AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

ಪಂಚಮಿತ್ರ ಪೋರ್ಟಲ್​ನ್ನು ಇಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಲೋಕಾರ್ಪಣೆ ಮಾಡಿದ್ದಾರೆ. ಗ್ರಾಮ ಪಂಚಾಯತಿಗಳಲ್ಲಿನ ಸೇವೆಯನ್ನ ಪಂಚಮಿತ್ರ ಪೋರ್ಟಲ್ ಮೂಲಕ ಪಡೆಯಬಹುದು. ಕಟ್ಟಡ ನಿರ್ಮಾಣ ಲೈಸೆನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ ಸೇರಿದಂತೆ ಹಲವಾರು ಸೇವೆಗಳನ್ನು ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಪಡೆಯಬಹುದಾಗಿದೆ.

ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ
ಪ್ರಸನ್ನ ಗಾಂವ್ಕರ್​
| Edited By: |

Updated on: Mar 01, 2024 | 4:27 PM

Share

ಬೆಂಗಳೂರು, ಮಾರ್ಚ್​ 1: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಪಂಚಮಿತ್ರ ಪೋರ್ಟಲ್ ​ಲೋಕಾರ್ಪಣೆ ಮಾಡಿದ್ದಾರೆ. ಗ್ರಾಮ ಪಂಚಾಯತಿಗಳಲ್ಲಿನ ಸೇವೆಯನ್ನ ಪಂಚಮಿತ್ರ ಪೋರ್ಟಲ್ ಮೂಲಕ ಪಡೆಯಬಹುದು. ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಿ ಸೇವೆಗಳನ್ನು ಪಡೆಯಬಹುದಾಗಿದೆ. ಕಟ್ಟಡ ನಿರ್ಮಾಣ ಲೈಸೆನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪದ ನಿರ್ವಹಣೆ, ಗ್ರಾಮ ನೈರ್ಮಲ್ಯದ ನಿರ್ವಹಣೆ, ವ್ಯಾಪಾರ ಪರವಾನಗಿ ಹೀಗೆ ಸಾಕಷ್ಟು ಸೇವೆಗಳನ್ನ ಪಡೆಯಬಹುದಾಗಿದೆ.

ಪಂಚಮಿತ್ರ ಪೋರ್ಟಲ್ ಮೂಲಕ ಈ ಸೇವೆಗಳನ್ನ ಪಡೆಯಬಹುದು 

ಸ್ವಾಧೀನ ಪ್ರಮಾಣಪತ್ರ

ರಸ್ತೆ, ಅಗೆವುದಾಕ್ಕಾಗಿ ಅನುಮತಿ

ಕೈಗಾರಿಕಾ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ

ನಿರಾಕ್ಷೇಪಣಾ ಪತ್ರ

MGNREGA ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ

ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು

ಇದನ್ನೂ ಓದಿ: ಲೋಕಸಭೆ ಚುನಾವಣೆ 2024: ಚಿಕ್ಕಮಗಳೂರಿನ ರೆಸಾರ್ಟ್​ನಲ್ಲಿ ಕುಮಾರಸ್ವಾಮಿ ವಾಸ್ತವ್ಯ, ಪಕ್ಷದ ಶಾಸಕರೊಂದಿಗೆ ಸಭೆ

ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ನಿಯಮಿತಗೊಳಿವಿಕರ

ಹೊಸ/ಅಸ್ತಿತ್ವದಲ್ಲಿರುವ ಓವರ್‌ಗೌಂಡ್ ಕೇಬಲ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲಸೌಕರ್ಯಗಳ ಅನುಮತಿ/ನಿಯಮಿತಗೊಳಿಸುವಿಕೆ

ನಮೂನೆ 9/11ಎ

ನಮೂನೆ 11 ಬಿ ಬಗ್ಗೆ ಮಾಹಿತಿ ಪಡೆಯಬಹುದು

ಬಿಜೆಪಿಯವರು ಎಲ್ಲವನ್ನೂ ಅನುಮಾನದಿಂದಲೇ ನೋಡುತ್ತಾರೆ

ಎಫ್​​ಎಸ್​ಎಲ್ ವರದಿ ವಿಚಾರವಾಗಿ ಮಾತನಾಡಿದ ಅವರು, ನಾನು ಯಾವುದನ್ನೂ ನೋಡಿಲ್ಲ. ಬೆಳಗ್ಗೆ 8 ಗಂಟೆಗೆ ಮನೆ ಬಿಟ್ಟವನು ನನಗೆ ಎಫ್​ಎಸ್​ಎಲ್ ವಿಚಾರ ಗೊತ್ತಿಲ್ಲ. ಬಿಜೆಪಿಯವರು ಎಲ್ಲವನ್ನೂ ಅನುಮಾನದಿಂದಲೇ ನೋಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಉಸ್ತುವಾರಿ ಅವಧಿಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರು: ಬಿಜೆಪಿ ಕಿಡಿ

ಗುಲ್ಬರ್ಗ ಮರ್ಡರ್ ವಿಚಾರ ವೈಯಕ್ತಿಕ ಕಾರಣಕ್ಕೆ ಎಂದು ಮಾಹಿತಿ ಇದೆ. ರಾಜಕೀಯ ಕಾರಣ ಇಲ್ಲ ಅಂತ ಸದ್ಯಕ್ಕೆ ಮಾಹಿತಿ ಇದೆ. ಹೊಡೆದವನು ಅವನಿಗೆ ಬೇಲ್ ಕೊಡಿಸಿದ್ದನಂತೆ. ಹೊಡೆದವರು ಯಾರಪ್ಪ, ಹೊಡೆಸಿಕೊಂಡವರು ಯಾರಪ್ಪ? ಮೇಲ್ನೋಟಕ್ಕೆ ರಾಜಕೀಯ ಕಾರಣ ಇಲ್ಲ ಎಂದು ಮಾಹಿತಿ ಇದೆ. ತನಿಖೆ ನಡೆಯುತ್ತಿದೆ ಸಂಜೆಯೊಳಗೆ ಮಾಹಿತಿ ಇನ್ನಷ್ಟು ಸಿಗಬಹುದು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್