AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಶೇಕಡಾ 30ರಷ್ಟು ಅರಣ್ಯ ನಿರ್ಮಾಣಕ್ಕೆ ಸಚಿವ ಉಮೇಶ್ ಕತ್ತಿ ಆದೇಶ

ವಿಜಯಪುರ, ಬೀದರ್, ಕಲಬುರಗಿ ಸೇರಿ ಹಲವು ಜಿಲ್ಲೆಗಳಲ್ಲಿ ಶೇಕಡಾ 10ಕ್ಕಿಂತಲೂ ಕಡಿಮೆ ಅರಣ್ಯ ಭೂಮಿ ಇದೆ. ಈ ಜಿಲ್ಲೆಗಳಲ್ಲಿ ತಾಪಮಾನದ ವೈಪರೀತ್ಯ ಉಂಟಾಗುತ್ತಿದೆ. ಹೀಗಾಗಿ ಅರಣ್ಯ ಭೂಮಿ ವೃದ್ಧಿಗೆ ಸಚಿವ ಉಮೇಶ್ ಕತ್ತಿ ಆದೇಶ ನೀಡಿದ್ದಾರೆ.

ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಶೇಕಡಾ 30ರಷ್ಟು ಅರಣ್ಯ ನಿರ್ಮಾಣಕ್ಕೆ ಸಚಿವ ಉಮೇಶ್ ಕತ್ತಿ ಆದೇಶ
ಉಮೇಶ್ ಕತ್ತಿ
TV9 Web
| Edited By: |

Updated on:Nov 27, 2021 | 3:09 PM

Share

ಬೆಂಗಳೂರು: ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಶೇಕಡಾ 30 ರಷ್ಟು ಅರಣ್ಯ ನಿರ್ಮಾಣಕ್ಕೆ ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಆದೇಶ ನೀಡಿದ್ದಾರೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಶೇಕಡಾ 30ರಷ್ಟು ಅರಣ್ಯ ನಿರ್ಮಾಣ ಆಗಬೇಕು. ಅರಣ್ಯ ನಿರ್ಮಿಸಲು ಭೂಮಿ ಇಲ್ಲದ ಜಿಲ್ಲೆಗಳಲ್ಲಿ ಕಂದಾಯ ಇಲಾಖೆ, ಜಲ ಸಂಪನ್ಮೂಲ ಇಲಾಖೆಗೆ ಸೇರಿ ಬೇರೆ ಇಲಾಖೆಗೆ ಒಳಪಡುವ ಭೂಮಿಯಲ್ಲಿ ಅರಣ್ಯ ಬೆಳೆಸಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಆದೇಶ ನೀಡಿದ್ದಾರೆ.

ಅರಣ್ಯ ಇಲಾಖೆಗೆ ವಿಲೀನ ಮಾಡದೆ ಅರಣ್ಯ ಬೆಳೆಸಲು ಸೂಚನೆ ಕೊಡಲಾಗಿದೆ. ವಿಜಯಪುರ, ಬೀದರ್, ಕಲಬುರಗಿ ಸೇರಿ ಹಲವು ಜಿಲ್ಲೆಗಳಲ್ಲಿ ಶೇಕಡಾ 10ಕ್ಕಿಂತಲೂ ಕಡಿಮೆ ಅರಣ್ಯ ಭೂಮಿ ಇದೆ. ಈ ಜಿಲ್ಲೆಗಳಲ್ಲಿ ತಾಪಮಾನದ ವೈಪರೀತ್ಯ ಉಂಟಾಗುತ್ತಿದೆ. ಹೀಗಾಗಿ ಅರಣ್ಯ ಭೂಮಿ ವೃದ್ಧಿಗೆ ಸಚಿವ ಉಮೇಶ್ ಕತ್ತಿ ಆದೇಶ ನೀಡಿದ್ದಾರೆ.

ಒಮಿಕ್ರಾನ್ ಪ್ರಭೇದದ ವೈರಸ್ ಬಗ್ಗೆ ಅಲರ್ಟ್ ಹಿನ್ನೆಲೆ; ಬೆಳಗಾವಿ ವಿಧಾನಮಂಡಲ ಅಧಿವೇಶನದ ಬಗ್ಗೆ ಅನಿಶ್ಚಿತತೆ ಒಮಿಕ್ರಾನ್ ಪ್ರಭೇದದ ವೈರಸ್ ಬಗ್ಗೆ ಅಲರ್ಟ್ ಹಿನ್ನೆಲೆಯಲ್ಲಿ ಬೆಳಗಾವಿ ವಿಧಾನಮಂಡಲ ಅಧಿವೇಶನದ ಬಗ್ಗೆ ಅನಿಶ್ಚಿತತೆ ಉಂಟಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಮೇಲೆ ಅಧಿವೇಶನದ ಭವಿಷ್ಯ ನಿರ್ಧಾರ ಆಗಲಿರುವ ಬಗ್ಗೆ ಹೇಳಲಾಗಿದೆ. ಮಾರ್ಗಸೂಚಿ ನಿಯಮ ಅಡ್ಡಿ ಆದ್ರೆ ಅಧಿವೇಶನ ಅನುಮಾನ ಎನ್ನಲಾಗುತ್ತಿದೆ. ಕೇಂದ್ರದ ಸಲಹೆ ಪ್ರಕಾರ ರಾಜ್ಯದಿಂದ ಮಾರ್ಗಸೂಚಿ ತಯಾರಾಗಲಿದೆ. ಕರ್ನಾಟಕ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಲಿದೆ.

ತಜ್ಞರ ಸಲಹೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಗಣಿಸಲಿದೆ. ಅಧಿವೇಶನಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಸಿಎಂ ಬಸವರಾಜ ಬೊಮ್ಮಾಯಿ ಸಭೆಯನ್ನು ವಿಧಾನಸಭೆ ಸಚಿವಾಲಯ ಎದುರು ನೋಡುತ್ತಿದೆ.

ದೇಶದಾದ್ಯಂತ ಒಮಿಕ್ರಾನ್ ವೈರಸ್ ಅಲರ್ಟ್ ಹಿನ್ನೆಲೆ ಕೇಂಪೇಗೌಡ ‌ಏರ್ಪೋರ್ಟ್​ನಲ್ಲಿ ಕೂಡ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ವಿದೇಶಿಗಳಿಂದ ಬರುವ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಏರ್ಪೋರ್ಟ್​ನಲ್ಲಿ ‌ಬಿಗಿ ಕ್ರಮಕ್ಕೆ‌ ಮುಂದಾ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮುಂದಾಗಿದೆ. ಏರ್ಪೋರ್ಟ್​ನಲ್ಲಿ‌ ಹೆಚ್ಚಿನ ನಿಗಾವಹಿಸುವಂತೆ ಜಿಲ್ಲಾಧಿಕಾರಿ ಶ್ರೀನಿವಾಸ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ವಿರುದ್ಧ ಸಾಹಿತಿ ಎಸ್.ಎಲ್. ಬೈರಪ್ಪ ಸಾತ್ವಿಕ ಸಿಟ್ಟು, ಪ್ರಧಾನಿ ಮೋದಿಗೆ ಪತ್ರ

ಇದನ್ನೂ ಓದಿ: ಅರಣ್ಯ ಉತ್ಪನ್ನಗಳಿಂದ ಮಾನವ ತಯಾರಿಸಿದ ಉತ್ಪನ್ನಗಳು ಕೂಡಾ ಅರಣ್ಯ ಉತ್ಪನ್ನಗಳು ಎಂಬ ಹಿಂದಿನ ತೀರ್ಪು ನಿರಾಕರಿಸಿದ ಸುಪ್ರೀಂಕೋರ್ಟ್

Published On - 2:47 pm, Sat, 27 November 21

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ