AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Education Summit: ಟಿವಿ 9 ಆಯೋಜಿಸಿರುವ ಎಜುಕೇಶನ್ ಸಮ್ಮಿಟ್​ಗೆ ಚಾಲನೆ ನೀಡಿದ ಸಚಿವ ಡಾ. ಸಿ ಅಶ್ವಥ್ ನಾರಾಯಣ್

ಹಲವು ಪ್ರತಿಷ್ಠಿತ ಕಾಲೇಜುಗಳ ಸಹಯೋಗದಲ್ಲಿ ಸಮ್ಮಿಟ್ ನಡೆಯುತ್ತಿದ್ದು, ದೇಶದ ಪ್ರತಿಷ್ಠಿತ ಕಾಲೇಜುಗಳು ಈ ಸಮ್ಮಿಟ್​ನಲ್ಲಿ ಭಾಗಿಯಾಗಲಿವೆ.

TV9 Education Summit: ಟಿವಿ 9 ಆಯೋಜಿಸಿರುವ ಎಜುಕೇಶನ್ ಸಮ್ಮಿಟ್​ಗೆ ಚಾಲನೆ ನೀಡಿದ ಸಚಿವ ಡಾ. ಸಿ ಅಶ್ವಥ್ ನಾರಾಯಣ್
ಡಾ. ಅಶ್ವತ್ಥ ನಾರಾಯಣ
TV9 Web
| Edited By: |

Updated on:Sep 03, 2021 | 1:53 PM

Share

ಬೆಂಗಳೂರು: ಇಂದಿನಿಂದ 3 ದಿನಗಳ ಕಾಲ ಟಿವಿ9 ನ ಅತಿದೊಡ್ಡ ಎಜುಕೇಷನ್ ಸಮ್ಮಿಟ್ ನಡೆಯಲಿದೆ. ಅರಮನೆಯ ಮೈದಾನದ ತ್ರಿಪುರವಾಸಿನಿ ಹಾಲ್​ನಲ್ಲಿ (Tripuravasini at palace grounds) ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಇಂದು (ಸೆಪ್ಟೆಂಬರ್ 3) ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಚಾಲನೆ ನೀಡಿದ್ದಾರೆ. ಹಲವು ಪ್ರತಿಷ್ಠಿತ ಕಾಲೇಜುಗಳ ಸಹಯೋಗದಲ್ಲಿ ಸಮ್ಮಿಟ್ ನಡೆಯುತ್ತಿದ್ದು, ದೇಶದ ಪ್ರತಿಷ್ಠಿತ ಕಾಲೇಜುಗಳು ಈ ಸಮ್ಮಿಟ್​ನಲ್ಲಿ ಭಾಗಿಯಾಗಲಿವೆ.

ಟಿವಿ9 ವತಿಯಿಂದ 5ನೇ ಬಾರಿಗೆ ಎಜುಕೇಷನ್ ಎಕ್ಸ್‌ಪೋ ನಡೆಯುತ್ತಿದೆ. ಒಂದೇ ವೇದಿಕೆಯಲ್ಲಿ ನೂರಾರು ಕೋರ್ಸ್‌ಗಳ ಮಾಹಿತಿ ನೀಡಲಾಗುತ್ತಿದೆ. ಟಿವಿ9 ಎಕ್ಸ್‌ಪೋನಲ್ಲಿ ಹಲವು ವಿವಿ, ಕಾಲೇಜುಗಳ ಸ್ಟಾಲ್ಸ್, ಎಸ್​​ಎಸ್​ಎಲ್​ಸಿ, ಪಿಯುಸಿ ಬಳಿಕ ಮುಂದೆ ಎನು? ಎನ್ನುವವರಿಗೆ ಮಾಹಿತಿ ನೀಡಲಾಗುತ್ತದೆ. ಟಿವಿ9 ಎಕ್ಸ್‌ಪೋನಲ್ಲಿ ಕೊವಿಡ್ ಮಾರ್ಗಸೂಚಿ ಪಾಲನೆ ಮಾಡಲಾಗುತ್ತಿದ್ದು, ಇಂದು, ನಾಳೆ, ನಾಡಿದ್ದು ಟಿವಿ9 ಎಜುಕೇಷನ್ ಎಕ್ಸ್‌ಪೋ ನಡೆಯಲಿದೆ. 3 ದಿನಗಳ ಕಾಲ ನಡೆಯುವ ಸಮ್ಮಿಟ್​ಗೆ ಉಚಿತ ಪ್ರವೇಶ ನೀಡಲಾಗುತ್ತಿದೆ.

ಟಿವಿ9 ಎಜುಕೇಶನ್ ಸಮ್ಮಿಟ್ (TV9 Education Summit) ಮಾಡಿ ತುಂಬಾ ಒಳ್ಳೆಯ ಕೆಲಸ ಮಾಡಿದೆ. ಹೀಗಾಗಿ ಟಿವಿ9ಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೆನೆ. ಕೊವಿಡ್​ನಿಂದ ವಿದ್ಯಾಭ್ಯಾಸ ತುಂಬಾ ವ್ಯತ್ಯಾಸ ಆಗಿತ್ತು.ಈಗ ಒಂದೇ ವೇದಿಕೆಯಲ್ಲಿ ಮಾಹಿತಿಯ ಅವಕಾಶ ಸಿಕ್ಕಿದೆ ಎಂದು ಅಶ್ವಥ್ ನಾರಾಯಣ್ (Dr C Ashwath Narayan) ಹೇಳಿದ್ದಾರೆ.

ಟಿವಿ9 ಎಜುಕೇಷನ್‌ ಎಕ್ಸ್‌ಪೋದಲ್ಲಿ ನಾಳೆ ಫ್ರೀ ವ್ಯಾಕ್ಸಿನ್ 18 ವರ್ಷ ಮೇಲ್ಪಟ್ಟವರಿಗೆ ನಾಳೆ ಉಚಿತ ಲಸಿಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನ 3ರವರೆಗೂ ಉಚಿತ ಲಸಿಕೆ ನೀಡಲಾಗುತ್ತದೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಹಾಲ್‌ನಲ್ಲಿ ಟಿವಿ9 ಎಕ್ಸ್‌ಪೋ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್‌ ಲಸಿಕೆ ಹಾಕಿಸಲು ವ್ಯವಸ್ಥೆ ಮಾಡಿದೆ. ಬಿಬಿಎಂಪಿ ವತಿಯಿಂದ ಉಚಿತ ವ್ಯಾಕ್ಸಿನ್ ಹಾಕಿಸುವ ವ್ಯವಸ್ಥೆ ಮಾಡಲಾಗಿದೆ.

ಉದ್ಯೋಗ ಮೇಳಕ್ಕೆ ಸಚಿವ ಅಶ್ವತ್ಥ್ ನಾರಾಯಣ ಚಾಲನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ವಾಲಿವಾಲ್ ಕ್ರೀಡಾಂಗಣದಲ್ಲಿ ನಡೆದ ಉದ್ಯೋಗ ಮೇಳಕ್ಕೆ ಸಚಿವ ಅಶ್ವತ್ಥ್ ನಾರಾಯಣ ಚಾಲನೆ ನೀಡಿದ್ದಾರೆ. ವಾಲಿವಾಲ್ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಸುಮಾರು 30 ಕಂಪನಿಗಳು ಭಾಗಿಯಾಗಿದ್ದು, 12 ಕಂಪನಿಗಳು ವರ್ಚುವಲ್ ಮೂಲಕ ಸಂದರ್ಶನದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:

TV9 Life Style Expo 2021: ಟಿವಿ9 ಆಯೋಜಿಸಿರುವ ಲೈಫ್‌ಸ್ಟೈಲ್‌ ಮೆಗಾ ಎಕ್ಸ್‌ಪೋಗೆ ಎಲ್ಲರಿಗೂ ಉಚಿತ ಪ್ರವೇಶ! ಬಂಪರ್‌ ಆಫರ್​​ಗಳು

ರೈತರಿಗಾಗಿ ‘ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕಾಂಶ ಅಭಿಯಾನ’ಕ್ಕೆ ಚಾಲನೆ ನೀಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

Published On - 10:47 am, Fri, 3 September 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ