AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಕಾಂಗ್ರೆಸ್​​​ ಬಸ್​ ಯಾತ್ರೆ ವಿಚಾರ: ಕೈ ನಾಯಕರು​​ ರಿಮೋಟ್​ ಕಂಟ್ರೋಲ್​ ಗಾಡಿ ಇದ್ದಂತೆ: ಆರ್​ ಅಶೋಕ್​

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ 80 ವರ್ಷದ ಮಲ್ಲಿಕಾರ್ಜುನ​ ಖರ್ಗೆ ಅವರನ್ನು ಕೂರಿಸಿದ್ದರೂ, ಇವರ ಹಿಂದೆ ಸೋನಿಯಾ ಗಾಂಧಿ ಇದ್ದಾರೆ ಅಂತ ಗೊತ್ತಿದೆ.

ರಾಜ್ಯ ಕಾಂಗ್ರೆಸ್​​​ ಬಸ್​ ಯಾತ್ರೆ ವಿಚಾರ: ಕೈ ನಾಯಕರು​​ ರಿಮೋಟ್​ ಕಂಟ್ರೋಲ್​ ಗಾಡಿ ಇದ್ದಂತೆ:  ಆರ್​ ಅಶೋಕ್​
ಕಂದಾಯ ಸಚಿವ ಆರ್​ ಅಶೋಕ
TV9 Web
| Edited By: |

Updated on: Oct 25, 2022 | 3:00 PM

Share

ಬೆಂಗಳೂರು: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ 80 ವರ್ಷದ ಮಲ್ಲಿಕಾರ್ಜುನ​ ಖರ್ಗೆ ಅವರನ್ನು ಕೂರಿಸಿದ್ದರೂ, ಇವರ ಹಿಂದೆ ಸೋನಿಯಾ ಗಾಂಧಿ ಇದ್ದಾರೆ ಅಂತ ಗೊತ್ತಿದೆ. ಸ್ಟೇರಿಂಗ್ ಯಾರ ಬಳಿ ಇದೆ ಅಂತ ಗೊತ್ತಿದೆ. ಅವರದ್ದು ರಿಮೋಟ್​ ಕಂಟ್ರೋಲ್​ ಗಾಡಿ ಎಂದು ರಾಜ್ಯ ಕಾಂಗ್ರೆಸ್​​​ (Congress) ಬಸ್​ ಯಾತ್ರೆಯನ್ನು ಪ್ರಾರಂಭಿಸಲು ಹೊರಟಿರುವ ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಕಂದಾಯ ಸಚಿವ ಆರ್​. ಅಶೋಕ (R Ashok) ವ್ಯಂಗ್ಯವಾಡಿದ್ದಾರೆ. ವಿಧಾನಸೌದದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರ ಕಾಂಗ್ರೆಸ್ ಕೊನೆ ಮೊಳೆಯನ್ನು ಕರ್ನಾಟಕದಲ್ಲಿ ಹೊಡೆಯುತ್ತದೆ ಎಂದು ಕಾಲೆಳೆದರು.

ಕೇಂಪೇಗೌಡರ ಪ್ರತಿಮೆ ಅನಾವರಣಕ್ಕೆ ಪ್ರಧಾನಿ ಬರುತ್ತಾರೆ

ನಾಡಪ್ರಭು ಕೇಂಪೇಗೌಡರ ಪ್ರತಿಮೆ ಅನಾವರಣ ಕುರಿತು ಮಾತನಾಡಿದ ಅವರು ನಾಡಪ್ರಭು ಕೇಂಪೇಗೌಡರ ಪ್ರತಿಮೆ ಅನಾವರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ. ಪ್ರತಿ ಹಳ್ಳಿಯಿಂದ ಮೃತ್ತಿಕೆ ಸಂಗ್ರಹಿಸುವಂತೆ ಜಿಲ್ಲಾಧಿಕರಿಗಳಿಗೆ ಸೂಚನೆ ನೀಡಿದ್ದೇವೆ. ನ. 8ರಂದು ಸಂಗ್ರಹವಾದ ಮೃತ್ತಿಕೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಇಡಬೇಕು. ಆ ನಂತರ ನ.9ಕ್ಕೆ ಮೃತ್ತಿಕೆ ಬೆಂಗಳೂರಿಗೆ ತಲುಪಲಿದೆ. ಕೇಂಪೇಗೌಡರು ಯಾರು ಎಂದು ನಾಡಿಗೆ ತಿಳಿಸುವ ಕೆಲಸ ನಾವು ಮಾಡುತ್ತಿದ್ದೇವೆ. ಬಹಳ ಜನ ಕೇಂಪೇಗೌಡರ ಹೆಸರು ಹೇಳಿ ರಾಜಕಾರಣ ಮಾಡಿದ್ದಾರೆ. ವಿಧಾನಸೌದಲ್ಲಿ ಕೇಂಪೇಗೌಡರ ಪ್ರತಿಮೆ ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮತಿ ನೀಡಿದ್ದಾರೆ. ವಿಧಾನಸೌದ ಮುಂಬಾಗ ನೆಹರು, ಅಂಬೇಡ್ಕರ್​ ಪ್ರತಿಮೆಗಳ ನಡುವೆ ಕೇಂಪೇಗೌಡರ ಪ್ರತಿಮೆ ಸ್ಥಾಪನೆಯಾಗಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರ ನಾಟಕ ಕಂಪನಿಯ ಬಣ್ಣ ಬಯಲಾಗಿದೆ

ಬಿಜೆಪಿ SC, ST ಮೀಸಲಾತಿ ಪ್ರಮಾಣ ಹೆಚ್ಚಿಸುವ ಕೆಲಸ ಮಾಡಿದೆ. ನ್ಯಾ. ನಾಗಮೋಹನ ದಾಸ್​ ಸಮಿತಿ ಮಾಡಿದ್ದು ವಿಪಾಕ್ಷ ನಾಯಕ ಸಿದ್ದರಾಮಯ್ಯ ಅಲ್ಲ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ. ಸಿದ್ದರಾಮಯ್ಯನವರ ನಾಟಕ ಕಂಪನಿಯ ಬಣ್ಣ ಬಯಲಾಗಿದೆ. ಬಸ್ಕಿ ಹೊಡೆಯೋದು ಕೈಹಿಡಿದು ಓಡೋದನ್ನು ಮಾಡಿದ್ದಾರೆ, ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಎಣ್ಣೆ-ಸೀಗೆಕಾಯಿ ರೀತಿ ಎಂದು ವಾಗ್ದಾಳಿ ಮಾಡಿದರು.

ಕೆಎಫ್​​ಡಿಯನ್ನು ಬ್ಯಾನ್ ಮಾಡಬೇಕು

ಶಿವಮೊಗ್ಗದಲ್ಲಿ ನಡೆದ ಗಲಾಟೆ ಪ್ರಕರಣಗಳ ಕುರಿತು ಮಾತನಾಡಿದ ಅವರು ಕೇಂದ್ರ ಸರ್ಕಾರ ಪಿಎಫ್​ಐ ಬ್ಯಾನ್ ಮಾಡಿದೆ. ಅದೇ ರೀತಿ ಕೆಎಫ್​​ಡಿಯನ್ನು ಬ್ಯಾನ್ ಮಾಡಬೇಕು. ಕಿಡಿಗೇಡಿಗಳನ್ನು ಮುಲಾಜಿಲ್ಲದೆ ಮಟ್ಟ ಹಾಕುತ್ತೇವೆ. ಯಾರೇ ಇದ್ದರು ಮಟ್ಟ ಹಾಕುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ