ಈ ಬಾರಿ ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಛತೆಗೆ ಆದ್ಯತೆ, ಬಟ್ಟೆ ಕೈಚೀಲದೊಂದಿಗೆ ಬರುವಂತೆ ಕರೆ

Basavanagudi Kadalekai Parishe: ಸೋಮವಾರದಿಂದ ಅಂದರೆ ಡಿಸೆಂಬರ್ 11ರಿಂದ ಡಿ. 13ರವರೆಗೆ ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ (Kadalekai parishe) ನಡೆಯಲಿದ್ದು, ಈ ಬಾರಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗಿದೆ.

ಈ ಬಾರಿ ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಛತೆಗೆ ಆದ್ಯತೆ, ಬಟ್ಟೆ ಕೈಚೀಲದೊಂದಿಗೆ ಬರುವಂತೆ ಕರೆ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Edited By:

Updated on: Dec 08, 2023 | 1:49 PM

ಬೆಳಗಾವಿ/ಬೆಂಗಳೂರು, (ಡಿಸೆಂಬರ್ 08): ಇದೇ ಡಿಸೆಂಬರ್ 11ರಿಂದ ಡಿ. 13ರವರೆಗೆ ಬೆಂಗಳೂರಿನ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ (Kadalekai parishe) ನಡೆಯಲಿದೆ. ಈ ಬಾರಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷೆಯಲ್ಲಿ ಪ್ಲಾಸ್ಟಿಕ್​ ಬಳಕೆಗೆ ನಿರ್ಬಂಧಿಸಲಾಗಿದ್ದು, ಕಡ್ಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈ ಚೀಲ ತನ್ನಿ ಎಂದು ಕರೆ ನೀಡಲಾಗಿದೆ.

ಈ ಬಗ್ಗೆ ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಈ ಬಾರಿ ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಡಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್​ ಬಳಕೆಗೆ ನಿರ್ಬಂಧಿಸಲಾಗಿದ್ದು, ಕಡ್ಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈ ಚೀಲ ತನ್ನಿ ಎಂದು ಘೋಷಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ನಾಳೆಯಿಂದ ಬಸವನಗುಡಿ ಕಡಲೆಕಾಯಿ ಪರಿಷೆ: ಪರ್ಯಾಯ ಮಾರ್ಗ ಹೀಗಿದೆ

ಬೆಂಗಳೂರಿನ ಬಸವನಗುಡಿಯಲ್ಲಿ ಬಹಳ ವರ್ಷಗಳಿಂದ ಕಡಲೆಕಾಯಿ ಪರಿಷೆ ನಡೆಯುತ್ತಿದೆ‌. ಮಲ್ಲೇಶ್ವರಂನಲ್ಲೂ ಕಡೆಲೆಕಾಯಿ ಪರಿಷೆ ನಡೆಯುತ್ತಿದೆ. ಪರಿಷೆಗೆ ಲಕ್ಷಾಂತರ ಜನ ಪರಿಷೆಗೆ ಬರುತ್ತಾರೆ. ಹಾಗಾಗಿ ಶಾಸಕ ರವಿ ಸುಬ್ರಹ್ಮಣ್ಯ, ಯುಬಿ ವೆಂಕಟೇಶ್ ನಾವು ಎಲ್ಲರೂ ಸಭೆ ಮಾಡಿದ್ದೇವೆ. ಈ ಬಾರಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಟ್ರಾಪಿಕ್ ಸಮಸ್ಯೆ ಸೇರಿದಂತೆ ಬಂದ ಜನರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಕ್ರಮ ತೆಗೆದುಕೊಳ್ಳಲಾಗುವುದು. ಬರುವವರು ಪ್ಲಾಸ್ಟಿಕ್ ಬದಲಾಗಿ ಕೈ ಚೀಲಾ ಹಿಡಿದು ಬರಬೇಕು ಎಂದು ಕರೆ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Fri, 8 December 23