ಡಿ. ಸುಧಾಕರ್​​ ಆರೋಗ್ಯದ ಬಗ್ಗೆ ಸಹೋದರನಿಂದ ಬಿಗ್​​ ಅಪ್ಡೇಟ್​: ಈಗ ಹೇಗಿದ್ದಾರೆ ಸಚಿವರು?

ಶ್ವಾಸಕೋಶ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿದ್ದ ಸಚಿವ ಡಿ. ಸುಧಾಕರ್ ಆರೋಗ್ಯದಲ್ಲಿ ಮಹತ್ವದ ಚೇತರಿಕೆ ಕಂಡುಬಂದಿದೆ. ಸಹೋದರ ಡಿ. ಕುಮಾರ್ ನೀಡಿರುವ ಮಾಹಿತಿ ಪ್ರಕಾರ, ಸಚಿವರಿಗೆ ಪ್ರಜ್ಞೆ ಬಂದಿದ್ದು, ಕಣ್ಣುಬಿಟ್ಟು ನೋಡಿದ್ದಾರೆ. ಸಂಪೂರ್ಣ ಗುಣಮುಖರಾಗಿ ಜನಸೇವೆಗೆ ಮರಳುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ತಜ್ಞ ವೈದ್ಯಕೀಯ ತಂಡದಿಂದ ಸಚಿವರಿಗೆ ಚಿಕಿತ್ಸೆ ಮುಂದುವರೆದಿದೆ.

ಡಿ. ಸುಧಾಕರ್​​ ಆರೋಗ್ಯದ ಬಗ್ಗೆ ಸಹೋದರನಿಂದ ಬಿಗ್​​ ಅಪ್ಡೇಟ್​: ಈಗ ಹೇಗಿದ್ದಾರೆ ಸಚಿವರು?
ಸಚಿವ ಡಿ. ಸುಧಾಕರ್​​
Edited By:

Updated on: May 02, 2026 | 7:43 AM

ಬೆಂಗಳೂರು/ಚಿತ್ರದುರ್ಗ, ಮೇ 02: ಶ್ವಾಸಕೋಶದ ಸೋಂಕಿನಿಂದಾಗಿ ಗಂಭೀರ ಸ್ಥಿತಿಯಲ್ಲಿರುವ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಅವರ ಸಹೋದರ ಬಿಗ್​​ ಅಪ್ಡೇಟ್​​ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಡಿ. ಕುಮಾರ್, ಸುಧಾಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಅವರಿಗೆ ಪ್ರಜ್ಞೆ ಬಂದಿದ್ದು, ಕಣ್ಣುಬಿಟ್ಟು ನೋಡಿದ್ದಾರೆ. ಹೀಗಾಗಿ ನೂರಕ್ಕೆ ನೂರರಷ್ಟು ಅವರು ಗುಣಮುಖರಾಗುವ ವಿಶ್ವಾಸವಿದೆ. ಹಿರಿಯೂರಿಗೆ ಬಂದು ಸುಧಾಕರ್​​ ಮತ್ತೆ ಜನಸೇವೆ ಮಾಡಲಿದ್ದು, ಎಲ್ಲರೂ ಧೈರ್ಯ ಮತ್ತು ಸಮಾದಾನದಿಂದ ಇರಿ ಎಂದು ತಿಳಿಸಿದ್ದಾರೆ.

ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್​​ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕಿಮ್ಸ್​​ಗೆ ದಾಖಲಿಸಲಾಗಿತ್ತು. ಸಚಿವರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ್ದ ಕಿಮ್ಸ್ ಆಸ್ಪತ್ರೆ ಶ್ವಾಸಕೋಶ ಕಸಿ ವೈದ್ಯ ಮಂಜುನಾಥ್, ಶ್ವಾಸಕೋಶ ಸೋಂಕು ಹಿನ್ನೆಲೆಯಲ್ಲಿ ಸಚಿವ ಡಿ. ಸುಧಾಕರ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯಕೀಯ ತಂಡದಿಂದ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ವೆಂಟಿಲೇಟರ್ ಮತ್ತು ಎಕ್ಮೋ ನೆರವಿನಿಂದ ಉಸಿರಾಟವಾಡುತ್ತಿದ್ದಾರೆ. ಇನ್ಫೆಕ್ಷನ್ ಆಗಿರುವ ಶ್ವಾಸಕೋಶ ಸರಿಪಡಿಸಲು ಪ್ರಯತ್ನ ಪ್ರಯತ್ನ ನಡೆದಿದೆ. ಅದು ಸಾಧ್ಯವಾಗದಿದ್ದಾಗ ಶ್ವಾಸಕೋಶ ಕಸಿ ಮಾಡಲಾಗುವುದು ಎಂದು ತಿಳಿಸಿದ್ದರು. ಹೀಗಾಗಿ ಅವರ ಅಭಿಮಾನಿಗಳು ಮತ್ತು ಆಪ್ತರಲ್ಲಿ ಆತಂಕ ಮೂಡಿತ್ತು. ಆದರೀಗ ಸಚಿವರ ಸಹೋದರ ನೀಡಿರುವ ಹೇಳಿಕೆ ಕೊಂಚ ನೆಮ್ಮದಿ ನಂದಿದೆ.

ಇದನ್ನೂ ಓದಿ: ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಡಾಕ್ಟರ್

ಆಸ್ಪತ್ರೆಗೆ ಭೇಟಿ ನೀಡಿದ್ದ ರಾಜ್ಯಪಾಲರು, ಸಿಎಂ

ಡಿ. ಸುಧಾಕರ್​​ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಯುತ್ತಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಕೂಡ ​​ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಚಿವರ ಆರೋಗ್ಯ ವಿಚಾರಿಸಿದ್ದರು. ಹಾಗೆಯೇ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​, ಗೃಹ ಸಚಿವ ಡಾ.ಜಿ. ಪರಮೇಶ್ವರ್​​, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಹಲವಾರು ಪ್ರಮುಖರು ಆಸ್ಪತ್ರೆಗೆ ತೆರಳಿ ಡಿ. ಸುಧಾಕರ್​​ ಅವರ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದಿದ್ದರು. ಸಚಿವರ ಕುಟುಂಬಸ್ಥರಿಗೂ ಧೈರ್ಯ ತುಂಬಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:43 am, Sat, 2 May 26

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us