AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಪಿಲ್ಲರ್​ ಬಿದ್ದು ತಾಯಿ ಮಗು ಸಾವು ಪ್ರಕರಣ: ಸರ್ಕಾರದ ಪರಿಹಾರ ತಿರಸ್ಕರಿಸಿದ ಕುಟುಂಬಸ್ಥರು

ಮೆಟ್ರೋ ಪಿಲ್ಲರ್ ಕುಸಿದು ತಾಯಿ‌ ಮಗು ಸಾವನ್ನಪ್ಪಿದ್ದು, ಈ ಕೃತ್ಯಕ್ಕೆ ಕಾರಣರಾದ ಕಂಟ್ರಾಕ್ಟರ್ ಮೇಲೇ ಇನ್ನು ಸೂಕ್ತ ಕ್ರಮ ಕೈಗೊಳ್ಳದ ಹಿನ್ನಲೆ ಪರಿಹಾರವನ್ನ ನಿರಾಕರಿಸಿದ್ದೇವೆ ಎಂದು ಮೃತರ ಪತಿ ಲೋಹಿತ್​ ಹೇಳಿದ್ದಾರೆ.

ಮೆಟ್ರೋ ಪಿಲ್ಲರ್​ ಬಿದ್ದು ತಾಯಿ ಮಗು ಸಾವು ಪ್ರಕರಣ: ಸರ್ಕಾರದ ಪರಿಹಾರ ತಿರಸ್ಕರಿಸಿದ ಕುಟುಂಬಸ್ಥರು
ಮೆಟ್ರೋ ಪಿಲ್ಲರ್​ ಕುಸಿದಿರುವುದು (ಎಡಚಿತ್ರ). ಮೃತ ತಾಯಿ ಮತ್ತು ಮಗು
TV9 Web
| Edited By: |

Updated on:Feb 08, 2023 | 3:43 PM

Share

ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ‌ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತ ನಡೆದು ಒಂದು ತಿಂಗಳಾಗುತ್ತಾ ಬಂದರೂ ಇನ್ನು ಕಂಟ್ರಾಕ್ಟರ್ ಮೇಲೇ ಸೂಕ್ತ ಕ್ರಮ ಕೈಗೊಂಡಿಲ್ಲ. ಇನ್ನೊಂದು ಕಡೆ ಸಿಎಂ ಕಡೆಯಿಂದ ಘೋಷಣೆಯಾದ 10 ಲಕ್ಷ ಪರಿಹಾರ ಕೂಡ ಕುಟುಂಬಸ್ಥರಿಗೆ ದಕ್ಕಿಲ್ಲ. ಇನ್ನು ಬಿಎಂಆರ್​ಸಿಎಲ್ 20 ಲಕ್ಷ ಪರಿಹಾರವನ್ನು ನೀಡುತ್ತಿದ್ದು ಅದನ್ನು ತಿರಸ್ಕರಿಸಿರುವ ಕುಟುಂಬಸ್ಥರು, ಮೊದಲು ಕಂಟ್ರಾಕ್ಟರ್ ಲೈಸೆನ್ಸ್ ರದ್ದು‌ಮಾಡಿ, ಇದುವರೆಗೆ ಕಂಟ್ರಾಕ್ಟರ್ ಹಾಗೂ ಬಿಎಂಆರ್​ಸಿಎಲ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಆಗಿಲ್ಲ. ನಮ್ಮ ಕುಟುಂಬದ ದುರಂತಕ್ಕೆ ಹೊಣೆಯಾದವರ ವಿರುದ್ಧ ಕ್ರಮ ಕೈಗೊಳ್ಳದೇ ಇದ್ರೆ ಪರಿಹಾರ ಬೇಕಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್ನೊಂದು ಕಡೆಯಲ್ಲಿ ಸಿಎಂ ಪರಿಹಾರದ ಬಗ್ಗೆ ನಮಗೆ ಗೊತ್ತಾಗಿದ್ದು, ಇದುವರೆಗೆ ಸಿಎಂ ಕಚೇರಿಯಿಂದ ನಮ್ಗೆ ಯಾರು ಕರೆ ಮಾಡಿಲ್ಲ. ಎಂದು ಲೋಹಿತ್ ಟಿವಿ9 ಗೆ ಮಾಹಿತಿ ನೀಡಿದ್ದಾರೆ.

ಈ ಮಧ್ಯೆ ಮೃತರ ಕುಟುಂಬಕ್ಕೆ 20 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದೆವು. ಈ ಬಗ್ಗೆ ಮೃತರ ಪತಿ ಲೋಹಿತ್ ಅವರಿಗೆ 10 ದಿನದ ಹಿಂದೆಯೇ ಪತ್ರ ಕಳುಹಿಸಿ ಯಾರಿಗೆ ಹಣ ನೀಡಬೇಕು ಎಂದುದ್ಳಿದೇವೆ. ಆದರೆ ಅವರು ಇಲ್ಲಿ ತನಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವರ ಪ್ರತಿಕ್ರಿಯೆ ಬಳಿಕ ಮುಂದಿನ ಪ್ರೋಷಿಜರ್​ಗಳನ್ನ ಕೈಗೊಳ್ಳುತ್ತೇವೆ. ಜೊತೆಗೆ ತಪ್ಪಾಗಿರುವ ಬಗ್ಗೆ ಕಾಂಟ್ರಾಕ್ಟರ್ ಮೇಲೆ ಕೈಗೊಳ್ಳಬೇಕಾದ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಎಂದು ಬಿಎಂಆರ್​ಸಿಎಲ್(BMRCL) ಎಂಡಿ ಅಂಜುಂ ಪರ್ವೇಜ್ ಹೇಳಿದ್ದಾರೆ.

ಲೋಹಿತ್ ಕೂಡ ಎಫ್ ಐ ಆರ್ ಹಾಕಿದ್ದಾರೆ. ಅದರಲ್ಲಿ ಎನ್ಸಿಸಿ ಮತ್ತು ಬಿಎಂಆರ್​ಸಿಎಲ್ ಇಬ್ಬರ ಮೇಲೂ ದೂರು ನೀಡಲಾಗಿದೆ. ಈ ಬಗ್ಗೆ ಕ್ರಿಮಿನಲ್ ಇನ್ವೆಸ್ಟಿಗೇಷನ್ ನಡೆಯುತ್ತಿದೆ. ನಾನು ಸ್ಟೇಟ್ಮೆಂಟ್ ಕೊಟ್ಟು ಬಂದಿದ್ದೀನಿ, ಎಲ್ಲವನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತಾರೆ. ಆಗ ನ್ಯಾಯಲಯ ಏನು ತೀರ್ಮಾನ ಮಾಡಲಿದೆ ಅದರಂತೆ ಕ್ರಮಗಳು ಆಗಲಿದೆ ಎಂದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:11 pm, Wed, 8 February 23

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ