K-RIDE ಅಧಿಕಾರಿಗಳೊಂದಿಗೆ ಸಚಿವ ಎಂಬಿ ಪಾಟೀಲ್​ ಮಹತ್ವ ಸಭೆ: ವಿಜಯಪುರ-ಬೆಂಗಳೂರು ಪ್ರಯಾಣ 10 ಗಂಟೆಗೆ ತಗ್ಗಿಸಲು ಸೂಚನೆ

ಸಚಿವ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪೆನಿ ನಿಯಮಿತ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ರಾಜ್ಯದ ರೈಲ್ವೆ ಯೋಜನೆಗಳ ವೇಗವರ್ಧನೆ ಬಗ್ಗೆ ಚರ್ಚಿಸಲಾಗಿದೆ. ಈ ವೇಳೆ ವಿಜಯಪುರ-ಬೆಂಗಳೂರು ಪ್ರಯಾಣವನ್ನು 10 ಗಂಟೆಗೆ ಇಳಿಸುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ. ಪಾಟೀಲ್ ಸೂಚನೆ ನೀಡಿದ್ದಾರೆ.

K-RIDE ಅಧಿಕಾರಿಗಳೊಂದಿಗೆ ಸಚಿವ ಎಂಬಿ ಪಾಟೀಲ್​ ಮಹತ್ವ ಸಭೆ: ವಿಜಯಪುರ-ಬೆಂಗಳೂರು ಪ್ರಯಾಣ 10 ಗಂಟೆಗೆ ತಗ್ಗಿಸಲು ಸೂಚನೆ
K-RIDE ಅಧಿಕಾರಿಗಳೊಂದಿಗೆ ಸಚಿವ ಎಂ.ಬಿ ಪಾಟೀಲ್​ ಸಭೆ

Updated on: Apr 17, 2025 | 8:00 AM

ಬೆಂಗಳೂರು, ಏಪ್ರಿಲ್​ 17: ಕರ್ನಾಟಕದ ಪ್ರಮುಖ ರೈಲ್ವೆ ಯೋಜನೆಗಳ ವೇಗ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪೆನಿ ನಿಯಮಿತ (Kride) ನ ಹಿರಿಯ ಅಧಿಕಾರಿಗಳೊಂದಿಗೆ  ನಿನ್ನೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ (M B Patil)​​ ಮಹತ್ವದ ಸಭೆ ಮಾಡಿದ್ದಾರೆ. ಈ ವೇಳೆ ವಿಜಯಪುರ-ಬೆಂಗಳೂರು ಪ್ರಯಾಣವನ್ನು 10 ಗಂಟೆಗೆ ತಗ್ಗಿಸಲು ಸೂಚನೆ ನೀಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ ಪಾಟೀಲ್​, ರಾಜ್ಯದ ಬಹುತೇಕ ಚಾಲ್ತಿಯಲ್ಲಿರುವ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬಹುದಾದ ಎಲ್ಲ ರೈಲ್ವೆ ಯೋಜನೆಗಳ ಕುರಿತು ಚರ್ಚಿಸಲಾಗಿದೆ.

ಇದನ್ನೂ ಓದಿ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಗುಡ್ ಫ್ರೈಡೇ, ವಾರಾಂತ್ಯ ರಜೆ ಹಿನ್ನೆಲೆ ಗಗನಕ್ಕೇರಿದ ಖಾಸಗಿ ಬಸ್ ಟಿಕೆಟ್ ದರ
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಬೀದರ್‌ ಬೆಂಗಳೂರು ವಿಮಾನ ಹಾರಾಟ ಇಂದಿನಿಂದ ಶುರು: ಇಲ್ಲಿದೆ ವೇಳಾಪಟ್ಟಿ

ಸಚಿವ ಎಂ.ಬಿ ಪಾಟೀಲ್​ ಟ್ವೀಟ್​

ಬೆಂಗಳೂರಿನಿಂದ ವಿಜಯಪುರ ನಡುವಿನ ರೈಲ್ವೆ ಪ್ರಯಾಣ 14-15 ಗಂಟೆಗಳಾಗುತ್ತಿದ್ದು, ಕೆಲವೊಮ್ಮೆ15-16 ಗಂಟೆ ಕೂಡ ಆಗುತ್ತಿದೆ. ಸೂಕ್ತ ಸಲಹೆಗಳನ್ನು ನೀಡಿ ಈ ಪ್ರಯಾಣವನ್ನು 10 ಗಂಟೆಗಳಿಗೆ ಇಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಪ್ರಮುಖ ಯೋಜನೆಗಳ ಸ್ಥಿತಿಗತಿ ಹಾಗೂ ಸೂಚನೆಗಳು

  • ಗದಗ–ವಿಜಯಪುರ ಜೋಡಿ ಮಾರ್ಗ ಯೋಜನೆ ಕೊನೆಯ ಹಂತದಲ್ಲಿದ್ದು, ಬಾಗಲಕೋಟೆ ಸಮೀಪದ ಬಾಕಿ ಇರುವ ಭಾಗಕ್ಕೆ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ.
  • ರೈಲ್ವೆ ವಿದ್ಯುದ್ದೀಕರಣ ಯೋಜನೆ ತ್ವರಿತಗತಿಯಲ್ಲಿ ಮುಗಿಸಲು ಸೂಸಿದ್ದು ನಂತರ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಅನುಕೂಲವಾಗಲಿದೆ.
  • ಬಾಗಲಕೋಟೆ–ಕುಡಚಿ ಮಾರ್ಗದ ಖಜ್ಜಿದೋಣಿ–ಲೋಕಾಪುರ ಭಾಗದಲ್ಲಿರುವ ತೊಡಕುಗಳನ್ನು ನಿವಾರಿಸಲು ಕ್ರಮವಹಿಸಬೇಕೆಂದು ತಿಳಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಮಂಗಳೂರು-ಕೊಲ್ಲಂಗೆ ವಿಶೇಷ ರೈಲುಗಳು: ಇಲ್ಲಿದೆ ವೇಳಾಪಟ್ಟಿ

  • ಧಾರವಾಡ–ಕಿತ್ತೂರು–ಬೆಳಗಾವಿ ಹೊಸ ಮಾರ್ಗ ಈಗಾಗಲೇ ಮಂಜೂರಾಗಿದ್ದು, ಮೊಮ್ಮಿಗಟ್ಟಿ ಸಮೀಪ ಮಾರ್ಗ ಬದಲಾವಣೆಗಾಗಿ ಭೂಸ್ವಾಧೀನ ವಿಳಂಬವಾಗುತ್ತಿದೆ. ಇದನ್ನು ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಿಶೇಷ ಸಭೆ ಮಾಡುವುದಾಗಿ ತಿಳಿಸಿದ್ದಾರೆ.
  • ಲಿಂಗನಬಂಡಿ–ಕುಷ್ಟಗಿ, ಕುಷ್ಟಗಿ–ಜಿಮಲಾಪುರ, ತುಮಕೂರು–ದಾವಣಗೆರೆ ಮಾರ್ಗಗಳ ಪ್ರಗತಿ ಕುರಿತು ಸಮಾಲೋಚನೆ ಮಾಡಿದ್ದಾರೆ.
  • ಹುಬ್ಬಳ್ಳಿ–ಅಂಕೋಲಾ ಮಾರ್ಗದ ಮರು ಸಮೀಕ್ಷೆ ಅಂತಿಮಗೊಂಡಿದ್ದು, ಮುಂದಿನ ಹಂತದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
  • ಸಭೆಯಲ್ಲಿ K-RIDE ನ ವ್ಯವಸ್ಥಾಪಕ ನಿರ್ದೇಶಕಿ ಡಾ. ಎನ್. ಮಂಜುಳಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:55 am, Thu, 17 April 25