ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​ನ್ಯೂಸ್: ನಿಮ್ಮ ಸೇವೆಗೆ ಬರಲಿದೆ ‘ಮೆಟ್ರೋಮಿತ್ರಾ’

ಬೆಂಗಳೂರಿನ ಮೆಟ್ರೋ ನಿಲ್ದಾಣಗಳ ಬಳಿ ಶೀಘ್ರವೇ ಮೀಟರ್‌ ಚಾಲಿತ ‘ಮೆಟ್ರೋಮಿತ್ರ’ ಆ್ಯಪ್‌ ಆಧಾರಿತ ಆಟೋರಿಕ್ಷಾ ಸೇವೆ ಶುರುವಾಗಲಿದೆ. ಇದರ ದರವೆಷ್ಟು? ಎನ್ನುವ ಮಾಹಿತಿ ಇಲ್ಲಿದೆ.

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​ನ್ಯೂಸ್: ನಿಮ್ಮ ಸೇವೆಗೆ ಬರಲಿದೆ ‘ಮೆಟ್ರೋಮಿತ್ರಾ’
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)
Follow us
|

Updated on: Jul 14, 2023 | 12:45 PM

ಬೆಂಗಳೂರು (ಜು.14): ಬೆಂಗಳೂರು ಮಹಾನಗರದ ಜನರ ಪ್ರಮುಖ ಸಂಚಾರಿ ಕೊಂಡಿಯಾಗಿರುವ ನಮ್ಮ ಮೆಟ್ರೋ (Namma Metro) ನಿಲ್ದಾಣಗಳ ಬಳಿ ಶೀಘ್ರವೇ ಮೀಟರ್‌ ಚಾಲಿತ ‘ಮೆಟ್ರೋಮಿತ್ರಾ’ (MetroMitra) ಆ್ಯಪ್‌ ಆಧಾರಿತ ಆಟೋರಿಕ್ಷಾ ಸೇವೆ ಆರಂಭವಾಗಲಿದೆ. ಈ ಬಗ್ಗೆ ಆಟೋ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಅವರು ಮಾಹಿತಿ ನೀಡಿದ್ದಾರೆ. ಇದರಿಂದ ಬೆಂಗಳೂರಿಗರಿಗೆ ಮೆಟ್ರೋ ನಿಲ್ದಾಣಗಳ ಆರಂಭದಿಂದ ಕೊನೆವರೆಗೂ ಈ ‘ಮೆಟ್ರೋಮಿತ್ರ’ ಸೇವೆ ಲಭ್ಯವಾಗಲಿದೆ. ಅಲ್ಲದೇ ಮೆಟ್ರೋ ಇಳಿದ ತಕ್ಷಣ ಬೇರೋಂದು ಆಟೋಗೆ ಕಾಯುವುದು ಹಾಗೂ ಬುಕಿಂಗ್ ಮಾಡುತ್ತ ನಿಲ್ಲುವ ತಾಪತ್ರಯ ಇರುವುದಿಲ್ಲ.

ಮೆಟ್ರೋಮಿತ್ರಾ (Metro Mitra) ಎಂಬ ಆ್ಯಪ್‌ ಆಧಾರಿತ ಸೇವೆಗೆ ಪ್ರಾಯೋಗಿಕವಾಗಿ ಆ.15ರಂದು ಚಾಲನೆ ಸಿಗಲಿದ್ದು, ಓಪನ್-ಮೊಬಿಲಿಟಿ ನೆಟ್‌ವರ್ಕ್” ನಲ್ಲಿ ವಿನ್ಯಾಸಗೊಳಿಸಲಾದ ನಮ್ಮ ಯಾತ್ರಿಗಿಂತ ಭಿನ್ನವಾಗಿ, ಮೆಟ್ರೋ ಮಿತ್ರ ಡಿಜಿಟಲ್ ವಾಣಿಜ್ಯಕ್ಕಾಗಿ (ONDC) ಓಪನ್ ನೆಟ್‌ವರ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಮೆಟ್ರೋ ಮಿತ್ರಕ್ಕೆ ಮೀಟರ್ ದರ ನಿಗದಿಪಡಿಸಲಾಗಿದೆ. ಮೊದಲ ಎರಡು ಕಿಲೋಮೀಟರ್‌ಗಳಿಗೆ 30 ರೂ. ಮತ್ತು ನಂತರದ ಪ್ರತಿ ಕಿಲೋಮೀಟರ್‌ಗೆ 15 ರೂ. ಜೊತೆಗೆ 10 ರೂ. ಇತರೆ ಚಾರ್ಜಸ್​ಗೆ ಎಂದು ದರ ನಿಗದಿಪಡಿಸಲಾಗಿದೆ.

ಗುರುವಾರ ಬಿ.ಪ್ಯಾಕ್‌ ಮತ್ತು ಡಬ್ಲ್ಯೂಆರ್‌ಐ ಇಂಡಿಯಾ ಸಂಸ್ಥೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಟೋ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ, ಆ.15 ರಂದು ಮೆಟ್ರೋಮಿತ್ರಾ ಎಂಬ ಆ್ಯಪ್‌ ಆಧಾರಿತ ಸೇವೆಯನ್ನು ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು. ಆಟೋ ಚಾಲಕರನ್ನು ಮತ್ತಷ್ಟು ವೃತ್ತಿಪರರಾಗಿ ರೂಪಿಸಲು ಸಂಸ್ಥೆಯಿಂದ ತರಬೇತಿ ನೀಡಲಾಗುತ್ತಿದೆ. ಇದರಡಿ ತಂತ್ರಜ್ಞಾನ ಆಧಾರಿತ ಸೇವೆ ಮತ್ತು ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ವೆಚ್ಚ ಸರಿದೂಗಿಸಲು ಮೀಟರ್‌ ದರ ಜತೆಗೆ ಹೆಚ್ಚುವರಿಯಾಗಿ 10 ರೂಪಾಯಿ ಶುಲ್ಕವನ್ನು ಪಡೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ