AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ ಅನುಭವ: ಭೂಕಂಪದ ಮುನ್ಸೂಚನೆ ಅಲ್ಲ ಭಯಪಡಬೇಡಿ ಎಂದು ಆರ್ ಅಶೋಕ್ ಪ್ರಕಟಣೆ

ನಾನು ಅಧಿಕಾರಿಗಳು, ತಜ್ಞರ ಜೊತೆ ಸಂಪರ್ಕದಲ್ಲಿದ್ದೇನೆ. ಯಾರೂ ಆತಂಕಕ್ಕೆ ಒಳಗಾಗಬೇಡಿ ಎಂದು ಸಚಿವರು ಮನವಿ ಮಾಡಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಸಚಿವ ಆರ್. ಅಶೋಕ್ ಈ ಸಂಬಂಧ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ ಅನುಭವ: ಭೂಕಂಪದ ಮುನ್ಸೂಚನೆ ಅಲ್ಲ ಭಯಪಡಬೇಡಿ ಎಂದು ಆರ್ ಅಶೋಕ್ ಪ್ರಕಟಣೆ
ಆರ್ ಅಶೋಕ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 26, 2021 | 6:30 PM

Share

ಬೆಂಗಳೂರು: ಕರ್ನಾಟಕ ರಾಜಧಾನಿಯಲ್ಲಿ ಭೂಮಿ ಕಂಪಿಸಿದ ಅನುಭವ ವಿಚಾರವಾಗಿ ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಯಾರೂ ಭಯಪಡಬೇಡಿ, ಇದು ಸಣ್ಣ ಪ್ರಮಾಣದ ಕಂಪನ. ಹೆಮ್ಮಿಗೆಪುರ, ಕಗ್ಗಲೀಪುರ, ಕೆಂಗೇರಿ, ಆರ್.ಆರ್. ನಗರ, ಮುಂತಾದ ಕಡೆ ಶಬ್ದ, ಸಣ್ಣ ಪ್ರಮಾಣದ ಕಂಪನವಾಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರ, ತಜ್ಞರ ವರದಿ ಪಡೆದಿದ್ದು ಇದು ಭೂಕಂಪದ ಮುನ್ಸೂಚನೆ ಅಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ನಾನು ಅಧಿಕಾರಿಗಳು, ತಜ್ಞರ ಜೊತೆ ಸಂಪರ್ಕದಲ್ಲಿದ್ದೇನೆ. ಯಾರೂ ಆತಂಕಕ್ಕೆ ಒಳಗಾಗಬೇಡಿ ಎಂದು ಸಚಿವರು ಮನವಿ ಮಾಡಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಸಚಿವ ಆರ್. ಅಶೋಕ್ ಈ ಸಂಬಂಧ ಮನವಿ ಮಾಡಿಕೊಂಡಿದ್ದಾರೆ.

ಭೂಮಿ ಕಂಪಿಸಿದ ಅನುಭವ ಬೆಂಗಳೂರಿನ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿತ್ತು. ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ, ಮೈಸೂರು ರಸ್ತೆಯ ಕೆಲ ಏರಿಯಾದಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿತ್ತು. ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದೆ. ಮೊದಲ ಸಲ ಲಘುವಾಗಿ ಕಂಪಿಸಿದ ಅನುಭವವಾಗಿದ್ದು, ನಂತರ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ.

ಮಂಡ್ಯದಲ್ಲಿಯೂ ಭಾರೀ ಶಬ್ದ ಕೇಳಿ ಬಂದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. 11.50ರ ಸುಮಾರಿಗೆ ಮೊದಲ ಬಾರಿಗೆ ಜೋರು ಶಬ್ದ ಕೇಳಿ ಬಂದಿದೆ. 10-15 ನಿಮಿಷ ಅಂತರದಲ್ಲಿ 2 ಬಾರಿ ಕೇಳಿಬಂದ ಶಬ್ದ ಕೇಳಿ ಬಂದಿದೆ. ಕೆಲ ಕಾಲ ಭೂಕಂಪನದ ಅನುಭವವಾಗಿದ್ದು, ಶಬ್ಧಕ್ಕೆ ಮನೆ, ಕಚೇರಿ ಕಟ್ಟಡಗಳ ಕಿಟಕಿಗಳು, ವಸ್ತುಗಳು ನಲುಗಿವೆ. ಈ ಹಿಂದೆ ಕೆಆರ್‌ಎಸ್, ಪಾಂಡವಪುರ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಶಬ್ಧ ಕೇಳಿಬಂದಿತ್ತು. ಇದೀಗ ಮಂಡ್ಯ ನಗರದಲ್ಲಿ ಭಾರೀ ಶಬ್ದ ಕೇಳಿ ಬಂದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ ಅನುಭವದ ಬಗ್ಗೆ ಟಿವಿ9 ಜತೆ ಅಭಿಪ್ರಾಯ ಹಂಚಿಕೊಂಡ ಹೆಮ್ಮಿಗೆಪುರ ನಿವಾಸಿ

ಇದನ್ನೂ ಓದಿ: Bengaluru Earthquake: ಬೆಂಗಳೂರಿನಲ್ಲಿ ಎರಡೆರಡು ಬಾರಿ ಭೂಕಂಪದ ಅನುಭವ; ಮಂಡ್ಯದಲ್ಲಿ ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಜನ!

Published On - 6:29 pm, Fri, 26 November 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ