AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ನೊಟೀಸ್ ಇಲ್ಲದೆ ರಾಜಕಾಲುವೆ ಒತ್ತುವರಿ ತೆರವು; ಸಚಿವ ಆರ್ ಅಶೋಕ್

R Ashok: ಕರ್ನಾಟಕದಲ್ಲಿ ಮಳೆ ಪರಿಹಾರ ಕಾಮಗಾರಿಗಳನ್ನು ನಿರ್ವಹಿಸಲು ₹ 8 ಸಾವಿರ ಕೋಟಿ ಹಣ ಬಿಡುಗಡೆಯಾಗಿದೆ ಎಂದು ಆರ್ ಅಶೋಕ್ ಹೇಳಿದರು.

Bengaluru Rains: ನೊಟೀಸ್ ಇಲ್ಲದೆ ರಾಜಕಾಲುವೆ ಒತ್ತುವರಿ ತೆರವು; ಸಚಿವ ಆರ್ ಅಶೋಕ್
ಸಚಿವ ಆರ್ ಅಶೋಕ
TV9 Web
| Edited By: |

Updated on:Sep 01, 2022 | 7:42 AM

Share

ಬೆಂಗಳೂರು: ನಗರದಲ್ಲಿ ಮಳೆಯಿಂದ (Bengaluru Rains) ಆಗಿರುವ ಅನಾಹುತದ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ಕಳೆದ ಬಾರಿ ಮಳೆಯಿಂದ ಸಮಸ್ಯೆ ಎದುರಿಸಿದ್ದ ಪ್ರದೇಶಗಳಲ್ಲಿ ರಿಪೇರಿ ಕಾಮಗಾರಿ ನಡೆದಿದೆ. ಇಂಥ ಸ್ಥಳಗಳಲ್ಲಿ ಹೊಸ ಕಾಲುವೆಗಳನ್ನು ನಿರ್ಮಿಸಿ ನೀರು ಹೊರಹೋಗಲು ವ್ಯವಸ್ಥೆ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ (R Ashok) ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಗರದಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿದ್ದರೆ ಯಾವುದೇ ಮುಲಾಜಿಲ್ಲದೆ ತೆರವುಗೊಳಿಸುತ್ತೇವೆ. ಇಂಥ ಒತ್ತುವರಿ ತೆರವುಗೊಳಿಸಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ನೊಟೀಸ್ ಸಹ ಕೊಡುವ ಅಗತ್ಯವಿಲ್ಲ. ಒತ್ತುವರಿ ಮಾಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಯಾವುದೇ ಒತ್ತಡಕ್ಕೆ ಮಣಿಯದೆ ತೆರವು ಮಾಡುವಂತೆ ಸೂಚಿಸಿದ್ದೇವೆ. ಭಾರಿ ಮಳೆಯಿಂದ ಎಲ್ಲ ಕರೆ ಕಟ್ಟೆಗಳು ಭರ್ತಿಯಾಗಿವೆ ಎಂದು ಅವರು ಹೇಳಿದರು.

ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಗಿದ್ದರೆ ಪರಿಹಾರ ನೀಡಲಾಗುವುದು. ಹೊಲ-ಗದ್ದೆಗಳ ಬೆಳೆಹಾನಿಗೂ ಪರಿಹಾರ ನೀಡಲಾಗುವುದು. ಸೆ.3ರಂದು ಹಾಸನ, ತುಮಕೂರು, ಮಂಗಳೂರು ಭಾಗದಲ್ಲಿ ಪ್ರವಾಸ ಮಾಡಲಿದ್ದೇನೆ ಎಂದು ಹೇಳಿದರು. ಮಹದೇವಪುರ, ಬೊಮ್ಮನಹಳ್ಳಿ ಭಾಗದಲ್ಲಿ ಅನಾಹುತಗಳು ಸಂಭವಿಸಿವೆ. ಹೊಸ ಕಾಲುವೆಗಳ ನಿರ್ಮಾಣ ಮಾಡಿ ನೀರು ಆಚೆ ಹೋಗಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದ ಬಹುತೇಕ ಎಲ್ಲ ಕೆರೆಗಳೂ ತುಂಬಿವೆ ಎಂದು ಹೇಳಿದರು.

ಪರಿಹಾರ ಕಾಮಗಾರಿಗಳನ್ನು ನಿರ್ವಹಿಸಲು ₹ 8 ಸಾವಿರ ಕೋಟಿ ಹಣ ಬಿಡುಗಡೆಯಾಗಿದೆ. ರಾಜ್ಯದಲ್ಲಿ ಬೇಸಿಗೆಯೇ ಇರಲಿಲ್ಲ ಎನ್ನುವಂತೆ ಮಳೆ ಬರುತ್ತಿದೆ. ಇದು ಸಂಕಷ್ಟ ಪರಿಸ್ಥಿತಿ. ರಾಜ್ಯದ ಜನರು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಅವರು ವಿನಂತಿಸಿದರು.

ರಾಜಕಾಲುವೆ ನಿರ್ಮಾಣಕ್ಕೆ 1500 ಕೋಟಿ ಬಿಡುಗಡೆ; ಸಿಎಂ ಬಸವರಾಜ ಬೊಮ್ಮಾಯಿ

ಮಳೆಯಿಂದಾಗಿ ಬೆಂಗಳೂರಿನಲ್ಲಿ (Bengaluru Rain) ಅಪಾರ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು. ಗೃಹ ಕಚೇರಿ ಕೃಷ್ಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಗರದ ವಿವಿಧ ಬಡಾವಣೆಗಳಲ್ಲಿ 122ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆಯಾಗಿದೆ. ಕಂದಾಯ ಸಚಿವರು ಪರಿಶೀಲಿಸಿ, ಸಂತ್ರಸ್ತರಿಗೆ ಪರಿಹಾರ ನೀಡಲಿದ್ದಾರೆ. ಮಹದೇವಪುರ, ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಹಾನಿಯ ಪ್ರಮಾಣ ಹೆಚ್ಚು ಎಂದು ಹೇಳಿದರು.

ನಗರದ ಹಲವೆಡೆ ಮುಖ್ಯ ಕಾಲುವೆಗಳು ಮುಚ್ಚಿಕೊಂಡಿವೆ. ಕೆಲವೆಡೆ ಕಾಲುವೆಗಳ ಅಗಲ ಕಡಿಮೆಯಿರುವುದರಿಂದ ತೊಂದರೆಯಾಗುತ್ತಿದೆ. ನೀರು ಹರಿಯಲು ಇರುವ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಸೂಚನೆ ನೀಡಿದ್ದೇನೆ. ಹೊರ ವರ್ತುಲ ರಸ್ತೆಯಲ್ಲಿ ನಿಂತಿರುವ ನೀರನ್ನು ಸಮರ್ಪಕವಾಗಿ ಹರಿಸಲು ಸೂಚನೆ ನೀಡಿದ್ದೇನೆ. ಮಳೆ ನೀರು ಸಾಗಿಸುವ ಚರಂಡಿಗಳನ್ನು ಪರಸ್ಪರ ಸಂಬಂಧ ಕಲ್ಪಿಸದಿರುವ ಕಾರಣ ಲೇಔಟ್​ಗಳಲ್ಲಿ ನೀರು ನಿಂತಿದೆ ಎಂದು ಹೇಳಿದರು.

Published On - 7:41 am, Thu, 1 September 22

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ