AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಕಾಂಗ್ರೆಸ್​​​ ಬಸ್​ ಯಾತ್ರೆ ವಿಚಾರ: ಕೈ ನಾಯಕರು​​ ರಿಮೋಟ್​ ಕಂಟ್ರೋಲ್​ ಗಾಡಿ ಇದ್ದಂತೆ: ಆರ್​ ಅಶೋಕ್​

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ 80 ವರ್ಷದ ಮಲ್ಲಿಕಾರ್ಜುನ​ ಖರ್ಗೆ ಅವರನ್ನು ಕೂರಿಸಿದ್ದರೂ, ಇವರ ಹಿಂದೆ ಸೋನಿಯಾ ಗಾಂಧಿ ಇದ್ದಾರೆ ಅಂತ ಗೊತ್ತಿದೆ.

ರಾಜ್ಯ ಕಾಂಗ್ರೆಸ್​​​ ಬಸ್​ ಯಾತ್ರೆ ವಿಚಾರ: ಕೈ ನಾಯಕರು​​ ರಿಮೋಟ್​ ಕಂಟ್ರೋಲ್​ ಗಾಡಿ ಇದ್ದಂತೆ:  ಆರ್​ ಅಶೋಕ್​
ಕಂದಾಯ ಸಚಿವ ಆರ್​ ಅಶೋಕ
TV9 Web
| Edited By: |

Updated on: Oct 25, 2022 | 3:00 PM

Share

ಬೆಂಗಳೂರು: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ 80 ವರ್ಷದ ಮಲ್ಲಿಕಾರ್ಜುನ​ ಖರ್ಗೆ ಅವರನ್ನು ಕೂರಿಸಿದ್ದರೂ, ಇವರ ಹಿಂದೆ ಸೋನಿಯಾ ಗಾಂಧಿ ಇದ್ದಾರೆ ಅಂತ ಗೊತ್ತಿದೆ. ಸ್ಟೇರಿಂಗ್ ಯಾರ ಬಳಿ ಇದೆ ಅಂತ ಗೊತ್ತಿದೆ. ಅವರದ್ದು ರಿಮೋಟ್​ ಕಂಟ್ರೋಲ್​ ಗಾಡಿ ಎಂದು ರಾಜ್ಯ ಕಾಂಗ್ರೆಸ್​​​ (Congress) ಬಸ್​ ಯಾತ್ರೆಯನ್ನು ಪ್ರಾರಂಭಿಸಲು ಹೊರಟಿರುವ ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಕಂದಾಯ ಸಚಿವ ಆರ್​. ಅಶೋಕ (R Ashok) ವ್ಯಂಗ್ಯವಾಡಿದ್ದಾರೆ. ವಿಧಾನಸೌದದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರ ಕಾಂಗ್ರೆಸ್ ಕೊನೆ ಮೊಳೆಯನ್ನು ಕರ್ನಾಟಕದಲ್ಲಿ ಹೊಡೆಯುತ್ತದೆ ಎಂದು ಕಾಲೆಳೆದರು.

ಕೇಂಪೇಗೌಡರ ಪ್ರತಿಮೆ ಅನಾವರಣಕ್ಕೆ ಪ್ರಧಾನಿ ಬರುತ್ತಾರೆ

ನಾಡಪ್ರಭು ಕೇಂಪೇಗೌಡರ ಪ್ರತಿಮೆ ಅನಾವರಣ ಕುರಿತು ಮಾತನಾಡಿದ ಅವರು ನಾಡಪ್ರಭು ಕೇಂಪೇಗೌಡರ ಪ್ರತಿಮೆ ಅನಾವರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ. ಪ್ರತಿ ಹಳ್ಳಿಯಿಂದ ಮೃತ್ತಿಕೆ ಸಂಗ್ರಹಿಸುವಂತೆ ಜಿಲ್ಲಾಧಿಕರಿಗಳಿಗೆ ಸೂಚನೆ ನೀಡಿದ್ದೇವೆ. ನ. 8ರಂದು ಸಂಗ್ರಹವಾದ ಮೃತ್ತಿಕೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಇಡಬೇಕು. ಆ ನಂತರ ನ.9ಕ್ಕೆ ಮೃತ್ತಿಕೆ ಬೆಂಗಳೂರಿಗೆ ತಲುಪಲಿದೆ. ಕೇಂಪೇಗೌಡರು ಯಾರು ಎಂದು ನಾಡಿಗೆ ತಿಳಿಸುವ ಕೆಲಸ ನಾವು ಮಾಡುತ್ತಿದ್ದೇವೆ. ಬಹಳ ಜನ ಕೇಂಪೇಗೌಡರ ಹೆಸರು ಹೇಳಿ ರಾಜಕಾರಣ ಮಾಡಿದ್ದಾರೆ. ವಿಧಾನಸೌದಲ್ಲಿ ಕೇಂಪೇಗೌಡರ ಪ್ರತಿಮೆ ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮತಿ ನೀಡಿದ್ದಾರೆ. ವಿಧಾನಸೌದ ಮುಂಬಾಗ ನೆಹರು, ಅಂಬೇಡ್ಕರ್​ ಪ್ರತಿಮೆಗಳ ನಡುವೆ ಕೇಂಪೇಗೌಡರ ಪ್ರತಿಮೆ ಸ್ಥಾಪನೆಯಾಗಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರ ನಾಟಕ ಕಂಪನಿಯ ಬಣ್ಣ ಬಯಲಾಗಿದೆ

ಬಿಜೆಪಿ SC, ST ಮೀಸಲಾತಿ ಪ್ರಮಾಣ ಹೆಚ್ಚಿಸುವ ಕೆಲಸ ಮಾಡಿದೆ. ನ್ಯಾ. ನಾಗಮೋಹನ ದಾಸ್​ ಸಮಿತಿ ಮಾಡಿದ್ದು ವಿಪಾಕ್ಷ ನಾಯಕ ಸಿದ್ದರಾಮಯ್ಯ ಅಲ್ಲ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ. ಸಿದ್ದರಾಮಯ್ಯನವರ ನಾಟಕ ಕಂಪನಿಯ ಬಣ್ಣ ಬಯಲಾಗಿದೆ. ಬಸ್ಕಿ ಹೊಡೆಯೋದು ಕೈಹಿಡಿದು ಓಡೋದನ್ನು ಮಾಡಿದ್ದಾರೆ, ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಎಣ್ಣೆ-ಸೀಗೆಕಾಯಿ ರೀತಿ ಎಂದು ವಾಗ್ದಾಳಿ ಮಾಡಿದರು.

ಕೆಎಫ್​​ಡಿಯನ್ನು ಬ್ಯಾನ್ ಮಾಡಬೇಕು

ಶಿವಮೊಗ್ಗದಲ್ಲಿ ನಡೆದ ಗಲಾಟೆ ಪ್ರಕರಣಗಳ ಕುರಿತು ಮಾತನಾಡಿದ ಅವರು ಕೇಂದ್ರ ಸರ್ಕಾರ ಪಿಎಫ್​ಐ ಬ್ಯಾನ್ ಮಾಡಿದೆ. ಅದೇ ರೀತಿ ಕೆಎಫ್​​ಡಿಯನ್ನು ಬ್ಯಾನ್ ಮಾಡಬೇಕು. ಕಿಡಿಗೇಡಿಗಳನ್ನು ಮುಲಾಜಿಲ್ಲದೆ ಮಟ್ಟ ಹಾಕುತ್ತೇವೆ. ಯಾರೇ ಇದ್ದರು ಮಟ್ಟ ಹಾಕುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ