AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ IPL 2024 ಪಂದ್ಯ: ಈ ನಾಲ್ಕು ದಿನ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ (IPL) ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ(Namma Metro) ಅವಧಿ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ IPL 2024 ಪಂದ್ಯ: ಈ ನಾಲ್ಕು ದಿನ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ
ನಮ್ಮ ಮೆಟ್ರೋ
Kiran Surya
| Updated By: ಕಿರಣ್ ಹನುಮಂತ್​ ಮಾದಾರ್|

Updated on: Apr 12, 2024 | 4:45 PM

Share

ಬೆಂಗಳೂರು, ಏ.12: ಈಗಾಗಲೇ ಐಪಿಎಲ್​ ಶುರುವಾಗಿದ್ದು, ಕ್ರಿಕೆಟ್​ ಪ್ರೇಮಿಗಳು ಸಂತಸದಲ್ಲಿದ್ದಾರೆ. ಅದರಂತೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ (IPL) ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ(Namma Metro) ಅವಧಿ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಆದೇಶ ಹೊರಡಿಸಿದೆ. ಪಂದ್ಯದ ವೇಳೆ ಮೆಟ್ರೋ ಸಂಚಾರದ ಅವಧಿಯನ್ನ ಮಧ್ಯರಾತ್ರಿ ಮಧ್ಯರಾತ್ರಿ 11.30 ವರೆಗೂ ವಿಸ್ತರಿಸಿದೆ.

ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ

ಇನ್ನು ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ ಕೂಡ ಲಭ್ಯವಿದ್ದು, ಪಂದ್ಯದ ವೇಳೆ ಮಧ್ಯಾಹ್ನ 2 ಗಂಟೆಯಿಂದ ಎಲ್ಲಾ ನಿಲ್ದಾಣಗಳಲ್ಲಿ 50 ರೂಪಾಯಿ ಪೇಪರ್ ಟಿಕೆಟ್ ಸಿಗಲಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್​ಗೆ ವ್ಯವಸ್ಥೆ ಮಾಡಲಾಗಿದೆ. ಪೇಪರ್ ಟಿಕೆಟ್ ಪಡೆದು ಎಲ್ಲಾ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ಇದೆ. ಆದರೆ, ಈ ಟಿಕೆಟ್ ರಾತ್ರಿ 8 ರಿಂದ ದಿನದ ಸೇವೆಗಳು ಕೊನೆಗೊಳ್ಳುವರೆಗೆ ಮಾತ್ರ ಮಾನ್ಯವಾಗಲಿದೆ.

ಇದನ್ನೂ ಓದಿ:ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಲೈವ್​ ಪಂದ್ಯ​ ನೋಡ್ತ​ ಬೆಟ್ಟಿಂಗ್, ಬುಕ್ಕಿಗಳ ಬಂಧನ

QR ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್​ಗಳು ಮತ್ತು NCMC ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್, ನಮ್ಮ ಮೆಟ್ರೋ ಆ್ಯಪ್, ಪೇಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ನಮ್ಮ ಮೆಟ್ರೋ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!