AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಗೆ ಹೋಗ್ತೀವಿ: ಕೆಎನ್ ರಾಜಣ್ಣ ಭೇಟಿ ಬಳಿಕ ಗುಡುಗಿದ ಸತೀಶ್ ಜಾರಕಿಹೊಳಿ

ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣನವರನ್ನು ವಜಾ ಮಾಡಲಾಗಿದೆ. ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಇದೀಗ ವಾಲ್ಮೀಕಿ ಸಮುದಾಯ ಆಕ್ರೋಶಗೊಂಡಿದೆ. ಇನ್ನು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಇತರೆ ವಾಲ್ಮೀಕಿ ಶಾಸಕರು ರಾಜಣ್ಣ ಅವರನ್ನ ಭೇಟಿ ಮಾಡಿ ನಿಮ್ಮ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ.

ದೆಹಲಿಗೆ ಹೋಗ್ತೀವಿ: ಕೆಎನ್ ರಾಜಣ್ಣ ಭೇಟಿ ಬಳಿಕ ಗುಡುಗಿದ ಸತೀಶ್ ಜಾರಕಿಹೊಳಿ
Satish Jarkiholi And Rajanna
ಹರೀಶ್ ಜಿ.ಆರ್​.
| Edited By: |

Updated on: Aug 13, 2025 | 4:58 PM

Share

ಬೆಂಗಳೂರು,(ಆಗಸ್ಟ್ 13): ಕೆಎನ್ ರಾಜಣ್ಣ (KN Rajanna) ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿದ್ದಕ್ಕೆ ವಾಲ್ಮೀಕಿ ಸಮುದಾಯ ಆಕ್ರೋಶಗೊಂಡಿದೆ. ರಾಜಣ್ಣ ಫೋಟೋ ಹಿಡಿದು ತುಮಕೂರಿನಲ್ಲಿ (Tumakuru) ಅವರ ಬೆಂಬಲಿಗರು ಸಿಡಿದೆದ್ದಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. We Stand With KNR ಪೋಸ್ಟರ್ ಹಿಡಿದು  ಅವರ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಇತ್ತ ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಸೇರಿದಂತೆ ಇತರೆ ನಾಯಕರು ರಾಜಣ್ಣನವರನ್ನು ಭೇಟಿ ಮಾಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಯಾರೇ ಆದರೂ ಅಧಿಕಾರ ಹೋದಾಗ ದೂರವಾಗುತ್ತಾರೆ. ಆದರೆ ನಾವು ರಾಜಣ್ಣ ಜೊತೆಗಿದ್ದೇವೆಂದು ಸಂದೇಶ ಕೊಡಲು ಭೇಟಿ ಮಾಡಿದ್ದೇವೆ. ದೆಹಲಿಯಲ್ಲಿ ತಪ್ಪು ತಿಳಿವಳಿಕೆ ಇದೆ. ಅವರಿಗೆ ಮನವರಿಕೆ ಮಾಡುತ್ತೇವೆ ಎಂದಿದ್ದಾರೆ.

ಕೆ.ಎನ್.ರಾಜಣ್ಣನವರು 2 ವರ್ಷ ಸಚಿವರಾಗಿ ಕೆಲಸ ಮಾಡಿದ್ದಾರೆ. ದೆಹಲಿಯಲ್ಲಿ ತಪ್ಪು ತಿಳಿವಳಿಕೆ ಇದೆ, ಅವರಿಗೆ ಮನವರಿಕೆ ಮಾಡುತ್ತೇವೆ. ಸಂಪುಟದಿಂದ ವಜಾ ಬಗ್ಗೆ ರಾಜಣ್ಣನವರೇ ವಿವರಣೆ ಕೊಡಬೇಕು. ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತೇವೆ. ಈಗ ಕೈಬಿಟ್ಟಿರುವ ಸಚಿವ ಸ್ಥಾನ ವಾಲ್ಮೀಕಿ ಸಮಾಜಕ್ಕೆ ಕೊಡಬೇಕು. ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ವಿಚಾರ ಹೈಕಮಾಂಡ್​ ಗೆ ಬಿಟ್ಟದ್ದು. ಹುಲಿ ಯಾವಾಗಲೂ ಗುರ್ ಅಂತಿರುತ್ತೆ. ಷಡ್ಯಂತ್ರದ ಇರಬಹುದು ಎಂದು ರಾಜಣ್ಣ ಹೇಳಿದ್ದಾರೆ. ಇಬ್ಬರು ವಾಲ್ಮೀಕಿ ಸಮುದಾಯದವರನ್ನೇ ಇಳಿಸಲಾಗಿದೆ. ವಾಲ್ಮೀಕಿ ಸಮುದಾಯದವರನ್ನೇ ಸಂಪುಟಕ್ಕೆ ಸೇರಿಸಲು ನಾವು ದೆಹಲಿಗೆ ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ರಾಜಣ್ಣ ಸಂಪುಟದಿಂದ ವಜಾಕ್ಕೆ ಆಕ್ರೋಶ: ತುಮಕೂರಿನಲ್ಲಿ ಬೆಂಬಲಿಗರಿಂದ ಬೃಹತ್ ಪ್ರತಿಭಟನೆ

ಮತ್ತೊಂದೆಡೆ ತುಮಕೂರಿನ ಟೌನ್‌ ಹಾಲ್ ಮುಂಭಾಗ ಸಾವಿರಾರು ಅಭಿಮಾನಿಗಳು, ಕೈಯಲ್ಲಿ ರಾಜಣ್ಣ ಫೋಟೋ ಹಿಡಿದು ಘೋಷಣೆ ಕೂಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿವರೆಗೂ ರ್ಯಾಲಿ ಮಾಡಿದ್ದಾರೆ. ಬಳಿಕ ರಾಜಣ್ಣರನ್ನ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದಯ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಇನ್ನು ಈ ಬಗ್ಗೆ ವಾಲ್ಮೀಕಿ ಸಮುದಾಯದ ರಾಜನಹಳ್ಳಿಯ ಗುರು ಪೀಠದ ಪ್ರಸನ್ನಾನಂದ ಶ್ರೀ ಪ್ರತಿಕ್ರಿಯಿಸಿದ್ದು, ರಾಜಣ್ಣ ಅವರನ್ನ ಸಂಪುಟದಿಮದ ವಜಾ ಮಾಡಿರುವುದನ್ನು ಖಂಡಿಸಿದ್ದಾರೆ. ಷಡ್ಯಂತ್ರ ಮಾಡಿ ರಾಜಣ್ಣರನ್ನ ವಜಾ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಒಟ್ಟಿನಲ್ಲಿ ರಾಜಣ್ಣ ರಾಜೀನಾಮೆ ಸಂಚಲನ ಸೃಷ್ಟಿಸಿದ್ದು, ಒಂದೆ ಡೆ ಬೆಂಬಲಿಗರ ಆಕ್ರೋಶ, ಮತ್ತೊಂದ್ಕಡೆ ವಿಪಕ್ಷ ನಾಯಕರ ಟೀಕಾಪ್ರಹಾರ ಸರ್ಕಾರಕ್ಕೆ ಇಕ್ಕಟ್ಟು ತಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ