AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರ ಮರು ನೇಮಕ; ಸಿಹಿ ಸುದ್ದಿ ಕೊಟ್ಟ ಶ್ರೀರಾಮುಲು

ವೇತನ ತಾರತಮ್ಯ ಬಗ್ಗೆಯೂ ಸಾರಿಗೆ ನೌಕರರ ಬೇಡಿಕೆ ಇಟ್ಟಿದ್ದರು. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆಯೂ ಮಾತಾನಾಡುವ ಯೋಚನೆ ಇದೆ. ಅವರ ಪ್ರಮುಖವಾದ 4,200 ಸಾರಿಗೆ ನೌಕರರನ್ನ ಪುನರ್ ನೇಮಕ ಬಗ್ಗೆ ಒತ್ತಡ ಇತ್ತು.

ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರ ಮರು ನೇಮಕ; ಸಿಹಿ ಸುದ್ದಿ ಕೊಟ್ಟ ಶ್ರೀರಾಮುಲು
ಸಾರಿಗೆ ಅಧಿಕಾರಿಗಳ ಜೊತೆ ಶ್ರೀರಾಮುಲು ಸಭೆ
TV9 Web
| Edited By: sandhya thejappa|

Updated on:Sep 21, 2021 | 12:40 PM

Share

ಬೆಂಗಳೂರು: ವಜಾಗೊಂಡಿದ್ದ ಸಾರಿಗೆ ನೌಕರರ (Transportation Employees) ಮರು ನೇಮಕಕ್ಕೆ ಸರ್ಕಾರ (Karnataka Government) ಆದೇಶ ನೀಡಿದೆ. ಈ ಮೂಲಕ 4,200 ಸಾರಿಗೆ ನೌಕರರಿಗೆ ಸಚಿವ ಬಿ.ಶ್ರೀರಾಮುಲು (B Sriramulu) ಸಿಹಿ ಸುದ್ದಿ ನೀಡಿದ್ದಾರೆ. ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರನ್ನು ಮರು ನೇಮಕ ಮಾಡಲು ಸರ್ಕಾರ ಆದೇಶ ನೀಡಿದ್ದು, ಸಾರಿಗೆ ಸಚಿವರು ಹಾಗು ನೌಕರರ ನಡುವೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ಸಾರಿಗೆ ಯೂನಿಯನ್ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. 12 ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದರು. ನಿನ್ನೆ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಲಾಗಿದೆ. ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿ ತೊಂದರೆಯಾಗಬಾರದೆಂದು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ವೇತನ ತಾರತಮ್ಯ ಬಗ್ಗೆಯೂ ಸಾರಿಗೆ ನೌಕರರ ಬೇಡಿಕೆ ಇಟ್ಟಿದ್ದರು. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆಯೂ ಮಾತಾನಾಡುವ ಯೋಚನೆ ಇದೆ. ಅವರ ಪ್ರಮುಖವಾದ 4,200 ಸಾರಿಗೆ ನೌಕರರನ್ನ ಪುನರ್ ನೇಮಕ ಬಗ್ಗೆ ಒತ್ತಡ ಇತ್ತು. ಈ ಬಗ್ಗೆ ಮೊದಲು ಆದ್ಯತೆ ಕೊಟ್ಟು ಮರು ನೇಮಕ ಮಾಡುತ್ತೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

ಬಹುತೇಕ ಎಲ್ಲಾ ಸಮಸ್ಯೆ ಪರಿಹಾರಿಸೋದಾಗಿ ಶ್ರೀರಾಮುಲು ಭರವಸೆ ನೀಡಿದ್ದಾರೆ. ಕಳೆದ ಮುಷ್ಕರದ ವೇಳೆ 4,200 ನೌಕರರನ್ನ ನಿಗಮಗಳು ವಜಾಗೊಳಿಸಿತ್ತು. ಮರು ನೇಮಕಕ್ಕಾಗಿ ಸಾರಿಗೆ ನೌಕರರ ಯೂನಿಯನ್ ಬೇಡಿಕೆ ಇಟ್ಟಿತ್ತು. ಹಲವಾರು ಪ್ರತಿಭಟನೆ ಸಹ ನಡೆದಿತ್ತು. ರಾಮುಲು ಎಲ್ಲಾ ನೌಕರರ ಯೂನಿಯನ್ ಮುಖಂಡರನ್ನ ಕರೆಸಿ ಮಾತುಕತೆ ನಡೆಸಿದರು. ಸಾರಿಗೆ ನೌಕರರ ಮುಖಂಡರಾದ ಅನಂತ ಸುಬ್ಬಾರಾವ್, ಸಿಐಟಿಯು ಮಂಜುನಾಥ್, ಪ್ರಕಾಶ್ ಸೇರಿ ಹಲವು ಮುಖಂಡರ ಜೊತೆ ಚರ್ಚಿಸಿದರು.

ಇನ್ನು ಸಾರಿಗೆ ಸಚಿವರು ಶಾಲಾ, ಕಾಲೇಜಿಗೆ ಹೋಗುವುದಕ್ಕೆ ಮಕ್ಕಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಡಿಪೋಗಳಲ್ಲಿ ಕೆಲಸ ಮಾಡುವ ಸಾರಿಗೆ ನೌಕರರಿಗೆ ಕಿರುಕುಳ, ಸಾರಿಗೆ ನೌಕರರ ಎಲ್ಲಾ ಸಮಸ್ಯೆ, ಬೇಡಿಕೆಗಳನ್ನ ಬಗೆಹರಿಸುತ್ತೇವೆ. ಸ್ವತಃ ನಾನೇ ಡಿಪೋಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಎಲ್ಲದರ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ರಾಮುಲು ಹೇಳಿದರು.

ಇದನ್ನೂ ಓದಿ

ಬೆಳಗಾವಿಯಲ್ಲಿ ಎಂಇಎಸ್‌ನಿಂದ ದಿನಕ್ಕೊಂದು ನಾಟಕ; ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ

ಜಸ್ಟ್​ ಮಿಸ್; ಮಂಗಳೂರಿನಲ್ಲಿ ಕಾರಿನಡಿ ಬಿದ್ದರೂ ಬಾಲಕ ಪವಾಡಸದೃಶ ಪಾರು! ವಿಡಿಯೋ ನೋಡಿ

(Minister b sriramulu says KSRTC transportation employees will be re appointed to work)

Published On - 12:12 pm, Tue, 21 September 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು