AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್ ಚಾಲನೆ

ಇಂದಿನಿಂದ (ಅಕ್ಟೋಬರ್ 24) ಇದೇ ತಿಂಗಳ 30 ರವರೆಗೂ ಕನ್ನಡಕ್ಕಾಗಿ ನಾವು ಅಭಿಯಾನ ನಡೆಯಲಿದೆ. ಇಂದು ಮಾತಾಡ್ ಮಾತಾಡ್ ಕನ್ನಡ ಎಂಬ ಶೀರ್ಷಕೆಯಡಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಚಿವರಾದ ಸುನಿಲ್ ಕುಮಾರ್ ಚಾಲನೆ ನೀಡಿದ್ದಾರೆ.

ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್ ಚಾಲನೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್
TV9 Web
| Edited By: |

Updated on:Oct 24, 2021 | 11:55 AM

Share

ಬೆಂಗಳೂರು: 66ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್‌ ಕುಮಾರ್ ಚಾಲನೆ ನೀಡಿದ್ದಾರೆ. ಬೆಂಗಳೂರು ನಗರದ ಲಾಲ್ ಬಾಗ್ ಸಸ್ಯತೋಟದಲ್ಲಿ ಕಿರು ನಾಟಕ ಮಾತಾಡ್ ಮಾತಾಡ್ ಕನ್ನಡ ಉದ್ಘಾಟನೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಇಂದಿನಿಂದ (ಅಕ್ಟೋಬರ್ 24) ಇದೇ ತಿಂಗಳ 30 ರವರೆಗೂ ಕನ್ನಡಕ್ಕಾಗಿ ನಾವು ಅಭಿಯಾನ ನಡೆಯಲಿದೆ. ಇಂದು ಮಾತಾಡ್ ಮಾತಾಡ್ ಕನ್ನಡ ಎಂಬ ಶೀರ್ಷಕೆಯಡಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಚಿವರಾದ ಸುನಿಲ್ ಕುಮಾರ್ ಚಾಲನೆ ನೀಡಿದ್ದಾರೆ. ಕನ್ನಡಕ್ಕಾಗಿ ನಾವು ಅಭಿಯಾನದ ಉದ್ದೇಶ ಕನ್ನಡದಲ್ಲಿ ಮಾತು ಮತ್ತು ಬರವಣಿಗೆ. ಅಕ್ಟೋಬರ್ 30ರ ವರೆಗೂ ಅಭಿಯಾನದ ಕುರಿತ ನಾಟಕ, ನೃತ್ಯ, ಸಂಗೀತ, ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ, ಗಡಿಭಾಗದಲ್ಲಿ ಕನ್ನಡ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತದೆ.

ಅಭಿಯಾನ ಉದ್ಘಾಟನೆ ಬಳಿಕ ಮಾತನಾಡಿದ ಸಚಿವ ಸುನೀಲ್ ಕುಮಾರ್, ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನ ರಾಜ್ಯಾದ್ಯಂತ ಆರಂಭ ಆಗಿದೆ. ಮಾತಾಡ್ ಮಾತಾಡ್ ಸಂಕಲ್ಪ ಇಟ್ಟುಕೊಂಡು ನವೆಂಬರ್ 1ರವರೆಗೂ ಅಭಿಯಾನ ಇರುತ್ತದೆ. ರಾಜ್ಯದಲ್ಲಿ ಬೇರೆ ಭಾಷೆ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಕನ್ನಡ ಬೆಳೆಸಬೇಕಾಗಿದೆ. ಒಂದು ವಾರಗಳ ಕಾಲ ಕನ್ನಡಕ್ಕಾಗಿ ಅಭಿಯಾನ ಆರಂಭ ಆಗಿದೆ. ಮಕ್ಕಳು ಹಾಗೂ ಕುಟುಂಬದ ನಡುವೆ ಕನ್ನಡ ಮಾತನಾಡುವುದು ಕಡಿಮೆ ಆಗುತ್ತಿದೆ. ನಾವು ಕುಟುಂಬದ ಸದಸ್ಯರ ಜೊತೆಗೆ ಕನ್ನಡ ಮಾತಾಡೋಣ ಎಂದು ಹೇಳಿದ್ದಾರೆ.

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಮಾಡೋಣ. ಚರವಾಣಿ ಕನ್ನಡದಲ್ಲೇ ಕಳುಹಿಸುವ ಅಭ್ಯಾಸ ಮಾಡೋಣ. ಎಲ್ಲಾ ಜಿಲ್ಲಾ ತಾಲೂಕಿನಲ್ಲಿ ಕನ್ನಡ ಸಾಮೂಹಿಕ ಗಾಯನದಲ್ಲಿ ಕನ್ನಡದ ಮೂರು ಗೀತೆ ಹಾಡನ್ನು ಪ್ರತಿಯೊಬ್ಬರೂ ಹಾಡಬೇಕು. ಕನ್ನಡದ ಪ್ರೇಮ ಭಾಷಣದ ವಸ್ತು ಅಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್‌ ಕುಮಾರ್ ತಿಳಿಸಿದ್ದಾರೆ.

ಬಳಿಕ ಇಲಾಖಾವಾರು ಸುತ್ತೋಲೆಗಳಲ್ಲಿ ಹೆಚ್ಚು ಇಂಗ್ಲೀಷ್ ಗೆ ಆಧ್ಯತೆ ವಿಚಾರವಾಗಿ ಮಾತನಾಡಿದ ಅವರು, ಇದರ ಬಗ್ಗೆ ಗಮನಹರಿಸಿದ್ದೇವೆ. ಸುಧಾರಣೆ ಮಾಡುವ ಕೆಲಸ ಆಗುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯೋತ್ಸವ ಒಂದು ದಿನಕ್ಕೆ ಸೀಮಿತವಾಗದೆ, ಕನ್ನಡ ಭಾಷೆಗಳನ್ನು ಕನ್ನಡ ರಾಜ್ಯದಲ್ಲಿ ತಿಳಿಸಬೇಕು. ಇವತ್ತು ಬೆಂಗಳೂರಿನಿಂದ ಮಾತಾಡ್ ಮಾತಾಡ್ ಕನ್ನಡ ಅಭಿಯಾನ ಶುರುಮಾಡಿದ್ದೇವೆ. ವಿಶೇಷವಾಗಿ ನವೆಂಬರ್ 28ರಂದು ಬೆಳಗ್ಗೆ 11ರಿಂದ 11:30ರವರೆಗೂ ವಿವಿಧ ಪ್ರಮುಖ ಸ್ಥಳದಲ್ಲಿ ಉದ್ಯಮಿಗಳು, ವಿದ್ಯಾರ್ಥಿಗಳು ಕೂಲಿ ಕಾರ್ಮಿಕರು, ಲಕ್ಷ ಕಂಠದಲ್ಲಿ ಸಮೂಹ ಗಾಯನ ಕಾರ್ಯಕ್ರಮ ನಡೆಯುತ್ತದೆ. ಕನ್ನಡದ ಮೂರು ಹಾಡು ಹಾಡಬೇಕು ಎಂದು ಮನವಿ ಮಾಡುತ್ತೇನೆ. ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹಾಡುಗಳನ್ನು ಹಾಡಲಾಗುತ್ತದೆ. ಸಮಯವಕಾಶ ಇದ್ದರೆ ಇನ್ನಷ್ಟು ಹಾಡುಗಳನ್ನು ಹಾಡಬಹುದು ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.

ಕನ್ನಡದಲ್ಲಿ ಸಹಿ ಅಭಿಯಾನ ಸಹಿ ಹಾಗೂ ಸುತ್ತೂಲೆ ಎರಡು ಕನ್ನಡದಲ್ಲೇ ಆಗಬೇಕು. ಇದಕ್ಕೆ ನನ್ನ ಬೆಂಬಲವಿದೆ. ಕನ್ನಡದಲ್ಲಿ ಸಹಿ ಅಭಿಯಾನದ ಮೂಲಕ ಹೊಸ ರೂಪ ಪಡೆದುಕೊಂಡಿದೆ ಎಂದು ಸ್ಪಷ್ಟಪಡಿಸುತ್ತೇನೆ. ಹಿಂದೆ ಯಾವ ರೀತಿ ಇತ್ತು ಎನ್ನುವ ಚರ್ಚೆ ಬೇಡ. ಮುಂದೆ ಯಾವ ರೀತಿ ಆಗಬೇಕು ಎನ್ನುವುದನ್ನು ಚರ್ಚೆ ಮಾಡೋಣ. ರಾಜ್ಯದಲ್ಲಿ ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಕನ್ನಡ ಕಡಗಣನೆ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕದಲ್ಲಿ ಕನ್ನಡವೇ ಅಳವಡಿಸಬೇಕು. ನಾವೂ ಕೂಡ ಹತ್ತಾರು ಬಾರಿ ಮನವಿ ಕೂಡ ಮಾಡಿದ್ದೇವೆ. ಎಲ್ಲೋ ಕೆಲವೊಂದು ಕಡೆ ವ್ಯತ್ಯಾಸಗಳು ಆಗಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್‌ ಕುಮಾರ್ ತಿಳಿಸಿದ್ದಾರೆ

ಪರ್ವ ನಾಟಕಕ್ಕೆ ಚಾಲನೆ ಮಾತಾಡ್ ಮಾತಾಡ್ ಕನ್ನಡ ಅಭಿಯಾನ ಪ್ರಯುಕ್ತ ಎಸ್​.ಎಲ್​.ಭೈರಪ್ಪ ಕಾದಂಬರಿ ಆಧಾರಿತ ‘ಪರ್ವ’ ನಾಟಕಕ್ಕೆ ಚಾಲನೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಚಿವ ಸುನಿಲ್ ಕುಮಾರ್ ಪರ್ವ ನಾಟಕಕ್ಕೆ ಚಾಲನೆ ನೀಡಿದ್ದಾರೆ. ಕನ್ನಡಕ್ಕಾಗಿ ನಾವು ಅಭಿಯಾನದ ಹಿನ್ನೆಲೆ ಬಿತ್ತಿ ಪತ್ರ ಹಾಗೂ ವಿಡಿಯೋಗಳ ಅನಾವರಣ ಮಾಡಲಾಗಿದ್ದು, ಎಲ್​ಇಡಿ ಪರದೆ ಹೊಂದಿರುವ ವಾಹನದಲ್ಲಿ ವಿಡಿಯೋ ಪ್ರದರ್ಶನ ಮಾಡಲಾಗಿದೆ.

ಇದನ್ನೂ ಓದಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ; ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮಕ್ಕೆ ಗೈರು

ಕಡಲ ತೀರದಲ್ಲಿ ಕನ್ನಡ ರಾಜ್ಯೋತ್ಸವ! ಬೆಂಗಳೂರಿನ ಯುವ ತಂಡದಿಂದ ಕನ್ನಡ ಹಬ್ಬದ ವಿಶಿಷ್ಟ ಆಚರಣೆ

Published On - 9:39 am, Sun, 24 October 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್