AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​ನ್ಯೂಸ್: ನಿಮ್ಮ ಸೇವೆಗೆ ಬರಲಿದೆ ‘ಮೆಟ್ರೋಮಿತ್ರಾ’

ಬೆಂಗಳೂರಿನ ಮೆಟ್ರೋ ನಿಲ್ದಾಣಗಳ ಬಳಿ ಶೀಘ್ರವೇ ಮೀಟರ್‌ ಚಾಲಿತ ‘ಮೆಟ್ರೋಮಿತ್ರ’ ಆ್ಯಪ್‌ ಆಧಾರಿತ ಆಟೋರಿಕ್ಷಾ ಸೇವೆ ಶುರುವಾಗಲಿದೆ. ಇದರ ದರವೆಷ್ಟು? ಎನ್ನುವ ಮಾಹಿತಿ ಇಲ್ಲಿದೆ.

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​ನ್ಯೂಸ್: ನಿಮ್ಮ ಸೇವೆಗೆ ಬರಲಿದೆ ‘ಮೆಟ್ರೋಮಿತ್ರಾ’
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)
ರಮೇಶ್ ಬಿ. ಜವಳಗೇರಾ
|

Updated on: Jul 14, 2023 | 12:45 PM

Share

ಬೆಂಗಳೂರು (ಜು.14): ಬೆಂಗಳೂರು ಮಹಾನಗರದ ಜನರ ಪ್ರಮುಖ ಸಂಚಾರಿ ಕೊಂಡಿಯಾಗಿರುವ ನಮ್ಮ ಮೆಟ್ರೋ (Namma Metro) ನಿಲ್ದಾಣಗಳ ಬಳಿ ಶೀಘ್ರವೇ ಮೀಟರ್‌ ಚಾಲಿತ ‘ಮೆಟ್ರೋಮಿತ್ರಾ’ (MetroMitra) ಆ್ಯಪ್‌ ಆಧಾರಿತ ಆಟೋರಿಕ್ಷಾ ಸೇವೆ ಆರಂಭವಾಗಲಿದೆ. ಈ ಬಗ್ಗೆ ಆಟೋ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಅವರು ಮಾಹಿತಿ ನೀಡಿದ್ದಾರೆ. ಇದರಿಂದ ಬೆಂಗಳೂರಿಗರಿಗೆ ಮೆಟ್ರೋ ನಿಲ್ದಾಣಗಳ ಆರಂಭದಿಂದ ಕೊನೆವರೆಗೂ ಈ ‘ಮೆಟ್ರೋಮಿತ್ರ’ ಸೇವೆ ಲಭ್ಯವಾಗಲಿದೆ. ಅಲ್ಲದೇ ಮೆಟ್ರೋ ಇಳಿದ ತಕ್ಷಣ ಬೇರೋಂದು ಆಟೋಗೆ ಕಾಯುವುದು ಹಾಗೂ ಬುಕಿಂಗ್ ಮಾಡುತ್ತ ನಿಲ್ಲುವ ತಾಪತ್ರಯ ಇರುವುದಿಲ್ಲ.

ಮೆಟ್ರೋಮಿತ್ರಾ (Metro Mitra) ಎಂಬ ಆ್ಯಪ್‌ ಆಧಾರಿತ ಸೇವೆಗೆ ಪ್ರಾಯೋಗಿಕವಾಗಿ ಆ.15ರಂದು ಚಾಲನೆ ಸಿಗಲಿದ್ದು, ಓಪನ್-ಮೊಬಿಲಿಟಿ ನೆಟ್‌ವರ್ಕ್” ನಲ್ಲಿ ವಿನ್ಯಾಸಗೊಳಿಸಲಾದ ನಮ್ಮ ಯಾತ್ರಿಗಿಂತ ಭಿನ್ನವಾಗಿ, ಮೆಟ್ರೋ ಮಿತ್ರ ಡಿಜಿಟಲ್ ವಾಣಿಜ್ಯಕ್ಕಾಗಿ (ONDC) ಓಪನ್ ನೆಟ್‌ವರ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಮೆಟ್ರೋ ಮಿತ್ರಕ್ಕೆ ಮೀಟರ್ ದರ ನಿಗದಿಪಡಿಸಲಾಗಿದೆ. ಮೊದಲ ಎರಡು ಕಿಲೋಮೀಟರ್‌ಗಳಿಗೆ 30 ರೂ. ಮತ್ತು ನಂತರದ ಪ್ರತಿ ಕಿಲೋಮೀಟರ್‌ಗೆ 15 ರೂ. ಜೊತೆಗೆ 10 ರೂ. ಇತರೆ ಚಾರ್ಜಸ್​ಗೆ ಎಂದು ದರ ನಿಗದಿಪಡಿಸಲಾಗಿದೆ.

ಗುರುವಾರ ಬಿ.ಪ್ಯಾಕ್‌ ಮತ್ತು ಡಬ್ಲ್ಯೂಆರ್‌ಐ ಇಂಡಿಯಾ ಸಂಸ್ಥೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಟೋ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ, ಆ.15 ರಂದು ಮೆಟ್ರೋಮಿತ್ರಾ ಎಂಬ ಆ್ಯಪ್‌ ಆಧಾರಿತ ಸೇವೆಯನ್ನು ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು. ಆಟೋ ಚಾಲಕರನ್ನು ಮತ್ತಷ್ಟು ವೃತ್ತಿಪರರಾಗಿ ರೂಪಿಸಲು ಸಂಸ್ಥೆಯಿಂದ ತರಬೇತಿ ನೀಡಲಾಗುತ್ತಿದೆ. ಇದರಡಿ ತಂತ್ರಜ್ಞಾನ ಆಧಾರಿತ ಸೇವೆ ಮತ್ತು ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ವೆಚ್ಚ ಸರಿದೂಗಿಸಲು ಮೀಟರ್‌ ದರ ಜತೆಗೆ ಹೆಚ್ಚುವರಿಯಾಗಿ 10 ರೂಪಾಯಿ ಶುಲ್ಕವನ್ನು ಪಡೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ