Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಬಿಎಂಟಿಸಿ ಡ್ರೈವರ್ ಮಲ್ಲಿಕಾರ್ಜುನ ಕುಟುಂಬಕ್ಕೆ 50 ಲಕ್ಷ ರೂ ಚೆಕ್ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

2023 ಅಕ್ಟೋಬರ್ 30ರಂದು ಆಕ್ಸಿಡೆಂಟ್​ನಲ್ಲಿ ಮೃತಪಟ್ಟಿದ್ದ ಬಿಎಂಟಿಸಿ ಡ್ರೈವರ್ ಮಲ್ಲಿಕಾರ್ಜುನ ಅವರ ಹೆಂಡತಿ ರುದ್ರಮ್ಮನಿಗೆ ಇದೆ ಮೊದಲ ಬಾರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಐವತ್ತು ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ. ಹಾಗೂ ಅನುಕಂಪದ ಆಧಾರದ ಮೇರೆಗೆ ಕೆಲಸವನ್ನೂ ಸಹ ನೀಡಲಾಗುತ್ತಿದೆ.

ಮೃತ ಬಿಎಂಟಿಸಿ ಡ್ರೈವರ್ ಮಲ್ಲಿಕಾರ್ಜುನ ಕುಟುಂಬಕ್ಕೆ 50 ಲಕ್ಷ ರೂ ಚೆಕ್ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ
ಮಲ್ಲಿಕಾರ್ಜುನ ಕುಟುಂಬಕ್ಕೆ 50 ಲಕ್ಷ ರೂ ಚೆಕ್ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ
Follow us
Kiran Surya
| Updated By: ಆಯೇಷಾ ಬಾನು

Updated on: Dec 30, 2023 | 7:37 AM

ಬೆಂಗಳೂರು, ಡಿ.30: ಬಿಎಂಟಿಸಿ ನಿಗಮ ಬಿಎಂಟಿಸಿ (BMTC) ನೌಕರರಿಗೂ ಸಿಹಿ ಸುದ್ದಿ ನೀಡಿದೆ. ಇಲ್ಲಿಯವರೆಗೆ ಕೆಎಸ್ಆರ್​ಟಿಸಿಯಲ್ಲಿ ಕಂಡಕ್ಟರ್ ಡ್ರೈವರ್ ಹಾಗೂ ನೌಕರರು ಮೃತಪಟ್ಟರೇ ಮಾತ್ರ ಒಂದು ಕೋಟಿ ರುಪಾಯಿ ಪರಿಹಾರ ನೀಡಲಾಗುತ್ತಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಬಿಎಂಟಿಸಿ ತನ್ನ ಸಂಸ್ಥೆಯ ನೌಕರರು ಮೃತಪಟ್ಟರೂ ಐವತ್ತು ಲಕ್ಷ ರೂಪಾಯಿ ನೀಡಲು ಮುಂದಾಗಿದೆ. 2023 ಅಕ್ಟೋಬರ್ 30ರಂದು ಆಕ್ಸಿಡೆಂಟ್​ನಲ್ಲಿ ಮೃತಪಟ್ಟಿದ್ದ ಬಿಎಂಟಿಸಿ ಡ್ರೈವರ್ ಮಲ್ಲಿಕಾರ್ಜುನ ಅವರ ಹೆಂಡತಿ ರುದ್ರಮ್ಮನಿಗೆ ಇದೆ ಮೊದಲ ಬಾರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (Ramalinga Reddy) ಐವತ್ತು ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಯೂನಿಯನ್ ಬ್ಯಾಂಕ್‌ನೊಂದಿಗೆ 2023 ಆಗಸ್ಟ್ 21ರಂದು ಮೂರು ವರ್ಷಗಳ ಅವಧಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಈ ಒಡಂಬಡಿಕೆಯನ್ವಯ ಯೂನಿಯನ್ ಬ್ಯಾಂಕ್ ನಲ್ಲಿ Union Super Sallary Account ಖಾತೆ ಹೊಂದಿದ ಸಿಬ್ಬಂದಿ ಕರ್ತವ್ಯ ನಿರತ ಅಥವಾ ವೈಯಕ್ತಿಕ ಅಪಘಾತದಿಂದ ಮರಣ ಹೊಂದಿದ್ದಲ್ಲಿ ಬ್ಯಾಂಕ್ ವತಿಯಿಂದ ಕೆಲವು ಸೌಲಭ್ಯಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಬಿಎಂಟಿಸಿ ಎಂಡಿ ಸತ್ಯವತಿ ವಿರುದ್ಧ ಕೆಎಸ್​ಆರ್​​ಟಿಸಿ ಸಿಬ್ಬಂದಿ ಮತ್ತು ನೌಕರರ ಸಂಘಟನೆ ಅಸಮಾಧಾನ

ಬ್ಯಾಂಕ್ ವತಿಯಿಂದ ನೀಡಲಾಗುತ್ತಿರುವ ಸೌಲಭ್ಯಗಳು

  • ಮಾಸಿಕ ವೇತನ 25,000/-ಕ್ಕಿಂತ ಕಡಿಮೆ ಇದ್ದಲ್ಲಿ ರೂ.50.00 ಲಕ್ಷ ವಿಮಾ ಮೊತ್ತ ಮತ್ತು ಡೆಬಿಟ್ ಕಾರ್ಡ್ ಹೊಂದಿದ್ದಲ್ಲಿ ರೂ.4.00 ಲಕ್ಷ ಒಟ್ಟು ರೂ.54.00 ಲಕ್ಷಗಳ ಮೊತ್ತ ಪಾವತಿಸಲಾಗುವುದು.
  • ಮಾಸಿಕ ವೇತನ ರೂ.25,000/-ಕ್ಕಿಂತ ಮೇಲ್ಪಟ್ಟಲ್ಲಿ ರೂ.50.00 ಲಕ್ಷ ವಿಮಾ ಮೊತ್ತ ಮತ್ತು ಡೆಬಿಟ್ ಕಾರ್ಡ್ ಹೊಂದಿದ್ದಲ್ಲಿ ರೂ.15 ಲಕ್ಷಗಳು ಒಟ್ಟು ರೂ.65.00 ಲಕ್ಷಗಳ ಮೊತ್ತ ಪಾವತಿಸಲಾಗುವುದು.
  • ರೂ.25,000/- ಕ್ಕಿಂತ ಹೆಚ್ಚು ವೇತನ ಇರುವ ಸಿಬ್ಬಂದಿಗಳಿಗೆ ವಾರ್ಷಿಕ ರೂ.15,000/- ವೈದ್ಯಕೀಯ ಮರುಪಾವತಿ ಸೌಲಭ್ಯಇನ್ನು ಮೃತ ಮಲ್ಲಿಕಾರ್ಜುನ ಯೂನಿಯನ್ ಬ್ಯಾಂಕ್‌ನಲ್ಲಿ ವೇತನ ಖಾತೆ ಹೊಂದಿದ್ದು, ಇದಲ್ಲದೆ ಸಂಸ್ಥೆಯ ವತಿಯಿಂದ ಮೃತಪಟ್ಟ ಸಿಬ್ಬಂದಿಯ ಅವಲಂಭಿತರಿಗೆ ಕೆಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ.

    ಬಿಎಂಟಿಸಿ ವತಿಯಿಂದ ಮೃತ ಮಲ್ಲಿಕಾರ್ಜುನ ಕುಟುಂಬಕ್ಕೆ ನೀಡಲಾಗುವ ಸೌಲಭ್ಯ

  • ಉಪದಾನ
  • ಭವಿಷ್ಯನಿಧಿ
  • ಆಂತರೀಕ ಗುಂಪು ವಿಮಾ ಮೊತ್ತ ರೂ.3.00 ಲಕ್ಷ
  • ಗಳಿಕೆ ರಜೆ
  • ಡಿಆರ್ಬಿಎಫ್
  • ಇ.ಡಿ.ಎಲ್ ಐ ( ಗುಂಪು ವಿಮೆ )
  • ಅನುಕಂಪದ ಆಧಾರದ ಮೇರೆಗೆ ಕೆಲಸ

 ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್