AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಕಿರಿಕಿರಿ, ದುಬಾರಿ ಬಾಡಿಗೆ ಇದ್ರೂ ಬೆಂಗಳೂರು ಬಿಡಲ್ಲ ಜನ! ಬಿಹಾರಿ ಯುವಕನ ವಿಡಿಯೋ ವೈರಲ್

ಟ್ರಾಫಿಕ್ ಕಿರಿಕಿರಿ ಮತ್ತು ದುಬಾರಿ ಮನೆ ಬಾಡಿಗೆ ಇದ್ದರೂ ಜನ ಯಾಕೆ ಬೆಂಗಳೂರು ಬಿಟ್ಟು ಹೋಗುವುದಿಲ್ಲ ಎಂದು ಬಿಹಾರ ಮೂಲದ ಯುವಕನೊಬ್ಬ ವಿವರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸಂಬಳದ ಅರ್ಧ ಭಾಗ ಬಾಡಿಗೆಗೆ ಹೋದರೂ ಇಲ್ಲಿನ ಅದ್ಭುತ ಹವಾಮಾನ ಜನರನ್ನು ಸೆರೆಯಾಗಿಸಿದೆ ಎಂಬ ಈ ವಿಡಿಯೋಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಟ್ರಾಫಿಕ್ ಕಿರಿಕಿರಿ, ದುಬಾರಿ ಬಾಡಿಗೆ ಇದ್ರೂ ಬೆಂಗಳೂರು ಬಿಡಲ್ಲ ಜನ! ಬಿಹಾರಿ ಯುವಕನ ವಿಡಿಯೋ ವೈರಲ್
ವೈರಲ್ ವೀಡಿಯೋದ ದೃಶ್ಯಗಳು
ಭಾವನಾ ಹೆಗಡೆ
|

Updated on: May 30, 2026 | 12:19 PM

Share

ಬೆಂಗಳೂರು, ಮೇ 30: ಟ್ರಾಫಿಕ್ ಕಿರಿಕಿರಿ, ದುಬಾರಿ ಮನೆ ಬಾಡಿಗೆ ಹಾಗೂ ಒಂಟಿತನ ಕಾಡುತ್ತಿದ್ದರೂ ಸಹ ಜನ ಯಾಕೆ ಬೆಂಗಳೂರು (Bengaluru) ಬಿಟ್ಟು ಹೋಗಲು ಇಷ್ಟಪಡುವುದಿಲ್ಲ ಎಂಬುದನ್ನು ಬಿಹಾರ ಮೂಲದ ಯುವಕನೊಬ್ಬ ವಿವರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಮುಖ್ಯಾಂಶಗಳು

  • ಟ್ರಾಫಿಕ್ ಹಾಗೂ ದುಬಾರಿ ಬಾಡಿಗೆ ಇದ್ದರೂ ಬೆಂಗಳೂರು ಬಿಡಲು ಜನ ಒಪ್ಪುತ್ತಿಲ್ಲ.
  • ಸಿಲಿಕಾನ್ ಸಿಟಿಯ ಅದ್ಭುತ ಹವಾಮಾನವೇ ವಲಸಿಗರನ್ನು ಸೆಳೆಯಲು ಮುಖ್ಯ ಕಾರಣವಾಗಿದೆ.
  • ವರ್ಕ್ ಫ್ರಮ್ ಹೋಮ್ ನೀಡಿದರೆ ಜನರು ಊರಿಗೆ ಮರಳುತ್ತಾರೆ ಎಂದಿದ್ದಾರೆ ನೆಟ್ಟಿಗರು.

ದುಬಾರಿ ಬಾಡಿಗೆ, ಟ್ರಾಫಿಕ್ ಇದ್ದರೂ ಸಿಟಿ ಬಿಡಲ್ಲ ಜನ

ಇನ್‌ಸ್ಟಾಗ್ರಾಮ್‌ನಲ್ಲಿ ತನಗಾದ ಅನುಭವವನ್ನು ಹಂಚಿಕೊಂಡಿರುವ ಅಂಕಿತ್ ಎಂಬ ಯುವಕ, ಇದು ಬೆಂಗಳೂರು.. ಜನ ಇಲ್ಲಿಗೆ ಬರುತ್ತಾರೆ, ಆದರೆ ಬಂದ ಮೇಲೆ ಇಲ್ಲಿಂದ ಹೋಗಲು ಇಷ್ಟಪಡುವುದಿಲ್ಲ. ಇಲ್ಲಿ ಒಂಟಿತನ, ಆತಂಕ ಮತ್ತು ದೈನಂದಿನ ಟ್ರಾಫಿಕ್ ಕಿರಿಕಿರಿ ಇದ್ದರೂ ಜನ ಇಲ್ಲೇ ಇರಲು ಬಯಸುತ್ತಾರೆ. ನಮ್ಮ ಸಂಬಳದ ಅರ್ಧಕ್ಕಿಂತ ಹೆಚ್ಚು ಭಾಗ ಇಲ್ಲಿನ ದೊಡ್ಡ ಅಪಾರ್ಟ್‌ಮೆಂಟ್‌ಗಳ ಬಾಡಿಗೆಗೇ ಖರ್ಚಾಗುತ್ತದೆ. ದೆಹಲಿ, ಗುರುಗ್ರಾಮ್, ಹೈದರಾಬಾದ್, ಮುಂಬೈ ಅಥವಾ ಚೆನ್ನೈನಲ್ಲೂ ಐಟಿ ಕಂಪನಿಗಳಿಲ್ಲವೇ? ಖಂಡಿತ ಇವೆ. ಆದರೆ, ಬೆಂಗಳೂರಿನ ಅದ್ಭುತ ಹವಾಮಾನ (Weather) ನಮ್ಮನ್ನು ಬೇರೆಲ್ಲೂ ಹೋಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಅಂಕಿತ್ ಅವರ ಈ ಮಾತುಗಳು ಸಿಲಿಕಾನ್ ಸಿಟಿಯ ಐಟಿ ಉದ್ಯೋಗಿಗಳು ಮತ್ತು ವಲಸಿಗರ ಮನಸ್ಸು ಮುಟ್ಟಿದ್ದು, ವಿಡಿಯೋಗೆ ಭಾರಿ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ

ಅಂಕಿತ್ ವಿಡಿಯೋಗೆ ಇನ್‌ಸ್ಟಾಗ್ರಾಮ್‌ನಲ್ಲಿ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು, ಇದು ನೂರಕ್ಕೆ ನೂರು ನಿಜ. ಮೂರ್ನಾಲ್ಕು ದಶಕಗಳ ಮುನ್ನ ಜನ ಕನಸುಗಳನ್ನು ಬೆನ್ನಟ್ಟಿ ಮುಂಬೈಗೆ ಹೋಗುತ್ತಿದ್ದರು, ಈಗ ಆ ಸ್ಥಾನವನ್ನು ಬೆಂಗಳೂರು ತುಂಬಿದೆ ಎಂದು ಸಹಮತ ವ್ಯಕ್ತಪಡಿಸಿದ್ದಾರೆ.

ಆದರೆ, ಎಲ್ಲರೂ ಈ ಮಾತನ್ನು ಒಪ್ಪಿಕೊಂಡಿಲ್ಲ. ಮತ್ತೊಬ್ಬ ಬಳಕೆದಾರ, ನಮಗೆ ವರ್ಕ್ ಫ್ರಮ್ ಹೋಮ್ (WFH) ನೀಡಿ ನೋಡಿ, ಹೊರಗಿನಿಂದ ಬಂದ ಶೇಕಡಾ 80 ರಷ್ಟು ಜನ ತಮ್ಮ ತಮ್ಮ ಸ್ವಗ್ರಾಮಗಳಿಗೆ ಮರಳುತ್ತಾರೆ. ಬೆಂಗಳೂರಿನ ಹವಾಮಾನವನ್ನು ಅತಿಯಾಗಿ ವೈಭವೀಕರಿಸಲಾಗುತ್ತಿದೆ. ಇಲ್ಲಿನ ಟ್ರಾಫಿಕ್ ಮತ್ತು ಮನೆ ಬಾಡಿಗೆ ಜೀವನವನ್ನು ನರಕವಾಗಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇಷ್ಟೆಲ್ಲಾ ಸವಾಲುಗಳಿದ್ದರೂ ಬೆಂಗಳೂರು ತನ್ನ ಹವಾಮಾನದ ಮೂಲಕ ದೇಶದಾದ್ಯಂತ ಜನರನ್ನು ಆಕರ್ಷಿಸುತ್ತಿರುವುದು ಮಾತ್ರ ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್