AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸರ್ಕಾರ ಅಮಾಯಕ ಮತ್ತು ಅಸಹಾಯಕರ ಪರವಾಗಿದೆ, ಕೊಲೆ ಪ್ರಕರಣದ ತನಿಖೆಯಿಂದ ಸಾಬೀತುಪಡಿಸುತ್ತೇವೆ; ಸಚಿವ ಆರಗ ಜ್ಞಾನೇಂದ್ರ

ಸಾಮಾನ್ಯ ಸಂಗತಿಗಾಗಿ ಆ ರೀತಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇಂತಹ ಮಾನಸಿಕತೆ ಇರೋರಿಗೆ ಒಂದು ಮೆಸೇಜ್ ಹೋಗಬೇಕು. ಚಂದ್ರ ಹತ್ಯೆ ಪ್ರಕರಣದ ಆರೋಪಿಗಳನ್ನು ನಾವು ಬಿಡೋದಿಲ್ಲ.

ನಮ್ಮ ಸರ್ಕಾರ ಅಮಾಯಕ ಮತ್ತು ಅಸಹಾಯಕರ ಪರವಾಗಿದೆ, ಕೊಲೆ ಪ್ರಕರಣದ ತನಿಖೆಯಿಂದ ಸಾಬೀತುಪಡಿಸುತ್ತೇವೆ; ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಅರಗ ಜ್ಞಾನೇಂದ್ರ
TV9 Web
| Edited By: |

Updated on:Apr 10, 2022 | 12:37 PM

Share

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ (Murder) ಪ್ರಕರಣದ ತನಿಖೆಯಲ್ಲಿ ಬೇರೆ ಬೇರೆ ಅಂಶಗಳು ಕಂಡು ಬಂದಿವೆ. ಅದಕ್ಕಾಗಿ ಆ ಪ್ರಕರಣ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದ್ದೇವೆ ಎಂದು ಬೆಂಗಳೂರಲ್ಲಿ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿಕೆ ನೀಡಿದ್ದಾರೆ. ಪೊಲೀಸರ ವಿಚಾರಣೆ ಮಾಡುವಾಗ ಸಂದರ್ಭಕ್ಕೆ ತಕ್ಕಂತೆ ತನಿಖೆ ಮಾಡಿಸಬೇಕಾಗುತ್ತದೆ. ಅದರಂತೆ ಚಂದ್ರು ಹತ್ಯೆ ಕೇಸ್ ಸಿಐಡಿಗೆ ಕೊಡಲು ತೀರ್ಮಾನ ಮಾಡಲಾಗಿದೆ. ಪ್ರಕರಣ ತನಿಖೆಯ ಹಂತದಲ್ಲಿದೆ, ನಾನು ಏನೂ ಮಾತನಾಡಲ್ಲ. ಹತ್ಯೆಯ ಸಿಸಿಟಿವಿ ಫುಟೇಜ್ ನೋಡಿದ್ರೆ ಕರುಳು ಹಿಂಡಿ ಬರುತ್ವೆ ಎಂದು ಹೇಳಿದರು.

ಸಾಮಾನ್ಯ ಸಂಗತಿಗಾಗಿ ಆ ರೀತಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇಂತಹ ಮಾನಸಿಕತೆ ಇರೋರಿಗೆ ಒಂದು ಮೆಸೇಜ್ ಹೋಗಬೇಕು. ಚಂದ್ರ ಹತ್ಯೆ ಪ್ರಕರಣದ ಆರೋಪಿಗಳನ್ನು ನಾವು ಬಿಡೋದಿಲ್ಲ. ನಮ್ಮ ಸರ್ಕಾರ ಅಮಾಯಕ ಮತ್ತು ಅಸಹಾಯಕರ ಪರವಾಗಿದೆ. ಈ ತನಿಖೆಯಿಂದ ಅದನ್ನು ನಾವು ಸಾಬೀತುಪಡಿಸುತ್ತೇವೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಭಾಷೆ ವಿಚಾರದ ಬಗ್ಗೆ ಮಾತಾಡಲ್ಲ: ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲು ಸೂಚಿಸಲಾಗಿದೆ. ಗೊಂದಲ ಆಯ್ತು ಎಂಬ ಕಾರಣಕ್ಕೆ ಸಿಐಡಿ ತನಿಖೆಗೆ ವಹಿಸಿಲ್ಲ. ಸರಿಯಾದ ತನಿಖೆ ನಡೆಯಲಿ ಎಂದು ಸಿಐಡಿಗೆ ವಹಿಸಿದ್ದೇವೆ. ಪೊಲೀಸ್ ಇಲಾಖೆ, ಗೃಹ ಸಚಿವರು ಅಸಮರ್ಥರಲ್ಲ. ನಮಗೆ ಸಾಮರ್ಥ್ಯ ಇದೆ, ಸೂಕ್ತ ತನಿಖೆಯನ್ನು ನಡೆಸುತ್ತೇವೆ. ಪ್ರಕರಣದ ಗೊಂದಲವನ್ನು ನಾನು ಇನ್ನಷ್ಟು ವಿವಾದ ಮಾಡಲ್ಲ. ಬಡವರ ಪಾಲಿಗೆ ಸರ್ಕಾರ ಇದೆ ಎನ್ನುವುದನ್ನು ತೋರಿಸುತ್ತೇವೆ. ಚಂದ್ರು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ. ಭಾಷೆ ವಿಚಾರದ ಬಗ್ಗೆ ಮಾತಾಡಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಇದನ್ನೂ ಓದಿ

ಧ್ವನಿವರ್ಧಕದಲ್ಲಿ ಹನುಮಾನ್​ ಚಾಲೀಸಾ, ಭಕ್ತಿಗೀತೆಗಳನ್ನು ಹಾಕಿದ ರಾಜ್ ಠಾಕ್ರೆ ಪಕ್ಷದ ಕಾರ್ಯಕರ್ತರು; ಕೂಡಲೇ ಬಂದು ತಡೆದ ಪೊಲೀಸರು

Rama Navami 2022: ತುಮಕೂರಿನಲ್ಲಿ ಕೇಸರಿ ಶಾಲು ಧರಿಸಿ ಪಾನಕ ಹಂಚಿ ರಾಮನವಮಿ ಆಚರಿಸಿದ ಹಿಂದೂ ಮುಸ್ಲಿಮರು

Published On - 12:33 pm, Sun, 10 April 22

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ