AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯನಗರದ ಜನರಲ್ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು ಲಂಚ ಪಡೆದ ಆರೋಪ; ವೈದ್ಯನನ್ನು ವಜಾಗೊಳಿಸುವಂತೆ ಸಚಿವ ಕೆ ಸುಧಾಕರ್‌ ಸೂಚನೆ

ಹೆರಿಗೆ ಮಾಡಿಸಲು 14 ಸಾವಿರ ರೂ. ಲಂಚ ಪಡೆದ ಆರೋಪದಡಿ ಜಯನಗರದ ಜನರಲ್ ಆಸ್ಪತ್ರೆಯ ವೈದ್ಯ ಜೋಶಿ ದಾಸ್​ರನ್ನು ಕೆಲಸದಿಂದ ವಜಾಗೊಳಿಸುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಸೂಚನೆ ನೀಡಿದ್ದಾರೆ.

ಜಯನಗರದ ಜನರಲ್ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು ಲಂಚ ಪಡೆದ ಆರೋಪ; ವೈದ್ಯನನ್ನು ವಜಾಗೊಳಿಸುವಂತೆ ಸಚಿವ ಕೆ ಸುಧಾಕರ್‌ ಸೂಚನೆ
ಜಯನಗರದ ಜನರಲ್ ಆಸ್ಪತ್ರೆಗೆ ಸಚಿವ ಡಾ. ಕೆ ಸುಧಾಕರ್​ ಭೇಟಿ
TV9 Web
| Updated By: ವಿವೇಕ ಬಿರಾದಾರ|

Updated on:Aug 22, 2022 | 7:26 PM

Share

ಬೆಂಗಳೂರು: ಹೆರಿಗೆ ಮಾಡಿಸಲು 14 ಸಾವಿರ ರೂ. ಲಂಚ ಪಡೆದ ಆರೋಪದಡಿ ಜಯನಗರದ ಜನರಲ್ ಆಸ್ಪತ್ರೆಯ (Jayanagar Journal Hospital) ವೈದ್ಯ ಜೋಶಿ ದಾಸ್​ರನ್ನು ಕೆಲಸದಿಂದ ವಜಾಗೊಳಿಸುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ (K Sudhakar) ಸೂಚನೆ ನೀಡಿದ್ದಾರೆ. ಇಂದು (ಆ 22) ಸಚಿವ ಡಾ. ಸುಧಾಕರ್ ಜಯನಗರ ಆಸ್ಪತ್ರೆಗೆ ದಿಢೀರನೆ ಭೇಟಿ ನಿಡಿ, ಖಾಲಿ ಇರುವ ಬೆಡ್​ಗಳ, ಸಿಬ್ಬಂದಿಗಳ ಕೊರತೆಯ ಬಗ್ಗೆ ಮಾಹಿತಿ ಪಡೆದರು.

ಈ ವೇಳೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿದ್ದ ವೈದ್ಯ ಜೋಶಿ ದಾಸ್‌ ಹೆರಿಗೆ ಮಾಡಿಸಲು 14 ಸಾವಿರ ರೂ. ಲಂಚ ಪಡೆಯುತ್ತಿದ್ದಾರೆಂದು ಶಾಸಕಿ ಸೌಮ್ಯಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧ ಸಚಿವರು ಕೂಡಲೇ ವೈದ್ಯನನ್ನು ವಜಾ ಮಾಡುವಂತೆ ವೈದ್ಯಕೀಯ ಅಧೀಕ್ಷಕ ಡಾ.ರಾಮಕೃಷ್ಣಪ್ಪರಿಗೆ ಸೂಚನೆ ನೀಡಿದರು. ಬಳಿಕ ಸಚಿವ ಕೆ. ಸುಧಾಕರ್ ಅವರು ಅಧಿಕಾರಿಗಳ ಜೊತೆಗೆ ಊಟ ಮಾಡುತ್ತಲೇ ಆಸ್ಪತ್ರೆ ಕುರಿತು ಮಾಹಿತಿ ಪಡೆದರು.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ: ವಿಶೇಷ ಚೇತನ ಸಹೋದರರ ಜಮೀನು ನಾಶ; ಪ್ರತಿಭಟನೆ ಹಾದಿ ಹಿಡಿದ ಸಹೋದರರು

ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ಜಮೀನಿಗೆ ಹಾನಿಯಾಗಿದೆ ಎಂದು ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿಯ ವಿಶೇಷ ಚೇತನ ಸಹೋದರು ಪ್ರತಿಭಟನೆ ಮಾಡುತ್ತಿದ್ದಾರೆ. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಪಕ್ಕದಲ್ಲಿ ವಿಶೇಷ ಚೇತನ ಸಹೋದರರಾದ ವೇಣುಗೋಪಾಲ್ ಹಾಗೂ ನವೀನ್ ಕುಮಾರ್ ಎಂಬುವವರಿಗೆ ಸೇರಿದ ಜಮೀನು ಇದೆ.

ಈ ಜಮೀನಿಗೆ ದಶಪಥ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಮಳೆ ನೀರು ನುಗ್ಗಿದೆ. ಇದರಿಂದ ಜಮೀನಿನಲ್ಲಿದ್ದ 50ಕ್ಕೂ ಹೆಚ್ಚು ತೆಂಗಿನಮರಗಳು ನಾಶವಾಗಿವೆ ಎಂದು ಸಹೋದರರು ಆರೋಪಿಸುತ್ತಿದ್ದಾರೆ.

ಈ ಬಗ್ಗೆ ಡಿಬಿಎಲ್​ ​ಕಂಪನಿಯ ಅಧಿಕಾರಿಗಳ ಹಾಗೂ ತಾಲೂಕು ಆಡಳಿತದ ಗಮನಕ್ಕೆ ತಂದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲವೆಂದು ಆರೋಪ ಕೇಳಿ ಬಂದಿದೆ. ಹೀಗಾಗಿ ವಿಶೇಷ ಚೇತನ ಸಹೋದರರು ಇದೀಗ ಕೂಡಲೇ ಪರಿಹಾರ ನೀಡಿ ಅಥವಾ ಜಮೀನು ಸರಿಪಡಿಸಿಕೊಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:18 pm, Mon, 22 August 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?