AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಪ್ರೀ ಬಜೆಟ್ ಸಭೆಯಲ್ಲಿ ಭಾಗವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವೆ ನಿರ್ಮಲಾ ಪತ್ರ

ಸಿಎಂ ಸಿದ್ದರಾಮಯ್ಯಗೆಕೇಂದ್ರ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಪತ್ರ ಬರೆದು ಕೇಂದ್ರದ ಪ್ರೀ ಬಜೆಟ್ ಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಿದ್ದಾರೆ. ನಿರ್ಮಲಾ ಸೀತರಾಮನ್ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ ನೀಡಿದ್ದು ನನ್ಮ ಬದಲು ನನ್ನ ಸಂಪುಟದ ಸಹೋದ್ಯೋಗಿ ಸಚಿವ ಕೃಷ್ಣಭೈರೇಗೌಡ ಭಾಗಿ ಆಗ್ತಾರೆ ಎಂದಿದ್ದಾರೆ.

ಕೇಂದ್ರದ ಪ್ರೀ ಬಜೆಟ್ ಸಭೆಯಲ್ಲಿ ಭಾಗವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವೆ ನಿರ್ಮಲಾ ಪತ್ರ
ಸಚಿವೆ ನಿರ್ಮಲಾ ಸೀತಾರಾಮನ್, ಸಿಎಂ ಸಿದ್ದರಾಮಯ್ಯ
Anil Kalkere
| Edited By: |

Updated on:Jun 19, 2024 | 11:43 AM

Share

ಬೆಂಗಳೂರು, ಜೂನ್.19: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮೋದಿ 3.0 ಸರ್ಕಾರದ ಮೊದಲ ಸಮಗ್ರ ಬಜೆಟ್‌ ಅನ್ನು ಜುಲೈನಲ್ಲಿ ಮಂಡಿಸಲಿದ್ದಾರೆ. ಈ ಬೆನ್ನಲ್ಲೆ ಕರ್ನಾಟಕದ ಸಿಎಂ ಸಿದ್ದರಾಮಯ್ಯಗೆ (Siddaramaiah) ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಪತ್ರ ಬರೆದು ಕೇಂದ್ರದ (ಪೂರ್ವ ಬಜೆಟ್) ಪ್ರೀ ಬಜೆಟ್ ಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಿದ್ದಾರೆ.

ಜೂ.22ರಂದು ದೆಹಲಿಯಲ್ಲಿ ನಡೆಯುವ ಪ್ರೀ ಬಜೆಟ್ ಸಭೆಯಲ್ಲಿ ರಾಜ್ಯದ ಪರ ಭಾಗವಹಿಸಲು ಸಿಎಂಗೆ ಆಹ್ವಾನ ನೀಡಲಾಗಿದ್ದು ನಿರ್ಮಲಾ ಸೀತರಾಮನ್ ಪತ್ರಕ್ಕೆ ಸಿಎಂ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಸಭೆಯಲ್ಲಿ ಭಾಗಿಯಾಗಲು ಅಹ್ವಾನಿಸಿದ್ದಕ್ಕೆ ಧನ್ಯವಾದಗಳು. ಜೂ.22ರಂದು ಪೂರ್ವ ನಿಯೋಜಿತ ಕಾರ್ಯಕ್ರಮ ನಿಗದಿಯಾಗಿದೆ. ಹಾಗಾಗಿ ನಾನು ಮೀಟಿಂಗ್​​ನಲ್ಲಿ ಭಾಗಿಯಾಗಲು ಸಾಧ್ಯವಿಲ್ಲ. ನನ್ಮ ಬದಲು ನನ್ನ ಸಂಪುಟದ ಸಹೋದ್ಯೋಗಿ ಸಚಿವ ಕೃಷ್ಣಭೈರೇಗೌಡ ಭಾಗಿ ಆಗ್ತಾರೆ ಎಂದು ಸಚಿವೆ ನಿರ್ಮಲಾ ಸೀತರಾಮನ್ ಪತ್ರಕ್ಕೆ ಸಿಎಂ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಪತ್ರಿಕಾ ವಿತರಕರ ಬೇಡಿಕೆಗಳ ಬಗ್ಗೆ ಸರ್ಕಾರ ಸಹಾನುಭೂತಿಯಿಂದ ಪರಿಗಣನೆ: ಕೆವಿಪಿ

ಇನ್ನು ಮತ್ತೊಂದೆಡೆ ಸಚಿವೆ ನಿರ್ಮಲಾ ಸಿತಾರಾಮನ್ ಭಾರತೀಯ ಕೈಗಾರಿಕಾ ಒಕ್ಕೂಟ ಸಂಘಗಳ ಪ್ರಮುಖ ಪ್ರತಿನಿಧಿಗಳೊಂದಿಗೆ ಬಜೆಟ್ ಪೂರ್ವ ಚರ್ಚೆಗಳನ್ನು ನಡೆಸಲಿದ್ದಾರೆ.

ದೆಹಲಿಯ ನಾರ್ತ್ ಬ್ಲಾಕ್‌ನಲ್ಲಿ ಗುರುವಾರ ಸಂಜೆ 4 ರಿಂದ 6 ರವರೆಗೆ ನಡೆಯಲಿರುವ ಸಭೆಯಲ್ಲಿ ಭಾರತೀಯ ವಾಣಿಜ್ಯ ಮತ್ತು ಉದ್ಯಮಗಳ ಒಕ್ಕೂಟ (ಎಫ್‌ಐಸಿಸಿಐ), ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ), ಅಸೋಸಿಯೇಟೆಡ್ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಸ್ ಆಫ್ ಇಂಡಿಯಾ (ಅಸೋಚಾಮ್) , PHD ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ತಮ್ಮ ಬಜೆಟ್ ಸಲಹೆಗಳು ಮತ್ತು ಶಿಫಾರಸುಗಳನ್ನು ಪ್ರಸ್ತುತಪಡಿಸುತ್ತಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:13 am, Wed, 19 June 24

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!