AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​ನ್ಯೂಸ್: ನಿಮ್ಮ ಸೇವೆಗೆ ಬರಲಿದೆ ‘ಮೆಟ್ರೋಮಿತ್ರಾ’

ಬೆಂಗಳೂರಿನ ಮೆಟ್ರೋ ನಿಲ್ದಾಣಗಳ ಬಳಿ ಶೀಘ್ರವೇ ಮೀಟರ್‌ ಚಾಲಿತ ‘ಮೆಟ್ರೋಮಿತ್ರ’ ಆ್ಯಪ್‌ ಆಧಾರಿತ ಆಟೋರಿಕ್ಷಾ ಸೇವೆ ಶುರುವಾಗಲಿದೆ. ಇದರ ದರವೆಷ್ಟು? ಎನ್ನುವ ಮಾಹಿತಿ ಇಲ್ಲಿದೆ.

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​ನ್ಯೂಸ್: ನಿಮ್ಮ ಸೇವೆಗೆ ಬರಲಿದೆ ‘ಮೆಟ್ರೋಮಿತ್ರಾ’
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)
ರಮೇಶ್ ಬಿ. ಜವಳಗೇರಾ
|

Updated on: Jul 14, 2023 | 12:45 PM

Share

ಬೆಂಗಳೂರು (ಜು.14): ಬೆಂಗಳೂರು ಮಹಾನಗರದ ಜನರ ಪ್ರಮುಖ ಸಂಚಾರಿ ಕೊಂಡಿಯಾಗಿರುವ ನಮ್ಮ ಮೆಟ್ರೋ (Namma Metro) ನಿಲ್ದಾಣಗಳ ಬಳಿ ಶೀಘ್ರವೇ ಮೀಟರ್‌ ಚಾಲಿತ ‘ಮೆಟ್ರೋಮಿತ್ರಾ’ (MetroMitra) ಆ್ಯಪ್‌ ಆಧಾರಿತ ಆಟೋರಿಕ್ಷಾ ಸೇವೆ ಆರಂಭವಾಗಲಿದೆ. ಈ ಬಗ್ಗೆ ಆಟೋ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಅವರು ಮಾಹಿತಿ ನೀಡಿದ್ದಾರೆ. ಇದರಿಂದ ಬೆಂಗಳೂರಿಗರಿಗೆ ಮೆಟ್ರೋ ನಿಲ್ದಾಣಗಳ ಆರಂಭದಿಂದ ಕೊನೆವರೆಗೂ ಈ ‘ಮೆಟ್ರೋಮಿತ್ರ’ ಸೇವೆ ಲಭ್ಯವಾಗಲಿದೆ. ಅಲ್ಲದೇ ಮೆಟ್ರೋ ಇಳಿದ ತಕ್ಷಣ ಬೇರೋಂದು ಆಟೋಗೆ ಕಾಯುವುದು ಹಾಗೂ ಬುಕಿಂಗ್ ಮಾಡುತ್ತ ನಿಲ್ಲುವ ತಾಪತ್ರಯ ಇರುವುದಿಲ್ಲ.

ಮೆಟ್ರೋಮಿತ್ರಾ (Metro Mitra) ಎಂಬ ಆ್ಯಪ್‌ ಆಧಾರಿತ ಸೇವೆಗೆ ಪ್ರಾಯೋಗಿಕವಾಗಿ ಆ.15ರಂದು ಚಾಲನೆ ಸಿಗಲಿದ್ದು, ಓಪನ್-ಮೊಬಿಲಿಟಿ ನೆಟ್‌ವರ್ಕ್” ನಲ್ಲಿ ವಿನ್ಯಾಸಗೊಳಿಸಲಾದ ನಮ್ಮ ಯಾತ್ರಿಗಿಂತ ಭಿನ್ನವಾಗಿ, ಮೆಟ್ರೋ ಮಿತ್ರ ಡಿಜಿಟಲ್ ವಾಣಿಜ್ಯಕ್ಕಾಗಿ (ONDC) ಓಪನ್ ನೆಟ್‌ವರ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಮೆಟ್ರೋ ಮಿತ್ರಕ್ಕೆ ಮೀಟರ್ ದರ ನಿಗದಿಪಡಿಸಲಾಗಿದೆ. ಮೊದಲ ಎರಡು ಕಿಲೋಮೀಟರ್‌ಗಳಿಗೆ 30 ರೂ. ಮತ್ತು ನಂತರದ ಪ್ರತಿ ಕಿಲೋಮೀಟರ್‌ಗೆ 15 ರೂ. ಜೊತೆಗೆ 10 ರೂ. ಇತರೆ ಚಾರ್ಜಸ್​ಗೆ ಎಂದು ದರ ನಿಗದಿಪಡಿಸಲಾಗಿದೆ.

ಗುರುವಾರ ಬಿ.ಪ್ಯಾಕ್‌ ಮತ್ತು ಡಬ್ಲ್ಯೂಆರ್‌ಐ ಇಂಡಿಯಾ ಸಂಸ್ಥೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಟೋ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ, ಆ.15 ರಂದು ಮೆಟ್ರೋಮಿತ್ರಾ ಎಂಬ ಆ್ಯಪ್‌ ಆಧಾರಿತ ಸೇವೆಯನ್ನು ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು. ಆಟೋ ಚಾಲಕರನ್ನು ಮತ್ತಷ್ಟು ವೃತ್ತಿಪರರಾಗಿ ರೂಪಿಸಲು ಸಂಸ್ಥೆಯಿಂದ ತರಬೇತಿ ನೀಡಲಾಗುತ್ತಿದೆ. ಇದರಡಿ ತಂತ್ರಜ್ಞಾನ ಆಧಾರಿತ ಸೇವೆ ಮತ್ತು ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ವೆಚ್ಚ ಸರಿದೂಗಿಸಲು ಮೀಟರ್‌ ದರ ಜತೆಗೆ ಹೆಚ್ಚುವರಿಯಾಗಿ 10 ರೂಪಾಯಿ ಶುಲ್ಕವನ್ನು ಪಡೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!