AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

K-RIDE ಅಧಿಕಾರಿಗಳೊಂದಿಗೆ ಸಚಿವ ಎಂಬಿ ಪಾಟೀಲ್​ ಮಹತ್ವ ಸಭೆ: ವಿಜಯಪುರ-ಬೆಂಗಳೂರು ಪ್ರಯಾಣ 10 ಗಂಟೆಗೆ ತಗ್ಗಿಸಲು ಸೂಚನೆ

ಸಚಿವ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪೆನಿ ನಿಯಮಿತ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ರಾಜ್ಯದ ರೈಲ್ವೆ ಯೋಜನೆಗಳ ವೇಗವರ್ಧನೆ ಬಗ್ಗೆ ಚರ್ಚಿಸಲಾಗಿದೆ. ಈ ವೇಳೆ ವಿಜಯಪುರ-ಬೆಂಗಳೂರು ಪ್ರಯಾಣವನ್ನು 10 ಗಂಟೆಗೆ ಇಳಿಸುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ. ಪಾಟೀಲ್ ಸೂಚನೆ ನೀಡಿದ್ದಾರೆ.

K-RIDE ಅಧಿಕಾರಿಗಳೊಂದಿಗೆ ಸಚಿವ ಎಂಬಿ ಪಾಟೀಲ್​ ಮಹತ್ವ ಸಭೆ: ವಿಜಯಪುರ-ಬೆಂಗಳೂರು ಪ್ರಯಾಣ 10 ಗಂಟೆಗೆ ತಗ್ಗಿಸಲು ಸೂಚನೆ
K-RIDE ಅಧಿಕಾರಿಗಳೊಂದಿಗೆ ಸಚಿವ ಎಂ.ಬಿ ಪಾಟೀಲ್​ ಸಭೆ
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 17, 2025 | 8:00 AM

ಬೆಂಗಳೂರು, ಏಪ್ರಿಲ್​ 17: ಕರ್ನಾಟಕದ ಪ್ರಮುಖ ರೈಲ್ವೆ ಯೋಜನೆಗಳ ವೇಗ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪೆನಿ ನಿಯಮಿತ (Kride) ನ ಹಿರಿಯ ಅಧಿಕಾರಿಗಳೊಂದಿಗೆ  ನಿನ್ನೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ (M B Patil)​​ ಮಹತ್ವದ ಸಭೆ ಮಾಡಿದ್ದಾರೆ. ಈ ವೇಳೆ ವಿಜಯಪುರ-ಬೆಂಗಳೂರು ಪ್ರಯಾಣವನ್ನು 10 ಗಂಟೆಗೆ ತಗ್ಗಿಸಲು ಸೂಚನೆ ನೀಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ ಪಾಟೀಲ್​, ರಾಜ್ಯದ ಬಹುತೇಕ ಚಾಲ್ತಿಯಲ್ಲಿರುವ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬಹುದಾದ ಎಲ್ಲ ರೈಲ್ವೆ ಯೋಜನೆಗಳ ಕುರಿತು ಚರ್ಚಿಸಲಾಗಿದೆ.

ಇದನ್ನೂ ಓದಿ
Image
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
Image
ಗುಡ್ ಫ್ರೈಡೇ, ವಾರಾಂತ್ಯ ರಜೆ ಹಿನ್ನೆಲೆ ಗಗನಕ್ಕೇರಿದ ಖಾಸಗಿ ಬಸ್ ಟಿಕೆಟ್ ದರ
Image
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
Image
ಬೀದರ್‌ ಬೆಂಗಳೂರು ವಿಮಾನ ಹಾರಾಟ ಇಂದಿನಿಂದ ಶುರು: ಇಲ್ಲಿದೆ ವೇಳಾಪಟ್ಟಿ

ಸಚಿವ ಎಂ.ಬಿ ಪಾಟೀಲ್​ ಟ್ವೀಟ್​

ಬೆಂಗಳೂರಿನಿಂದ ವಿಜಯಪುರ ನಡುವಿನ ರೈಲ್ವೆ ಪ್ರಯಾಣ 14-15 ಗಂಟೆಗಳಾಗುತ್ತಿದ್ದು, ಕೆಲವೊಮ್ಮೆ15-16 ಗಂಟೆ ಕೂಡ ಆಗುತ್ತಿದೆ. ಸೂಕ್ತ ಸಲಹೆಗಳನ್ನು ನೀಡಿ ಈ ಪ್ರಯಾಣವನ್ನು 10 ಗಂಟೆಗಳಿಗೆ ಇಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಪ್ರಮುಖ ಯೋಜನೆಗಳ ಸ್ಥಿತಿಗತಿ ಹಾಗೂ ಸೂಚನೆಗಳು

  • ಗದಗ–ವಿಜಯಪುರ ಜೋಡಿ ಮಾರ್ಗ ಯೋಜನೆ ಕೊನೆಯ ಹಂತದಲ್ಲಿದ್ದು, ಬಾಗಲಕೋಟೆ ಸಮೀಪದ ಬಾಕಿ ಇರುವ ಭಾಗಕ್ಕೆ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ.
  • ರೈಲ್ವೆ ವಿದ್ಯುದ್ದೀಕರಣ ಯೋಜನೆ ತ್ವರಿತಗತಿಯಲ್ಲಿ ಮುಗಿಸಲು ಸೂಸಿದ್ದು ನಂತರ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಅನುಕೂಲವಾಗಲಿದೆ.
  • ಬಾಗಲಕೋಟೆ–ಕುಡಚಿ ಮಾರ್ಗದ ಖಜ್ಜಿದೋಣಿ–ಲೋಕಾಪುರ ಭಾಗದಲ್ಲಿರುವ ತೊಡಕುಗಳನ್ನು ನಿವಾರಿಸಲು ಕ್ರಮವಹಿಸಬೇಕೆಂದು ತಿಳಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಮಂಗಳೂರು-ಕೊಲ್ಲಂಗೆ ವಿಶೇಷ ರೈಲುಗಳು: ಇಲ್ಲಿದೆ ವೇಳಾಪಟ್ಟಿ

  • ಧಾರವಾಡ–ಕಿತ್ತೂರು–ಬೆಳಗಾವಿ ಹೊಸ ಮಾರ್ಗ ಈಗಾಗಲೇ ಮಂಜೂರಾಗಿದ್ದು, ಮೊಮ್ಮಿಗಟ್ಟಿ ಸಮೀಪ ಮಾರ್ಗ ಬದಲಾವಣೆಗಾಗಿ ಭೂಸ್ವಾಧೀನ ವಿಳಂಬವಾಗುತ್ತಿದೆ. ಇದನ್ನು ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಿಶೇಷ ಸಭೆ ಮಾಡುವುದಾಗಿ ತಿಳಿಸಿದ್ದಾರೆ.
  • ಲಿಂಗನಬಂಡಿ–ಕುಷ್ಟಗಿ, ಕುಷ್ಟಗಿ–ಜಿಮಲಾಪುರ, ತುಮಕೂರು–ದಾವಣಗೆರೆ ಮಾರ್ಗಗಳ ಪ್ರಗತಿ ಕುರಿತು ಸಮಾಲೋಚನೆ ಮಾಡಿದ್ದಾರೆ.
  • ಹುಬ್ಬಳ್ಳಿ–ಅಂಕೋಲಾ ಮಾರ್ಗದ ಮರು ಸಮೀಕ್ಷೆ ಅಂತಿಮಗೊಂಡಿದ್ದು, ಮುಂದಿನ ಹಂತದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
  • ಸಭೆಯಲ್ಲಿ K-RIDE ನ ವ್ಯವಸ್ಥಾಪಕ ನಿರ್ದೇಶಕಿ ಡಾ. ಎನ್. ಮಂಜುಳಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:55 am, Thu, 17 April 25

ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ