AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಡಿ.ಸುಧಾಕರ್​ ವಿರುದ್ಧ ಎಫ್​ಐಆರ್: ಮಹಿಳೆ ಜತೆ ಗಲಾಟೆ, ಏನಿದು ಪ್ರಕರಣ? ಇಲ್ಲಿದೆ ಡಿಟೇಲ್ಸ್

ನನ್ನ ಬಳಿ ಸೂಕ್ತ ದಾಖಲೆಗಳಿವೆ ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯ ದುರುದ್ದೇಶದಿಂದ ನನ್ನ ಮೇಲೆ ಪ್ರಕರಣ ದಾಖಲಾಗಿದೆ. ಹತ್ತು ವರ್ಷಗಳ ಹಿಂದೆಯೇ ವ್ಯವಹಾರ ನಡೆದಿದೆ ಎಂದು ಸಚಿವ ಡಿ. ಸುಧಾಕರ್​ ಹೇಳಿದ್ದಾರೆ.

ಸಚಿವ ಡಿ.ಸುಧಾಕರ್​ ವಿರುದ್ಧ ಎಫ್​ಐಆರ್: ಮಹಿಳೆ ಜತೆ ಗಲಾಟೆ, ಏನಿದು ಪ್ರಕರಣ? ಇಲ್ಲಿದೆ ಡಿಟೇಲ್ಸ್
ಸಚಿವ ಡಿ ಸುಧಾಕರ್​
TV9 Web
| Edited By: ವಿವೇಕ ಬಿರಾದಾರ|

Updated on:Sep 12, 2023 | 4:02 PM

Share

ಬೆಂಗಳೂರು ಸೆ.12: ಭೂಕಬಳಿಕೆ, ಹಲ್ಲೆ, ಜಾತಿ ನಿಂದನೆ ಆರೋಪದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ.ಸುಧಾಕರ್​ (Minister D Sudhakar) ಮೇಲೆ ಎಫ್​ಐಆರ್ (FIR)​ ದಾಖಲಾದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಡಿ. ಸುಧಾಕರ್​ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ. ಜಮೀನು ವ್ಯವಹಾರದ ವೇಳೆ ಸಚಿವ ಡಿ.ಸುಧಾಕರ್​ ಬ್ರಾಹ್ಮಣರ ಬಗ್ಗೆ ಮಾತಾಡಿರುವ ವಿಡಿಯೋ ವೈರಲ್​ ಆಗಿದೆ.

ಈ ಬಗ್ಗೆ ಮಾತನಾಡಿದ ಡಿ. ಸುಧಾಕರ್​​ ನನ್ನ ಬಳಿ ಸೂಕ್ತ ದಾಖಲೆಗಳಿವೆ ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯ ದುರುದ್ದೇಶದಿಂದ ನನ್ನ ಮೇಲೆ ಪ್ರಕರಣ ದಾಖಲಾಗಿದೆ. ಹತ್ತು ವರ್ಷಗಳ ಹಿಂದೆಯೇ ವ್ಯವಹಾರ ನಡೆದಿದೆ. ಕಾನೂನು ಮೂಲಕ ಹೋರಾಟ ನಡೆಸುವ ಅವಶ್ಯಕತೆ ಇಲ್ಲ. ನನ್ನ ಬಳಿ ಎಲ್ಲಾ ದಾಖಲಿಗಳಿವೆ. ಈ ಹಿಂದೆಯೇ ಸಚಿವನಾಗಿದ್ದ ವೇಳೆಯೂ ಆರೋಪ ಮಾಡಿದ್ದರು ಎಂದರು.

ಏನಿದು ಪ್ರಕರಣ

ಡಿ. ಸುಧಾಕರ್​ ಪಾಲುದಾರರಾಗಿರುವ ಸೆವೆನ್ ಹಿಲ್ಸ್ ಡೆವಲಪರ್ಸ್ ಅಂಡ್​ ಟ್ರೇಡರ್ಸ್ ರಿಯಲ್​ ಎಸ್ಟೆಟ್​ ಕಂಪನಿ 2003 ರಲ್ಲಿ ಸುಬ್ಬಮ್ಮ ಎಂಬುವರಿಂದ ಯಲಹಂಕದ ಸರ್ವೆ ನಂಬರ್​ 108/1ರ ಜಮೀನನ್ನು ಕೊಂಡುಕೊಳ್ಳುತ್ತದೆ. ಈ ಸಂದರ್ಭದಲ್ಲಿ ಜಮೀನಿಗೆ ಇದ್ದ ಬೆಲೆಯನ್ನು ಸುಬ್ಬಮ್ಮ ಅವರಿಗೆ ಕಂಪನಿ ನೀಡುತ್ತೆ. ಮತ್ತು ಕ್ರಯಪತ್ರ ಮಾಡಿಕೊಂಡಿದೆ. ಆದರೆ ಇದೀಗ ಸುಬ್ಬಮ್ಮ ಅವರು ಅಂದು ಮಾರಿದ ಜಮೀನಿಗೆ ಇಂದಿನ ಬೆಲೆಗೆ ಹಣ ನೀಡಿ ಎಂದು ಡಿ. ಸುಧಾಕರ್​ ಅವರ ಬಳಿ ಬಂದು ಪಟ್ಟು ಹಿಡಿದಿದ್ದಾರೆ. ಅಲ್ಲದೇ 11 ಜನರು ಜಾಗವನ್ನು ಅತಿಕ್ರಮಣ ಮಾಡಿಕೊಂಡಿದ್ದಾರೆ ಎಂದು ಸಚಿವ ಡಿ.ಸುಧಾಕರ್​ ಆಪ್ತ ವಲಯ ಟಿವಿ9ಗೆ ತಿಳಿಸಿದೆ.

ಇದನ್ನೂ ಓದಿ: ಭೂ ಕಬಳಿಕೆ, ಜಾತಿನಿಂದನೆ ಆರೋಪ: ಸಚಿವ ಡಿ ಸುಧಾಕರ್​ ಸೇರಿದಂತೆ ಮೂವರ ವಿರುದ್ದ FIR

ಈ ಹಿನ್ನೆಲೆಯಲ್ಲಿ ಸುಬ್ಬಮ್ಮ ಮತ್ತು ಡಿ.ಸುಧಾಕರ್​ ಮಧ್ಯೆ ಗಲಾಟೆ ನಡೆದಿದೆ. ಗಲಾಟೆ ನಂತರ ಸುಬ್ಬಮ್ಮ ಅವರು ಸೆ.10 ರಂದು ಯಲಹಂಕ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆವನ್ ಹಿಲ್ಸ್ ಅಂಡ್ ಟ್ರೇಡರ್ಸ್​​​​ ಪಾಲುದಾರರಾದ ​ಸುಧಾಕರ್​ ಸೇರಿದಂತೆ ಮೂವರು ಮೋಸದಿಂದ ಜಮೀನು ಕಬಳಿಸಿದ್ದಾರೆ. ಯಲಹಂಕದ ಸರ್ವೆ ನಂಬರ್​ 108/1ರ ಜಮೀನು ವಿವಾದಕ್ಕೆ ಸಂಬಂಧಿಸಿದ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ ಹೀಗಿದ್ದರೂ ಅವರ 40 ಮಂದಿ ಸಹಚರರು ಬಂದು ನನ್ನ ಪುತ್ರಿ ಆಶಾ ಮೇಲೆ ಮಾಡಿದ್ದಾರೆ. ಪ್ರಶ್ನಿಸದಾಗ ಜಾತಿ ನಿಂದನೆ ಮಾಡಲಾಗಿದೆ. ಜೆಸಿಬಿ ಯಂತ್ರದಿಂದ ಕಟ್ಟಡ, ಸೀಟಿನ ಶೆಡ್​​, ಕಾಂಪೌಂಡ್​ ತೆರವು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:03 pm, Tue, 12 September 23

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?