AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ ಅನುಭವ: ಭೂಕಂಪದ ಮುನ್ಸೂಚನೆ ಅಲ್ಲ ಭಯಪಡಬೇಡಿ ಎಂದು ಆರ್ ಅಶೋಕ್ ಪ್ರಕಟಣೆ

ನಾನು ಅಧಿಕಾರಿಗಳು, ತಜ್ಞರ ಜೊತೆ ಸಂಪರ್ಕದಲ್ಲಿದ್ದೇನೆ. ಯಾರೂ ಆತಂಕಕ್ಕೆ ಒಳಗಾಗಬೇಡಿ ಎಂದು ಸಚಿವರು ಮನವಿ ಮಾಡಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಸಚಿವ ಆರ್. ಅಶೋಕ್ ಈ ಸಂಬಂಧ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ ಅನುಭವ: ಭೂಕಂಪದ ಮುನ್ಸೂಚನೆ ಅಲ್ಲ ಭಯಪಡಬೇಡಿ ಎಂದು ಆರ್ ಅಶೋಕ್ ಪ್ರಕಟಣೆ
ಆರ್ ಅಶೋಕ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 26, 2021 | 6:30 PM

Share

ಬೆಂಗಳೂರು: ಕರ್ನಾಟಕ ರಾಜಧಾನಿಯಲ್ಲಿ ಭೂಮಿ ಕಂಪಿಸಿದ ಅನುಭವ ವಿಚಾರವಾಗಿ ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಯಾರೂ ಭಯಪಡಬೇಡಿ, ಇದು ಸಣ್ಣ ಪ್ರಮಾಣದ ಕಂಪನ. ಹೆಮ್ಮಿಗೆಪುರ, ಕಗ್ಗಲೀಪುರ, ಕೆಂಗೇರಿ, ಆರ್.ಆರ್. ನಗರ, ಮುಂತಾದ ಕಡೆ ಶಬ್ದ, ಸಣ್ಣ ಪ್ರಮಾಣದ ಕಂಪನವಾಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರ, ತಜ್ಞರ ವರದಿ ಪಡೆದಿದ್ದು ಇದು ಭೂಕಂಪದ ಮುನ್ಸೂಚನೆ ಅಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ನಾನು ಅಧಿಕಾರಿಗಳು, ತಜ್ಞರ ಜೊತೆ ಸಂಪರ್ಕದಲ್ಲಿದ್ದೇನೆ. ಯಾರೂ ಆತಂಕಕ್ಕೆ ಒಳಗಾಗಬೇಡಿ ಎಂದು ಸಚಿವರು ಮನವಿ ಮಾಡಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಸಚಿವ ಆರ್. ಅಶೋಕ್ ಈ ಸಂಬಂಧ ಮನವಿ ಮಾಡಿಕೊಂಡಿದ್ದಾರೆ.

ಭೂಮಿ ಕಂಪಿಸಿದ ಅನುಭವ ಬೆಂಗಳೂರಿನ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿತ್ತು. ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ, ಮೈಸೂರು ರಸ್ತೆಯ ಕೆಲ ಏರಿಯಾದಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿತ್ತು. ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದೆ. ಮೊದಲ ಸಲ ಲಘುವಾಗಿ ಕಂಪಿಸಿದ ಅನುಭವವಾಗಿದ್ದು, ನಂತರ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ.

ಮಂಡ್ಯದಲ್ಲಿಯೂ ಭಾರೀ ಶಬ್ದ ಕೇಳಿ ಬಂದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. 11.50ರ ಸುಮಾರಿಗೆ ಮೊದಲ ಬಾರಿಗೆ ಜೋರು ಶಬ್ದ ಕೇಳಿ ಬಂದಿದೆ. 10-15 ನಿಮಿಷ ಅಂತರದಲ್ಲಿ 2 ಬಾರಿ ಕೇಳಿಬಂದ ಶಬ್ದ ಕೇಳಿ ಬಂದಿದೆ. ಕೆಲ ಕಾಲ ಭೂಕಂಪನದ ಅನುಭವವಾಗಿದ್ದು, ಶಬ್ಧಕ್ಕೆ ಮನೆ, ಕಚೇರಿ ಕಟ್ಟಡಗಳ ಕಿಟಕಿಗಳು, ವಸ್ತುಗಳು ನಲುಗಿವೆ. ಈ ಹಿಂದೆ ಕೆಆರ್‌ಎಸ್, ಪಾಂಡವಪುರ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಶಬ್ಧ ಕೇಳಿಬಂದಿತ್ತು. ಇದೀಗ ಮಂಡ್ಯ ನಗರದಲ್ಲಿ ಭಾರೀ ಶಬ್ದ ಕೇಳಿ ಬಂದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ ಅನುಭವದ ಬಗ್ಗೆ ಟಿವಿ9 ಜತೆ ಅಭಿಪ್ರಾಯ ಹಂಚಿಕೊಂಡ ಹೆಮ್ಮಿಗೆಪುರ ನಿವಾಸಿ

ಇದನ್ನೂ ಓದಿ: Bengaluru Earthquake: ಬೆಂಗಳೂರಿನಲ್ಲಿ ಎರಡೆರಡು ಬಾರಿ ಭೂಕಂಪದ ಅನುಭವ; ಮಂಡ್ಯದಲ್ಲಿ ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಜನ!

Published On - 6:29 pm, Fri, 26 November 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು