AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಪುಣ್ಯಾತ್ಮ ವಸತಿ ಸಚಿವ ಒಂದು ಮನೆಯನ್ನೂ ನೀಡಿಲ್ಲ; ಸಚಿವ ವಿ.ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಆ ಪುಣ್ಯಾತ್ಮ ವಸತಿ ಸಚಿವ ಒಂದು ಮನೆಯನ್ನೂ ನೀಡಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಆ ಪುಣ್ಯಾತ್ಮ ವಸತಿ ಸಚಿವ ಒಂದು ಮನೆಯನ್ನೂ ನೀಡಿಲ್ಲ; ಸಚಿವ ವಿ.ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Mar 06, 2022 | 2:41 PM

Share

ಬೆಂಗಳೂರು: ನಾವು ಅಧಿಕಾರದಲ್ಲಿ ಇದ್ದಿದ್ದರೆ ಬಡವರಿಗೆ ಮನೆ ನೀಡುತ್ತಿದ್ದೆವು. 1 ಲಕ್ಷ ಮನೆಗಳನ್ನು ಬಡವರಿಗಾಗಿ ನೀಡುತ್ತಿದ್ದೆವು. ಆದ್ರೆ ಆ ಪುಣ್ಯಾತ್ಮ ವಸತಿ ಸಚಿವ ಒಂದು ಮನೆಯನ್ನೂ ನೀಡಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ(V Somanna) ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ( Siddaramaiah) ವಾಗ್ದಾಳಿ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ(Rice) ನೀಡುತ್ತೇವೆ. ಕಾಂಗ್ರೆಸ್​ಗೆ ಓಟು ಹಾಕಿದರೆ ನನಗೇ ಓಟು ಹಾಕಿದಂತೆ ಎಂದು ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಕಲಬುರಗಿ: ಪ್ರಾದೇಶಿಕ ಅಸಮತೋಲನ ಖಂಡಿಸಿ ಕಾಂಗ್ರೆಸ್​ನಿಂದ ಕಲ್ಯಾಣ ಕರ್ನಾಟಕ ಯಾತ್ರೆ: ಈಶ್ವರ ಖಂಡ್ರೆ 

ಪ್ರಾದೇಶಿಕ ಅಸಮತೋಲನ ಖಂಡಿಸಿ ಕಲ್ಯಾಣ ಕರ್ನಾಟಕ ಯಾತ್ರೆ ನಡೆಸಲಾಗುವುದು. ಕಾಂಗ್ರೆಸ್‌ನಿಂದ ಕಲ್ಯಾಣ ಕರ್ನಾಟಕ ಯಾತ್ರೆ ಮಾಡುತ್ತೇವೆ. ಕಲ್ಯಾಣ ಕರ್ನಾಟಕ ಯಾತ್ರೆಗೆ ರೂಪರೇಷೆ ಸಿದ್ಧಗೊಳಿಸುತ್ತಿದ್ದೇವೆ. ಈಗಾಗಲೇ ಈ ಬಗ್ಗೆ 2 ಬಾರಿ ಸಭೆ ಕರೆದು ಚರ್ಚೆ ಮಾಡಿದ್ದೇವೆ ಎಂದು ಕಲಬುರಗಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭಾನುವಾರ ಹೇಳಿಕೆ ನೀಡಿದ್ದಾರೆ.

ಬಿಜೆಪಿಯವರು ಕೋಮ ಸೌಹರ್ದಾತೆಯನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಪ್ರಾದೇಶಿಕ ಅಸಮತೋಲನ ಖಂಡಿಸಿ ಕಲ್ಯಾಣ ಕರ್ನಾಟಕ ಯಾತ್ರೆ ನಡೆಸುತ್ತೇವೆ. ಬರುವ ಏಪ್ರೀಲ್​ನಲ್ಲಿ ಯಾತ್ರೆ ನಡೆಸೋ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಈ ಬಗ್ಗೆ ಎರಡು ಬಾರಿ ಸಭೆ ಕರೆದು ಚರ್ಚೆ ಮಾಡಿದ್ದೇವೆ ಎಂದು ಕಲಬುರಗಿ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಬಿಜೆಪಿ ಸರ್ಕಾರದಿಂದ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ ಆಗಿದೆ. ಬಜೆಟ್ ನಲ್ಲಿ ಮೂರು ಸಾವಿರ ಕೋಟಿ ನೀಡಿದ್ದಾರೆ. ಆದ್ರೆ ಈ ಹಿಂದೆ ನೀಡಿದ್ದ ಹಣವನ್ನೇ ಇನ್ನು ಖರ್ಚು ಮಾಡಿಲ್ಲ. ಹಣ ನೀಡಿರೋದು ಟ್ರಜರಿಯಲ್ಲಿಟ್ಟು ಪೂಜೆ ಮಾಡಲಿಕ್ಕಾ? ಬಿಜೆಪಿಯವರು ಕೇವಲ ತುಟಿಗೆ ತುಪ್ಪ ಹಚ್ಚೋ ಕೆಲಸ ಮಾಡ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಖಂಡ್ರೆ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಿಂದ ಸರ್ಕಾರ ಕೋಟಿ ರೂಪಾಯಿ ನೀಡಿದೆ. ಹೆಚ್.ಡಿ ಕುಮಾರಸ್ವಾಮಿ ಅವರು ಹೊಟ್ಟೆಕಿಚ್ಚಿನಿಂದ ಮಾತಾಡ್ತಿದ್ದಾರೆ ಎಂದು ಪಾದಯಾತ್ರೆ ಹಾಗೂ ಮೇಕೆದಾಟು ಯೋಜನೆ ಬಗ್ಗೆ ಬಿಜೆಪಿ, ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ನೀಡಿರುವ ಹೇಳಿಕೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ‘ಸುಡುಗಾಡು ಸಿದ್ದ’ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ; ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ ಸೋಮಣ್ಣ ಕಿಡಿ

ಶಾಲೆಗೆ ಕಾಂಪೌಂಡ್ ನಿರ್ಮಾಣ ವಿಚಾರಕ್ಕೆ ಮಂಡ್ಯದ ಮಾಜಿ ಹಾಗೂ ಹಾಲಿ ಶಾಸಕರ ನಡುವೆ ಕಿತ್ತಾಟ, ಕರೆ ಮಾಡಿ ಬುದ್ದಿ ಮಾತು ಹೇಳಿದ ಸಿದ್ದರಾಮಯ್ಯ

Published On - 2:32 pm, Sun, 6 March 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ