AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿಯಲ್ಲಿ ಮೂರು ದಿನ ಬೆಂಗಳೂರಿನಲ್ಲಿ ವಿಶ್ವಮಟ್ಟದ ಸಿರಿಧಾನ್ಯ ಮೇಳ: ಕೃಷಿ ಸಚಿವ ಬಿ.ಸಿ.ಪಾಟೀಲ

ಸಿರಿಧಾನ್ಯ ಮೇಳದಲ್ಲಿ ವ್ಯಾಪಾರಸ್ಥರು, ರಫ್ತುದಾರರು ಕೂಡ ಭಾಗಿಯಾಗಲಿದ್ದಾರೆ. ಸಿಎಂ ಮೂಲಕ ಪ್ರಧಾನಿಗೂ ಆಹ್ವಾನ ನೀಡುತ್ತೇವೆ ಎಂದು ಬಿ.ಸಿ.ಪಾಟೀಲ ಹೇಳಿದರು.

ಜನವರಿಯಲ್ಲಿ ಮೂರು ದಿನ ಬೆಂಗಳೂರಿನಲ್ಲಿ ವಿಶ್ವಮಟ್ಟದ ಸಿರಿಧಾನ್ಯ ಮೇಳ: ಕೃಷಿ ಸಚಿವ ಬಿ.ಸಿ.ಪಾಟೀಲ
ಕೃಷಿ ಸಚಿವ ಬಿ.ಸಿ.ಪಾಟೀಲ
TV9 Web
| Edited By: |

Updated on:Oct 19, 2022 | 3:27 PM

Share

ಬೆಂಗಳೂರು: ಸಿರಿಧಾನ್ಯಗಳಲ್ಲಿ ಕರ್ನಾಟಕ ಅತ್ಯುತ್ತಮ ಸಾಧನೆ ಮಾಡಿದೆ. 2021ರಲ್ಲಿ ಗರಿಷ್ಠ ಪ್ರಮಾಣದಲ್ಲಿ ಸಿರಿಧಾನ್ಯ ಬೆಳೆದ ಕರ್ನಾಟಕಕ್ಕೆ ‘ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಬಂದಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ವಿಕಾಸಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಅಂದರೆ 2023ರ ಜನವರಿ 20, 21 ಮತ್ತು 22 ರಂದು ನಗರದಲ್ಲಿ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಆಯೋಜಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ವಿದೇಶಗಳಲ್ಲಿ ರೈತರಿಗೆ ಸಿರಿಧಾನ್ಯದ ಬಗ್ಗೆ ಅರಿವು ಮೂಡಿಸಬೇಕಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿದೆ. ಪ್ರಧಾನಿ ನರೇಂದ್ರ ಮೋದಿ ಸಹ ಸಿರಿಧಾನ್ಯದ ಬಗ್ಗೆ ಮಾತನಾಡಿದ್ದಾರೆ. ಸಿರಿಧಾನ್ಯ ಮೇಳದಲ್ಲಿ ವ್ಯಾಪಾರಸ್ಥರು, ರಫ್ತುದಾರರು ಕೂಡ ಭಾಗಿಯಾಗಲಿದ್ದಾರೆ. ಸಿಎಂ ಮೂಲಕ ಪ್ರಧಾನಿಗೂ ಆಹ್ವಾನ ನೀಡುತ್ತೇವೆ. ಅವರು ಬಂದರೆ ನಮ್ಮ ಶಕ್ತಿ ಮತ್ತಷ್ಟು ಹೆಚ್ಚಲಿದೆ ಎಂದರು.

ರಾಜ್ಯದಲ್ಲಿ ನಿಯೋಜಿಸಲು ಉದ್ದೇಶಿಸಿದ್ದ 164 ಕೃಷಿ ಸಂಜೀವಿನಿ ವಾಹನಗಳ ಪೈಕಿ ಈಗಾಗಲೇ ನೂರು ವಾಹನಗಳನ್ನು ಬಿಡುಗಡೆ ಮಾಡಲಾಗಿದೆ. ಈ ವಾಹನಗಳ ಮೂಲಕ ‘ಲ್ಯಾಂಡ್ ಟು ಲ್ಯಾಬ್’ ಕಾರ್ಯಕ್ರಮ ಮಾಡುತ್ತೇವೆ. ಬೆಳೆಗೆ ಸಮಸ್ಯೆ ಇದ್ದಲ್ಲಿ ಸಮಸ್ಯೆ ಪರಿಹಾರ ಕೊಡಲಾಗುವುದು. ಮಳೆಯಿಂದಾಗಿ ರಾಜ್ಯದಲ್ಲಿ 10.20 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ಸುಮಾರು ₹ 1,020 ಕೋಟಿ ಪರಿಹಾರ ಕೊಡಲಾಗಿದೆ ಎಂದು ಹೇಳಿದರು.

Published On - 2:05 pm, Wed, 19 October 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?