AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​ನ್ಯೂಸ್: ನಿಮ್ಮ ಸೇವೆಗೆ ಬರಲಿದೆ ‘ಮೆಟ್ರೋಮಿತ್ರಾ’

ಬೆಂಗಳೂರಿನ ಮೆಟ್ರೋ ನಿಲ್ದಾಣಗಳ ಬಳಿ ಶೀಘ್ರವೇ ಮೀಟರ್‌ ಚಾಲಿತ ‘ಮೆಟ್ರೋಮಿತ್ರ’ ಆ್ಯಪ್‌ ಆಧಾರಿತ ಆಟೋರಿಕ್ಷಾ ಸೇವೆ ಶುರುವಾಗಲಿದೆ. ಇದರ ದರವೆಷ್ಟು? ಎನ್ನುವ ಮಾಹಿತಿ ಇಲ್ಲಿದೆ.

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​ನ್ಯೂಸ್: ನಿಮ್ಮ ಸೇವೆಗೆ ಬರಲಿದೆ ‘ಮೆಟ್ರೋಮಿತ್ರಾ’
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)
ರಮೇಶ್ ಬಿ. ಜವಳಗೇರಾ
|

Updated on: Jul 14, 2023 | 12:45 PM

Share

ಬೆಂಗಳೂರು (ಜು.14): ಬೆಂಗಳೂರು ಮಹಾನಗರದ ಜನರ ಪ್ರಮುಖ ಸಂಚಾರಿ ಕೊಂಡಿಯಾಗಿರುವ ನಮ್ಮ ಮೆಟ್ರೋ (Namma Metro) ನಿಲ್ದಾಣಗಳ ಬಳಿ ಶೀಘ್ರವೇ ಮೀಟರ್‌ ಚಾಲಿತ ‘ಮೆಟ್ರೋಮಿತ್ರಾ’ (MetroMitra) ಆ್ಯಪ್‌ ಆಧಾರಿತ ಆಟೋರಿಕ್ಷಾ ಸೇವೆ ಆರಂಭವಾಗಲಿದೆ. ಈ ಬಗ್ಗೆ ಆಟೋ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಅವರು ಮಾಹಿತಿ ನೀಡಿದ್ದಾರೆ. ಇದರಿಂದ ಬೆಂಗಳೂರಿಗರಿಗೆ ಮೆಟ್ರೋ ನಿಲ್ದಾಣಗಳ ಆರಂಭದಿಂದ ಕೊನೆವರೆಗೂ ಈ ‘ಮೆಟ್ರೋಮಿತ್ರ’ ಸೇವೆ ಲಭ್ಯವಾಗಲಿದೆ. ಅಲ್ಲದೇ ಮೆಟ್ರೋ ಇಳಿದ ತಕ್ಷಣ ಬೇರೋಂದು ಆಟೋಗೆ ಕಾಯುವುದು ಹಾಗೂ ಬುಕಿಂಗ್ ಮಾಡುತ್ತ ನಿಲ್ಲುವ ತಾಪತ್ರಯ ಇರುವುದಿಲ್ಲ.

ಮೆಟ್ರೋಮಿತ್ರಾ (Metro Mitra) ಎಂಬ ಆ್ಯಪ್‌ ಆಧಾರಿತ ಸೇವೆಗೆ ಪ್ರಾಯೋಗಿಕವಾಗಿ ಆ.15ರಂದು ಚಾಲನೆ ಸಿಗಲಿದ್ದು, ಓಪನ್-ಮೊಬಿಲಿಟಿ ನೆಟ್‌ವರ್ಕ್” ನಲ್ಲಿ ವಿನ್ಯಾಸಗೊಳಿಸಲಾದ ನಮ್ಮ ಯಾತ್ರಿಗಿಂತ ಭಿನ್ನವಾಗಿ, ಮೆಟ್ರೋ ಮಿತ್ರ ಡಿಜಿಟಲ್ ವಾಣಿಜ್ಯಕ್ಕಾಗಿ (ONDC) ಓಪನ್ ನೆಟ್‌ವರ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಮೆಟ್ರೋ ಮಿತ್ರಕ್ಕೆ ಮೀಟರ್ ದರ ನಿಗದಿಪಡಿಸಲಾಗಿದೆ. ಮೊದಲ ಎರಡು ಕಿಲೋಮೀಟರ್‌ಗಳಿಗೆ 30 ರೂ. ಮತ್ತು ನಂತರದ ಪ್ರತಿ ಕಿಲೋಮೀಟರ್‌ಗೆ 15 ರೂ. ಜೊತೆಗೆ 10 ರೂ. ಇತರೆ ಚಾರ್ಜಸ್​ಗೆ ಎಂದು ದರ ನಿಗದಿಪಡಿಸಲಾಗಿದೆ.

ಗುರುವಾರ ಬಿ.ಪ್ಯಾಕ್‌ ಮತ್ತು ಡಬ್ಲ್ಯೂಆರ್‌ಐ ಇಂಡಿಯಾ ಸಂಸ್ಥೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಟೋ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ, ಆ.15 ರಂದು ಮೆಟ್ರೋಮಿತ್ರಾ ಎಂಬ ಆ್ಯಪ್‌ ಆಧಾರಿತ ಸೇವೆಯನ್ನು ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು. ಆಟೋ ಚಾಲಕರನ್ನು ಮತ್ತಷ್ಟು ವೃತ್ತಿಪರರಾಗಿ ರೂಪಿಸಲು ಸಂಸ್ಥೆಯಿಂದ ತರಬೇತಿ ನೀಡಲಾಗುತ್ತಿದೆ. ಇದರಡಿ ತಂತ್ರಜ್ಞಾನ ಆಧಾರಿತ ಸೇವೆ ಮತ್ತು ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ವೆಚ್ಚ ಸರಿದೂಗಿಸಲು ಮೀಟರ್‌ ದರ ಜತೆಗೆ ಹೆಚ್ಚುವರಿಯಾಗಿ 10 ರೂಪಾಯಿ ಶುಲ್ಕವನ್ನು ಪಡೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ