AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿಯಲ್ಲಿ ಮೂರು ದಿನ ಬೆಂಗಳೂರಿನಲ್ಲಿ ವಿಶ್ವಮಟ್ಟದ ಸಿರಿಧಾನ್ಯ ಮೇಳ: ಕೃಷಿ ಸಚಿವ ಬಿ.ಸಿ.ಪಾಟೀಲ

ಸಿರಿಧಾನ್ಯ ಮೇಳದಲ್ಲಿ ವ್ಯಾಪಾರಸ್ಥರು, ರಫ್ತುದಾರರು ಕೂಡ ಭಾಗಿಯಾಗಲಿದ್ದಾರೆ. ಸಿಎಂ ಮೂಲಕ ಪ್ರಧಾನಿಗೂ ಆಹ್ವಾನ ನೀಡುತ್ತೇವೆ ಎಂದು ಬಿ.ಸಿ.ಪಾಟೀಲ ಹೇಳಿದರು.

ಜನವರಿಯಲ್ಲಿ ಮೂರು ದಿನ ಬೆಂಗಳೂರಿನಲ್ಲಿ ವಿಶ್ವಮಟ್ಟದ ಸಿರಿಧಾನ್ಯ ಮೇಳ: ಕೃಷಿ ಸಚಿವ ಬಿ.ಸಿ.ಪಾಟೀಲ
ಕೃಷಿ ಸಚಿವ ಬಿ.ಸಿ.ಪಾಟೀಲ
TV9 Web
| Updated By: Digi Tech Desk|

Updated on:Oct 19, 2022 | 3:27 PM

Share

ಬೆಂಗಳೂರು: ಸಿರಿಧಾನ್ಯಗಳಲ್ಲಿ ಕರ್ನಾಟಕ ಅತ್ಯುತ್ತಮ ಸಾಧನೆ ಮಾಡಿದೆ. 2021ರಲ್ಲಿ ಗರಿಷ್ಠ ಪ್ರಮಾಣದಲ್ಲಿ ಸಿರಿಧಾನ್ಯ ಬೆಳೆದ ಕರ್ನಾಟಕಕ್ಕೆ ‘ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಬಂದಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ವಿಕಾಸಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಅಂದರೆ 2023ರ ಜನವರಿ 20, 21 ಮತ್ತು 22 ರಂದು ನಗರದಲ್ಲಿ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಆಯೋಜಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ವಿದೇಶಗಳಲ್ಲಿ ರೈತರಿಗೆ ಸಿರಿಧಾನ್ಯದ ಬಗ್ಗೆ ಅರಿವು ಮೂಡಿಸಬೇಕಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿದೆ. ಪ್ರಧಾನಿ ನರೇಂದ್ರ ಮೋದಿ ಸಹ ಸಿರಿಧಾನ್ಯದ ಬಗ್ಗೆ ಮಾತನಾಡಿದ್ದಾರೆ. ಸಿರಿಧಾನ್ಯ ಮೇಳದಲ್ಲಿ ವ್ಯಾಪಾರಸ್ಥರು, ರಫ್ತುದಾರರು ಕೂಡ ಭಾಗಿಯಾಗಲಿದ್ದಾರೆ. ಸಿಎಂ ಮೂಲಕ ಪ್ರಧಾನಿಗೂ ಆಹ್ವಾನ ನೀಡುತ್ತೇವೆ. ಅವರು ಬಂದರೆ ನಮ್ಮ ಶಕ್ತಿ ಮತ್ತಷ್ಟು ಹೆಚ್ಚಲಿದೆ ಎಂದರು.

ರಾಜ್ಯದಲ್ಲಿ ನಿಯೋಜಿಸಲು ಉದ್ದೇಶಿಸಿದ್ದ 164 ಕೃಷಿ ಸಂಜೀವಿನಿ ವಾಹನಗಳ ಪೈಕಿ ಈಗಾಗಲೇ ನೂರು ವಾಹನಗಳನ್ನು ಬಿಡುಗಡೆ ಮಾಡಲಾಗಿದೆ. ಈ ವಾಹನಗಳ ಮೂಲಕ ‘ಲ್ಯಾಂಡ್ ಟು ಲ್ಯಾಬ್’ ಕಾರ್ಯಕ್ರಮ ಮಾಡುತ್ತೇವೆ. ಬೆಳೆಗೆ ಸಮಸ್ಯೆ ಇದ್ದಲ್ಲಿ ಸಮಸ್ಯೆ ಪರಿಹಾರ ಕೊಡಲಾಗುವುದು. ಮಳೆಯಿಂದಾಗಿ ರಾಜ್ಯದಲ್ಲಿ 10.20 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ಸುಮಾರು ₹ 1,020 ಕೋಟಿ ಪರಿಹಾರ ಕೊಡಲಾಗಿದೆ ಎಂದು ಹೇಳಿದರು.

Published On - 2:05 pm, Wed, 19 October 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?