AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Micro Labs: ಡೋಲೋ 650 ಖ್ಯಾತಿಯ ಮೈಕ್ರೋ ಲ್ಯಾಬ್ಸ್​ ಮೇಲೆ ಬೆಂಗಳೂರು ಸೇರಿ 40 ಕಡೆ ಐಟಿ ದಾಳಿ

ಮೈಕ್ರೋ ಲ್ಯಾಬ್ಸ್ ಸಿಎಂಡಿ ದಿಲೀಪ್ ಸುರಾನ, ಮೈಕ್ರೋ ಲ್ಯಾಬ್ಸ್ ನಿರ್ದೇಶಕ ಆನಂದ್ ಸುರಾನ ಮನೆ ಮೇಲೆ ದಾಳಿ ನಡೆಸಲಾಗಿದೆ.

Micro Labs: ಡೋಲೋ 650 ಖ್ಯಾತಿಯ ಮೈಕ್ರೋ ಲ್ಯಾಬ್ಸ್​ ಮೇಲೆ ಬೆಂಗಳೂರು ಸೇರಿ 40 ಕಡೆ ಐಟಿ ದಾಳಿ
ಮೈಕ್ರೋ ಲ್ಯಾಬ್ಸ್​
TV9 Web
| Edited By: |

Updated on:Jul 06, 2022 | 11:35 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಡೋಲೋ-650 (Dolo 650) ತಯಾರಿಕಾ ಸಂಸ್ಥೆಯಾದ ಮೈಕ್ರೋ ಲ್ಯಾಬ್ಸ್ ಲಿಮಿಟೆಡ್ (Micro Labs Ltd) ಮೇಲೆ ಐಟಿ ದಾಳಿ ನಡೆದಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಇಂದು ಬೆಳಗ್ಗೆ 7.45ರ ಸುಮಾರಿಗೆ 20ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಮೈಕ್ರೋ ಲ್ಯಾಬ್ಸ್ ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿದೆ.

ಏಕಕಾಲಕ್ಕೆ 40 ಕಡೆಗಳಲ್ಲಿ 200 ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ. ಆದಾಯ ತೆರಿಗೆ ವಂಚನೆ ಆರೋಪದಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ. ಮೈಕ್ರೋ ಲ್ಯಾಬ್ಸ್ ಸಿಎಂಡಿ ದಿಲೀಪ್ ಸುರಾನ, ಮೈಕ್ರೋ ಲ್ಯಾಬ್ಸ್ ನಿರ್ದೇಶಕ ಆನಂದ್ ಸುರಾನ ಮನೆ ಮೇಲೆ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ! ಘೋಷಿತ ಆಸ್ತಿಯೇ 1,741 ಕೋಟಿ ರೂ.

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರೋ ಕಚೇರಿ ಮೇಲೆ ದಾಳಿ ನಡೆದಿದ್ದು, ಬೆಂಗಳೂರು ಸೇರಿ ದೇಶಾದ್ಯಂತ ಏಕಕಾಲದಲ್ಲಿ IT ಕಾರ್ಯಾಚರಣೆ ನಡೆಸಲಾಗುತ್ತಿದೆ. ಮೈಕ್ರೋ ಲ್ಯಾಬ್ಸ್ ಕಂಪನಿ ಫ್ಯಾಕ್ಟರಿ, ಕಚೇರಿ ಮೇಲೆ ಐಟಿ ದಾಳಿ ನಡೆಸಲಾಗಿದೆ. ಕಚೇರಿ ಹಾಗೂ ಸಿಬ್ಬಂದಿ ಮನೆಯ ಮೇಲೆ ಕೂಡ ಐಟಿ ಕಾರ್ಯಾಚರಣೆ ನಡೆಯುತ್ತಿದೆ. ಬೆಂಗಳೂರು ಮಾತ್ರವಲ್ಲದೆ ದೆಹಲಿ, ಸಿಕ್ಕಿಂ, ಪಂಜಾಬ್, ಗೋವಾ, ತಮಿಳುನಾಡು ಸೇರಿ ಏಕಕಾಲಕ್ಕೆ 40 ಕಡೆಗಳಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

Published On - 11:33 am, Wed, 6 July 22

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?