AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಲಾಲ್​ಬಾಗ್​ನಲ್ಲಿ ನಟ ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಫ್ಲವರ್ ಶೋ; ಸಚಿವ ಮುನಿರತ್ನ

ಆಗಸ್ಟ್ ಹದಿನೈದರ ಬಳಿಕ ಒಂದೆರಡು ದಿನಗಳ ಕಾಲ ಫ್ಲವರ್ ಶೋ ಮುಂದುವರಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಬಾರಿ ವಿದೇಶಗಳಿಂದಲೂ ಹೂವುಗಳನ್ನು ತರಿಸಲಾಗಿದೆ ಎಂದು ಸಚಿವ ಮುನಿರತ್ನ ಹೇಳಿದರು.

ಈ ವರ್ಷ ಲಾಲ್​ಬಾಗ್​ನಲ್ಲಿ ನಟ ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಫ್ಲವರ್ ಶೋ; ಸಚಿವ ಮುನಿರತ್ನ
ಲಾಲ್​ಬಾಗ್
TV9 Web
| Updated By: sandhya thejappa|

Updated on:Jul 12, 2022 | 12:28 PM

Share

ಬೆಂಗಳೂರು: ಈ ವರ್ಷ ಲಾಲ್​​ಬಾಗ್​ನಲ್ಲಿ (Lalbagh) ಆಗಸ್ಟ್ 5ರಿಂದ ಆ.15ರವರೆಗೆ ಫ್ಲವರ್ ಶೋ (Flower Show) ನಡೆಯಲಿದೆ ಎಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ತೋಟಗಾರಿಕಾ ಸಚಿವ ಮುನಿರತ್ನ (Munirathna) ಮಾಹಿತಿ ನೀಡಿದ್ದಾರೆ. ಈ ಬಾರಿ ನಟ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಫ್ಲವರ್ ಶೋ ನಡೆಯುತ್ತದೆ. ಆಗಸ್ಟ್ 5ರಂದು ಸಿಎಂ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಕೊವಿಡ್ ನಿಯಮಗಳ ಪಾಲನೆಯೊಂದಿಗೆ ಫ್ಲವರ್ ಶೋ ನಡೆಯುತ್ತದೆ. ಡಾ.ರಾಜ್​ಕುಮಾರ್ ಅವರ ಗಾಜನೂರಿನ ಮನೆಗೆ ಹೂವಿನ ಅಲಂಕಾರ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಆಗಸ್ಟ್ ಹದಿನೈದರ ಬಳಿಕ ಒಂದೆರಡು ದಿನಗಳ ಕಾಲ ಫ್ಲವರ್ ಶೋ ಮುಂದುವರಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಬಾರಿ ವಿದೇಶಗಳಿಂದಲೂ ಹೂವುಗಳನ್ನು ತರಿಸಲಾಗಿದೆ ಎಂದು ಸಚಿವ ಮುನಿರತ್ನ ಹೇಳಿದರು. ಇನ್ನು ಇದೆ ವೇಳೆ ಸಚಿವ ಮುನಿರತ್ನ ರಾಜ್ಯದಲ್ಲಿ ಮಳೆಯಿಂದ ತೋಟಗಾರಿಕೆ ಬೆಳೆ ನಷ್ಟ ಆಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅಧಿಕಾರಿಗಳು ಬೆಳೆ ಹಾನಿ ಬಗ್ಗೆ ಸಂಪೂರ್ಣ ವರದಿ ತರಿಸುತ್ತಿದ್ದಾರೆ. ವರದಿ ಬಳಿಕ ರೈತರಿಗೆ ಮಾಡಬೇಕಿರುವ ಸಹಾಯವನ್ನು ಖಂಡಿತವಾಗಿಯೂ ಮಾಡುತ್ತೇವೆ. ಏನೇನು ನಷ್ಟ ಉಂಟಾಗಿದೆಯೋ ಅದನ್ನು ಗಮನಿಸುತ್ತೇವೆ. ಪ್ರಾಮಾಣಿಕವಾಗಿ ನಾವು ರೈತರ ಜೊತೆ ಇದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಮೊಹಮ್ಮದ್ ಜುಬೇರ್ ಮಧ್ಯಂತರ ಜಾಮೀನು ವಿಸ್ತರಿಸಿದ ಸುಪ್ರೀಂ; ಸೆಪ್ಟೆಂಬರ್ 7ಕ್ಕೆ ಮುಂದಿನ ವಿಚಾರಣೆ

ಇದನ್ನೂ ಓದಿ
Image
ಕಾರವಾರದ ಮೀನುಗಾರರ ಬಲೆಗೆ ಬಿದ್ದವೆರಡು ಆಲಿವ್ ರಿಡ್ಲೀ ಆಮೆಗಳು!
Image
ಮೊಹಮ್ಮದ್ ಜುಬೇರ್ ಮಧ್ಯಂತರ ಜಾಮೀನು ವಿಸ್ತರಿಸಿದ ಸುಪ್ರೀಂ; ಸೆಪ್ಟೆಂಬರ್ 7ಕ್ಕೆ ಮುಂದಿನ ವಿಚಾರಣೆ
Image
ಹರ್ಷ ಹಂತಕರಿಗೆ ರಾಜಾಥಿತ್ಯ ಆರೋಪ: ಪರಪ್ಪನ ಅಗ್ರಹಾರ ಜೈಲಿನ 35 ಸಿಬ್ಬಂದಿಗಳು ಅಮಾನತು
Image
Bhima Koregaon Case: ಭೀಮಾ ಕೊರೆಗಾಂವ್ ಪ್ರಕರಣ; ಆರೋಪಿ ವರವರ ರಾವ್​ಗೆ ಜಾಮೀನು ವಿಸ್ತರಣೆ

ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ನಡೆಯುವ ಬಗ್ಗೆ ಮಾತನಾಡಿದ ಸಚಿವ ಮುನಿರತ್ನ, ಕೆಪಿಸಿಸಿ ಅಧ್ಯಕ್ಷರು ಒಂದು ಉತ್ಸವ ಆಚರಣೆ ಮಾಡಿಕೊಂಡರೂ ಅಚ್ಚರಿ ಇಲ್ಲ. ಸಿದ್ದರಾಮಯ್ಯ ಅವರಿಗೆ ಹುಟ್ಟಿದ ದಿನವೇ ಗೊತ್ತಿಲ್ಲ. ಹಿಂದೆ ಸಿದ್ದರಾಮಣ್ಣ ಹುಟ್ಟಿದ ದಿನದ ಶುಭಾಷಯ ಅಂದರೆ ಏಯ್ ಹೋಗೋ ನನಗೆ ಹುಟ್ಟಿದ ದಿನವೇ ಗೊತ್ತಿಲ್ಲ ಅಂತಿದ್ದರು. ಆದರೆ ಈಗ ಇದ್ದಕ್ಕಿದ್ದಂತೆ 75ನೇ ವರ್ಷಕ್ಕೆ ಆಗಸ್ಟ್ 3 ಅಂತಲೇ ಹೇಗೆ ತಿಳಿಯಿತೋ ಗೊತ್ತಿಲ್ಲ. ಈ ಹುಟ್ಟುಹಬ್ಬ ಅವರು ಮಾಡಿಕೊಳ್ಳುತ್ತಿರುವುದಲ್ಲ. ಅವರ ಅಕ್ಕಪಕ್ಕದಲ್ಲಿ ಇರುವವರು ಮಾಡುತ್ತಿರುವುದು ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದಲ್ಲಿ ಐಕ್ಯಮತ್ಯವಿದೆ; ಒಳಜಗಳಗಳಿವೆ ಅನ್ನೋದು ಬಿಜೆಪಿಯ ಸೃಷ್ಟಿ: ಡಾ ಯತೀಂದ್ರ ಸಿದ್ದರಾಮಯ್ಯ

Published On - 12:25 pm, Tue, 12 July 22

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್