ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ವಿಧಿವಶ: ಹೆಚ್ಎಎಲ್ ಏರ್ಪೋರ್ಟ್ ತಲುಪಿದ ಪಾರ್ಥಿವ ಶರೀರ
ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಹೆಚ್ಎಎಲ್ ಏರ್ಪೋರ್ಟ್ ತಲುಪಿದೆ.
ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಹೆಚ್ಎಎಲ್ ಏರ್ಪೋರ್ಟ್ ತಲುಪಿದೆ. ಆದ್ರೆ ಹೆಲಿಕಾಪ್ಟರ್ ಟೇಕ್ ಆಫ್ ಕೊಂಚ ವಿಳಂಬ ಆಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯ ಹಿನ್ನೆಲೆ ಟೇಕ್ ಆಫ್ ವಿಳಂಬ ಸಾಧ್ಯತೆ. ಹೆಚ್ಎಎಲ್ ಏರ್ಪೋರ್ಟ್ನಲ್ಲಿ ಏರ್ ಆ್ಯಂಬುಲೆನ್ಸ್ ಸಿದ್ಧತೆ.
ಅರಣ್ಯ ಸಚಿವ ಉಮೇಶ್ ಕತ್ತಿ ಹೃಯಯಾಘಾತದಿಂದ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೊನ್ನೆ ಬೆಳಗಾವಿಯಿಂದ ಬೆಂಗಳೂರಿಗೆ ಹೋಗಿದ್ದ ಉಮೇಶ್ ಕತ್ತಿ, ನಿನ್ನೆ(ಸೆಪ್ಟೆಂಬರ್ 07) ರಾತ್ರಿ 10ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿದ್ದಾಗಲೇ ಬಾತ್ ರೂಮ್ನಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ರೂ ತೀವ್ರ ಹೃದಯಾಘಾತ ಆಗಿದ್ರಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.
Published on: Sep 07, 2022 08:16 AM
Follow Us
Latest Videos

