AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020-21 ನೇ ಸಾಲಿನ ಕ್ರೀಡಾ ಪ್ರಶಸ್ತಿಗಳನ್ನ ಘೋಷಣೆ ಮಾಡಿದ ಸಚಿವ ನಾರಾಯಣ ಗೌಡ; ಯಾರಿಗೆ ಯಾವ ಪ್ರಶಸ್ತಿ?

ಅಥ್ಲೆಟಿಕ್ಸ್​ನಲ್ಲಿ ಜೀವನ್ ಕೆಎಸ್, ನೆಟ್ ಬಾಲ್ ನಿತಿನ್, ಬ್ಯಾಡ್ಮಿಂಟನ್ ಅಶ್ವಿನಿ ಭಟ್, ರೋಯಿಂಗ್ ಜಿ ತರುಣ್ ಕೃಷ್ಣಪ್ರಸಾದ್, ಬ್ಯಾಸ್ಕೆಟ್ ಬಾಲ್ ಲೋಪಮುದ್ರಾ ತಿಮ್ಮಯ್ಯ, ಈಜು ಲಿಖಿತ್ ಎಸ್​ಪಿ, ಕ್ರಿಕೆಟ್ ಕರುಣ್ ನಾಯರ್ ಆಯ್ಕೆಯಾಗಿದ್ದಾರೆ.

2020-21 ನೇ ಸಾಲಿನ ಕ್ರೀಡಾ ಪ್ರಶಸ್ತಿಗಳನ್ನ ಘೋಷಣೆ ಮಾಡಿದ ಸಚಿವ ನಾರಾಯಣ ಗೌಡ; ಯಾರಿಗೆ ಯಾವ ಪ್ರಶಸ್ತಿ?
ಸಚಿವ ನಾರಾಯಣ ಗೌಡ
TV9 Web
| Updated By: sandhya thejappa|

Updated on:Apr 04, 2022 | 2:21 PM

Share

ಬೆಂಗಳೂರು: ರಾಜ್ಯ ಸರ್ಕಾರ ಕ್ರೀಡಾ (Sports) ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತದೆ. 2020-21 ನೇ ಸಾಲಿನ ಕ್ರೀಡಾ ಪ್ರಶಸ್ತಿಗಳನ್ನ ಇಂದು (ಏಪ್ರಿಲ್ 4) ಕ್ರೀಡಾ ಇಲಾಖೆ ಘೋಷಣೆ ಮಾಡಿದೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ರೀಡಾ ಸಚಿವ ನಾರಾಯಣ ಗೌಡ (Narayana Gowda) ಪ್ರಶಸ್ತಿಗಳನ್ನ ಘೋಷಣೆ ಮಾಡಿದ್ದಾರೆ. ಏಕಲವ್ಯ ಪ್ರಶಸ್ತಿಗೆ 15, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ 14, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ 10 ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗೆ ಇಬ್ಬರು ಆಯ್ಕೆಯಾಗಿದ್ದಾರೆ.

ಅಥ್ಲೆಟಿಕ್ಸ್​ನಲ್ಲಿ ಜೀವನ್ ಕೆಎಸ್, ನೆಟ್ ಬಾಲ್ ನಿತಿನ್, ಬ್ಯಾಡ್ಮಿಂಟನ್ ಅಶ್ವಿನಿ ಭಟ್, ರೋಯಿಂಗ್ ಜಿ ತರುಣ್ ಕೃಷ್ಣಪ್ರಸಾದ್, ಬ್ಯಾಸ್ಕೆಟ್ ಬಾಲ್ ಲೋಪಮುದ್ರಾ ತಿಮ್ಮಯ್ಯ, ಈಜು ಲಿಖಿತ್ ಎಸ್​ಪಿ, ಕ್ರಿಕೆಟ್ ಕರುಣ್ ನಾಯರ್, ಟೇಬಲ್ ಟೆನ್ನಿಸ್ ಅನರ್ಘ್ಯ ಮಂಜುನಾಥ್, ಸೈಕ್ಲಿಂಗ್ ದಾನಮ್ಮ ಚಿಚಖಂಡಿ, ವಾಲಿಬಾಲ್ ಅಶ್ವಲ್ ರೈ, ಜುಡೋ ವಸುಂಧರಾ ಎಂ ಎನ್, ಹಾಕಿ ಪ್ರಧಾನ್ ಸೋಮಣ್ಣ, ಕಬಡ್ಡಿ ಪ್ರಶಾಂತ್ ಕುಮಾರ್ ರೈ, ಪ್ಯಾರಾ ಅಥ್ಲೆಟಿಕ್ಸ್ ರಾಧಾ ವಿ, ಖೋಖೋ ಮುನೀರ್ ಬಾಷಾ ಏಕಲವ್ಯ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ಇನ್ನು ಜೀವಮಾನ ಸಾಧನಾ ಪ್ರಶಸ್ತಿಗೆ ಅಥ್ಲೆಟಿಕ್ಸ್​ನಲ್ಲಿ ಗಾವಂಕರ್ ಜಿವಿ, ಕಯಾಕಿಂಗ್ ಮತ್ತು ಕನೋಯಿಂನಲ್ಲಿ ಕ್ಯಾಪ್ಟನ್ ದಿಲೀಪ್ ಕುಮಾರ್ ಆಯ್ಕೆಯಾಗಿದ್ದಾರೆ.

ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಆಟ್ಯಾ-ಪಾಟ್ಯಾ ಪೂಜಾಗಾಲಿ, ಬಾಲ್ ಬ್ಯಾಡ್ಮಿಂಟನ್ ಬಿಎನ್ ಕಿರಣ್ ಕುಮಾರ್, ಕಂಬಳ ಗೋಪಾಲ ನಾಯ್ಕ್, ಖೋಖೋ ದೀಕ್ಷಾ ಕೆ, ಗುಂಡುಕಲ್ಲು ಎತ್ತುವುದು ಶಿವಯೋಗಿ ಬಸಪ್ಪ ಬಾಗೇವಾಡಿ, ಕುಸ್ತಿ ಲಕ್ಷ್ಮೀ ಬಿರೆಡೆಕರ್, ಯೋಗ ಪಿ ಗೋಪಾಲಕೃಷ್ಣ, ಪವರ್ ಲಿಫ್ಟಿಂಗ್ ರಾಘವೇಂದ್ರ ಎಸ್ ಹೊಂಡದಕೇರಿ, ಸಂಗ್ರಾಣಿ ಕಲ್ಲು ಎತ್ತುವುದು ಸಿದ್ದಪ್ಪ ಪಾಂಡಪ್ಪ ಹೊಸಮನಿ, ಕುಸ್ತಿ ಸೂರಜ್ ಎಸ್ ಅಣ್ಣಿಕೇರಿ, ಪ್ಯಾರಾ ಈಜು ಶಶಾಂಕ್ ಬಿಎಂ, ಯೋಗ ಡಿ ನಾಗರಾಜು, ಜಿಮ್ನ್ಯಾಸ್ಟಿಕ್ ಶ್ರೀವರ್ಷಿಣಿ, ಜುಡೋ ಅವಿನಾಶ್ ನಾಯ್ಕ ಆಯ್ಕೆ ಆಗಿದ್ದಾರೆ.

ಕ್ರೀಡಾ ಪೋಷಕ ಪ್ರಶಸ್ತಿಗೆ ದಕ್ಷಿಣಕನ್ನಡ ಜಿಲ್ಲೆಯ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನ್ ಟ್ರಸ್ಟ್ ಉಜಿರೆ,  ಬೆಂಗಳೂರು ನಗರ ಜಿಲ್ಲೆಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯ, ಬೆಂಗಳೂರು ನಗರ ಜಿಲ್ಲೆಯ ಆರ್ ವಿ ತಾಂತ್ರಿಕ ಮಹಾವಿದ್ಯಾಲಯ, ಬೆಂಗಳೂರು ನಗರ ಜಿಲ್ಲೆಯ ಹೂಡಿ ಸ್ಪೋರ್ಟ್ಸ್ ಕ್ಲಬ್, ಧಾರವಾಡ ಜಿಲ್ಲೆಯ ಬಾಲ ಮಾರುತಿ ಸಂಸ್ಥೆ, ಬೆಂಗಳೂರು ನಗರ ಜಿಲ್ಲೆ ಎಮಿನೆಂಟ್ ಶೂಟಿಂಗ್ ಹಬ್, ದಕ್ಷಿಣ ಕನ್ನಡ ಜಿಲ್ಲೆಯ ಬಾಲಾಂಜನೇಯ ಜಿಮ್ನಾಶಿಯಂ (ರಿ.) ಮಂಗಳೂರು, ಬೆಂಗಳೂರು ನಗರ ಜಿಲ್ಲೆಯ ಬಸವನಗುಡಿ ಅಕ್ವಾಟಿಕ್ ಸೆಂಟರ್, ಬೆಂಗಳೂರು ನಗರ ಜಿಲ್ಲೆಯ ದ್ರಾವಿಡ್ ಪಡುಕೋಣೆ ಅಕಾಡೆಮಿ, ಮಂಡ್ಯ ಜಿಲ್ಲೆಯ ಪೀಪಲ್ ಎಜುಕೇಷನ್ ಟ್ರಸ್ಟ್ ಆಯ್ಕೆಯಾಗಿದೆ.

ಇದನ್ನೂ ಓದಿ

ಲಖಿಂಪುರ ಖೇರಿ ರೈತರ ಹತ್ಯೆ ಪ್ರಕರಣ: ಆಶಿಶ್‌ ಮಿಶ್ರಾ ಮೇಲಿನ ಆಪಾದಿತ ಅಪರಾಧ ಗಂಭೀರ ಎಂದ ಯುಪಿ ಸರ್ಕಾರ, ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

ಜಿಮ್​ನಲ್ಲಿ ಕುಸಿದುಬಿದ್ದು ಯುವತಿ ಸಾವು ಪ್ರಕರಣ; ಪೋಸ್ಟ್ ಮಾರ್ಟಮ್ ವರದಿಯಲ್ಲಿ ಸಾವಿನ ಕಾರಣ ಬಹಿರಂಗ

Published On - 2:15 pm, Mon, 4 April 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!