧನ

QR ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್​ಗಳು ಮತ್ತು NCMC ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್, ನಮ್ಮ ಮೆಟ್ರೋ ಆ್ಯಪ್, ಪೇಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ನಮ್ಮ ಮೆಟ್ರೋ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ