AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics ನಾಗ ಯಾರು, ತಿಮ್ಮ ಯಾರು ನನಗೆ ಗೊತ್ತಿಲ್ಲ: ಸಚಿವ ಸೋಮಣ್ಣ ಸ್ಪಷ್ಟನೆ

ವಿಲ್ಸನ್ ಗಾರ್ಡನ್ ನಾಗ ಯಾರು ಅಂತಾನೇ ನಮಗೆ ಗೊತ್ತಿಲ್ಲ. ನಾನು ಅವನನ್ನು ಭೇಟಿ ಆಗಿಲ್ಲ ಅಂತ ವಸತಿ ಸಚಿವ ಸೋಮಣ್ಣ (V.Somanna) ಸ್ಪಷ್ಟಪಡಿಸಿದ್ದಾರೆ.

Karnataka Politics ನಾಗ ಯಾರು, ತಿಮ್ಮ ಯಾರು ನನಗೆ ಗೊತ್ತಿಲ್ಲ: ಸಚಿವ ಸೋಮಣ್ಣ ಸ್ಪಷ್ಟನೆ
ಸಚಿವ ವಿ.ಸೋಮಣ್ಣ
TV9 Web
| Edited By: |

Updated on:Dec 01, 2022 | 5:05 PM

Share

ಬೆಂಗಳೂರು: ರೌಡಿಶೀಟರ್ ಸೈಲೆಂಟ್ ಸುನೀಲ ಬಿಜೆಪಿ(BJP) ನಾಯಕರ ಜೊತೆ ಕಾಣಿಸಿಕೊಂಡಿದ್ದೇ ತಡ ರಾಜಕೀಯ ನಾಯಕರ ನಡುವೆ ಮಾತಿನ ಮಲ್ಲಯುದ್ಧ ಶುರುವಾಗಿದೆ. ಇದರ ಮಧ್ಯೆ ರೌಡಿ ನಾಗ, ವಸತಿ ಸಚಿವ ವಿ ಸೋಮಣ್ಣ(V Somanna) ಕಚೇರಿಗೆ ಭೇಟಿ ನೀಡಿದ್ದ ಎನ್ನುವ ಸುದ್ದಿ  ರಾಜ್ಯ ರಾಜಕಾರಣದಲ್ಲಿ(Karnataka Politics) ಮತ್ತಷ್ಟು ಹಲ್ ಚಲ್​ ಎಬ್ಬಿಸಿದೆ. ಇದಕ್ಕೆ ಇದೀಗ ಸ್ವತಃ ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಅಸ್ತ್ರವಾದ ಸೈಲೆಂಟ್ ಸುನೀಲ: ಬಿಜೆಪಿಯಲ್ಲಿ ‘ರೌಡಿ ಮೋರ್ಚಾ’ ಘಟಕ ತೆರೆಯುವ ಲಕ್ಷಣವಿದೆ ಎಂದ ಕಾಂಗ್ರೆಸ್

ವಿಧಾನಸೌಧದಲ್ಲಿ ಇಂದು(ಡಿಸೆಂಬರ್ 01) ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, 50 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಸಾವಿರಾರು ಜನ ನನ್ನ ಮನೆಯ ಹತ್ತಿರ ಬಂದು ಹೋಗಿದ್ದಾರೆ. ಅದರಲ್ಲಿ ನಾಗ ಯಾರು, ತಿಮ್ಮ ಯಾರು ಅನ್ನೋದು ನನಗೆ ಗೊತ್ತಿಲ್ಲ. ನಾಗ ಎಂಬುವವರನ್ನು ನಾನೂ ನೋಡಿಲ್ಲ. ಒಂದು ಗಂಟೆಯಲ್ಲ, ಒಂದು ನಿಮಿಷವೂ ನಾನು ಮಾತನಾಡಿಲ್ಲ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಆ ತರಹದ ಜೀವನ ಮಾಡಿಲ್ಲ. ಸಾರ್ವಜನಿಕ ರಸ್ತೆ ಎಂದ ಮೇಲೆ ಯಾರ್ಯಾರೋ ಓಡಾಡುತ್ತಾರೆ. ಅದಕ್ಕೆ ನಾನು ಹೇಗೆ ಹೊಣೆಯಾಗಲು ಸಾಧ್ಯ. ಒಳ್ಳೆಯವರನ್ನೂ ರಸ್ತೆಗೆ ಕರೆ ತಂದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಸ್ಪಷ್ಟಪಡಿಸಿದರು.

ರಾಜಕಾರಣದಲ್ಲಿ 11 ಚುನಾವಣೆ ಎದುರಿಸಿದ್ದೇನೆ. ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ. ಅದರ ಅವಶ್ಯಕತೆಯೂ ನನಗಿಲ್ಲ. ನಮ್ಮ ವಯಸ್ಸು, ನಮ್ಮ ಸೇವೆಯನ್ನು ಮಾಧ್ಯಮ ಸ್ನೇಹಿತರೂ ಒಮ್ಮೆ ಅವಲೋಕಿಸಿಕೊಳ್ಳಬೇಕು. ಆರೋಪ ಮಾಡುವ ಮೊದಲು ನಮ್ಮ ರಾಜಕೀಯ ಇತಿಹಾಸವನ್ನು ನೋಡಬೇಕು. ಸುಮ್ಮನೆ ಸುಳ್ಳು ಆರೋಪ ಮಾಡಿ ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡಬೇಡಿ. ದಯಮಾಡಿ ಇಂತಹ ಸುದ್ದಿಯನ್ನು ಬಿತ್ತರಿಸುವಾಗ ನಮ್ಮ ಪೂರ್ವಾಪರ ತಿಳಿದುಕೊಳ್ಳಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಮನವಿ ಮಾಡಿದರು.

ಬೆಂಗಳೂರಿನ ವಿಜಯನಗರದಲ್ಲಿರುವ ಸಚಿವ ವಿ.ಸೋಮಣ್ಣ ನಿವಾಸಕ್ಕೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ತನ್ನ ಗ್ಯಾಂಗ್​ನ 40 ರಿಂದ 50 ಜನ ಹುಡುಗರ ಜೊತೆಗೆ ಭೇಟಿ ನೀಡಿದ್ದ ಎನ್ನುವ ಸುದ್ದಿ ಹಬ್ಬಿತ್ತು. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡ ವಿರೋಧ ಪಕ್ಷ ಕಾಂಗ್ರೆಸ್, ಬಿಜೆಪಿ ವಿರುದ್ಧ ಮುಗಿಬಿದ್ದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:01 pm, Thu, 1 December 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ