AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಪ್ರಯಾಣ ದರ ಹೆಚ್ಚಳ ಇಲ್ಲ, ಮುಷ್ಕರದಲ್ಲಿ ಭಾಗಿಯಾಗಿ ವಜಾ ಗೊಂಡಿದ್ದವರನ್ನು ಮರುನೇಮಕ ಮಾಡಿಕೊಳ್ಳುತ್ತಿದ್ದೇವೆ – ಸಚಿವ ಬಿ.ಶ್ರೀರಾಮುಲು

ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರ ವಜಾಗೊಳಿಸಿದ್ದ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಪ್ರತಿಭಟನೆ ವೇಳೆ ಭಾಗಿಯಾಗಿದ್ದ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು.

ಸಾರಿಗೆ ಪ್ರಯಾಣ ದರ ಹೆಚ್ಚಳ ಇಲ್ಲ, ಮುಷ್ಕರದಲ್ಲಿ ಭಾಗಿಯಾಗಿ ವಜಾ ಗೊಂಡಿದ್ದವರನ್ನು ಮರುನೇಮಕ ಮಾಡಿಕೊಳ್ಳುತ್ತಿದ್ದೇವೆ - ಸಚಿವ ಬಿ.ಶ್ರೀರಾಮುಲು
ಬಿ. ಶ್ರೀರಾಮುಲು
TV9 Web
| Edited By: |

Updated on: Feb 10, 2022 | 12:20 PM

Share

ಬೆಂಗಳೂರು: ಸಾರಿಗೆ ಪ್ರಯಾಣಿಕರಿಗೆ ಗುಡ್ ನ್ಯೂಸ್. ಸದ್ಯಕ್ಕೆ ಸಾರಿಗೆ ಪ್ರಯಾಣ ದರ ಹೆಚ್ಚಳ ಇಲ್ಲ ಎಂದು ಬೆಂಗಳೂರಿನಲ್ಲಿ ಸಾರಿಗೆ ಖಾತೆ ಸಚಿವ ಬಿ.ಶ್ರೀರಾಮುಲು(B Sriramulu) ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ವೋಲ್ವೋ ಬಸ್ ಪ್ರಯಾಣ ದರ ಇಳಿಕೆ ಮಾಡಲಾಗಿದೆ ಎಂದಿದ್ದಾರೆ. ಹಾಗೂ ನಗರದಲ್ಲಿ 2 ಬಸ್ ಬೆಂಕಿಗೆ ಆಹುತಿಯಾದ ಪ್ರಕರಣ ಬಗ್ಗೆ ಅಧಿಕಾರಿಗಳು ವರದಿ ನೀಡಿದ ಬಳಿಕ ಪ್ರತಿಕ್ರಿಯೆ ನೀಡುವೆ ಎಂದು ತಿಳಿಸಿದ್ದಾರೆ.

ಮಹಾಮಾರಿ ಕೊರೊನಾ, ಸಾರಿಗೆ ನೌಕರರ ಮುಷ್ಕರ, ಡೀಸೆಲ್ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಸಾರಿಗೆ ಇಲಾಖೆ ನೌಕರರಿಗೆ ಸಂಬಳ ನೀಡಲೂ ಬಹಳಷ್ಟು ಸಮಸ್ಯೆ ಎದುರಿಸುವಂತಾಗಿತ್ತು. ಹೀಗಾಗಿ ಟಿಕೆಟ್ ದರ ಏರಿಕೆ ಮಾಡುವ ಸಾಧ್ಯತೆಗಳು ಹೆಚ್ಚಿದ್ದವು. ಸದ್ಯ ಟಿಕೆಟ್ ದರ ಏರಿಕೆಗೆ ಸರ್ಕಾರ ಬ್ರೇಕ್ ಹಾಕಿದೆ. ಈ ಸಂಬಂಧ ಮಾತನಾಡಿದ ಸಾರಿಗೆ ಖಾತೆ ಸಚಿವ ಬಿ.ಶ್ರೀರಾಮುಲು, ಸದ್ಯಕ್ಕೆ ಸಾರಿಗೆ ಪ್ರಯಾಣ ದರ ಹೆಚ್ಚಳ ಇಲ್ಲ. ವೋಲ್ವೋ ಬಸ್ ಪ್ರಯಾಣ ದರ ಇಳಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಜಾ ಮಾಡಿದ್ದವರ ಮರುನೇಮಕ ಇನ್ನು ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರ ವಜಾಗೊಳಿಸಿದ್ದ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಪ್ರತಿಭಟನೆ ವೇಳೆ ಭಾಗಿಯಾಗಿದ್ದ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇಂದು 100 ನೌಕರರು, ನಾಳೆ 200 ನೌಕರರ ಮರು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮುಷ್ಕರದಲ್ಲಿ 1,610 ಜನ ಭಾಗಿಯಾಗಿ ತೊಂದರೆಗೀಡಾಗಿದ್ದರು. ಮರು ನೇಮಕ ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ನಿಮ್ಮ ಕುಟುಂಬವನ್ನು ನೋಡಿ ಮರು ನೇಮಕ ಮಾಡುತ್ತಿದ್ದೇವೆ. ನಿಮ್ಮ ಜೊತೆ ಮುಷ್ಕರ ಮಾಡಿದವರು ಈಗ ಓಡಿ ಹೋದರು. ಆದರೆ, ಇಂದು‌ ನಿಮ್ಮ ಜೊತೆಗೆ ನಿಂತಿದ್ದು ನಮ್ಮ ಸರ್ಕಾರ. ಸರ್ಕಾರದ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸಾರಿಗೆ ಖಾತೆ ಸಚಿವ ಬಿ.ಶ್ರೀರಾಮುಲು ಬುದ್ದಿವಾದ ಹೇಳಿದ್ದಾರೆ.

ಸಿಎಂ ಅಣತಿಯಂತೆ ನೌಕರರ ಮರುನೇಮಕ ಮಾಡಿಕೊಳ್ತಿದ್ದೇವೆ. ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಅವಕಾಶ ಕೊಡಲಾಗಿದೆ. ಮತ್ತೆ ಆ ರೀತಿಯ ತಪ್ಪು ಮಾಡಲು ಹೋಗಬೇಡಿ. ಮತ್ತೆ ಮುಷ್ಕರ ಅಂದ್ರೆ ನಾವ್ಯಾರೂ ಜೊತೆಯಲ್ಲಿ ಇರೋದಿಲ್ಲ. ಮುಂದಿನ ತಿಂಗಳಿಂದ ಸರಿಯಾಗಿ ಸಂಬಳ ನೀಡುತ್ತೇವೆ. ಹಂತ ಹಂತವಾಗಿ ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ. ಸಾಕಷ್ಟು ಬಾರಿ ಈ ಬಗ್ಗೆ ನಾನು ಎಂಡಿಗಳನ್ನು ಕರೆದು ಮಾತಾಡಿದ್ದೆ. ಮುಷ್ಕರ ಪ್ರಾರಂಭ ಆಗೋದು ಸುಲಭ, ಆದರೆ ಪ್ರಾರಂಭದ ನಂತರ ಅದನ್ನು ನಿಲ್ಲಿಸಲು ಆಗಲ್ಲ ಎಂದರು.

ಇದನ್ನೂ ಓದಿ: ರಶ್ಮಿಕಾ ಹೊಸ ಚಿತ್ರದ ಒಟಿಟಿ ಹಾಗೂ ಸ್ಯಾಟಲೈಟ್​​ ಹಕ್ಕುಗಳಿಗೆ ಭರ್ಜರಿ ಆಫರ್; ಮೊತ್ತ ಕೇಳಿ ಹುಬ್ಬೇರಿಸಿದ ಫ್ಯಾನ್ಸ್

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ