ತುಮಕೂರು, ಹೊಸೂರು ಮಧ್ಯೆ ಮೂರು ಹೊಸ ಮೆಮು ರೈಲು: ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ವಿವರ

ತುಮಕೂರು ಮತ್ತು ಹೊಸೂರು ಮಧ್ಯೆ ಪ್ರತಿ ದಿನ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ನೈಋತ್ಯ ರೈಲ್ವೆ (ಎಸ್‌ಡಬ್ಲ್ಯುಆರ್) ಮೂರು ಹೊಸ ಮೆಮು ರೈಲುಗಳನ್ನು ಘೋಷಿಸಿದೆ. ಇದರಿಂದಾಗಿ ಬೆಂಗಳೂರಿನಿಂದ ತುಮಕೂರು ಮತ್ತು ಹೊಸೂರಿಗೆ ರೈಲು ಸಂಪರ್ಕವು ಸುಧಾರಿಸಲಿದೆ. ರೈಲುಗಳ ವೇಳಾಪಟ್ಟಿ ಮತ್ತಿತರ ವಿವರ ಇಲ್ಲಿದೆ.

ತುಮಕೂರು, ಹೊಸೂರು ಮಧ್ಯೆ ಮೂರು ಹೊಸ ಮೆಮು ರೈಲು: ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ವಿವರ
ಸಾಂದರ್ಭಿಕ ಚಿತ್ರ
Follow us
|

Updated on: Sep 26, 2024 | 8:49 AM

ಬೆಂಗಳೂರು, ಸೆಪ್ಟೆಂಬರ್ 26: ತುಮಕೂರು ಮತ್ತು ಹೊಸೂರು ಮಧ್ಯೆ ಸುಗಮ ಸಂಚಾರಕ್ಕಾಗಿ ನೈಋತ್ಯ ರೈಲ್ವೆ ಮಹತ್ವದ ಕ್ರಮ ಕೈಗೊಂಡಿದೆ. ಉಭಯ ನಿಲ್ದಾಣಗಳ ಮಧ್ಯೆ ಮೂರು ಹೊಸ ಮೆಮು ರೈಲುಗಳನ್ನು ಘೋಷಿಸಲಾಗಿದ್ದು, ಇವುಗಳಲ್ಲಿ ಎರಡು ರೈಲುಗಳು ಯಶವಂತಪುರವನ್ನು ತುಮಕೂರು ಮತ್ತು ಹೊಸೂರಿನೊಂದಿಗೆ ಸಂಪರ್ಕಿಸಲಿವೆ. ಮೂರನೆಯದು ಬಾಣಸವಾಡಿ ಮತ್ತು ತುಮಕೂರು ನಡುವೆ ಸಂಚರಿಸಲಿವೆ. ಎಲ್ಲ ರೈಲುಗಳೂ ತಲಾ ಎಂಟು ಕೋಚ್​ಗಳನ್ನು ಹೊಂದಿರಲಿವೆ.

ನಾಳೆ ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣರಿಂದ ಚಾಲನೆ

ಸೆಪ್ಟೆಂಬರ್ 27 ರಂದು ತುಮಕೂರು ರೈಲ್ವೆ ನಿಲ್ದಾಣದಲ್ಲಿ ರೈಲ್ವೇ ರಾಜ್ಯ ಸಚಿವ ವಿ ಸೋಮಣ್ಣ ಅವರು ರೈಲು ಸಂಖ್ಯೆ 06201 (ತುಮಕೂರು-ಯಶವಂತಪುರ) ಉದ್ಘಾಟನಾ ಓಟಕ್ಕೆ ಚಾಲನೆ ನೀಡಲಿದ್ದಾರೆ.

ಯಶವಂತಪುರ ತುಮಕೂರು ಮೆಮು ರೈಲಿನ ವಿವರ

ರೈಲು ಸಂಖ್ಯೆ 06201/06202 ರ ನಿಯಮಿತ ಸೇವೆಗಳು ಸೆಪ್ಟೆಂಬರ್ 27 ರಂದು ಯಶವಂತಪುರದಿಂದ ಮತ್ತು ಸೆಪ್ಟೆಂಬರ್ 28 ರಂದು ತುಮಕೂರಿನಿಂದ ಪ್ರಾರಂಭವಾಗಲಿವೆ. ರೈಲು ಸಂಖ್ಯೆ 06201 ಭಾನುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸುತ್ತದೆ. ತುಮಕೂರಿನಿಂದ ಬೆಳಗ್ಗೆ 8.45ಕ್ಕೆ ಹೊರಟು 10.25ಕ್ಕೆ ಯಶವಂತಪುರ ತಲುಪಲಿದೆ.

ರೈಲು ಸಂಖ್ಯೆ 06202 ಭಾನುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಯಶವಂತಪುರದಿಂದ ಸಂಜೆ 5.40 ಕ್ಕೆ ಹೊರಟು 7.05 ಕ್ಕೆ ತುಮಕೂರು ತಲುಪಲಿದೆ.

ಯಶವಂತಪುರ ತುಮಕೂರು ಮೆಮು ರೈಲಿಗೆ ಎಲ್ಲೆಲ್ಲಿ ನಿಲುಗಡೆ?

ಯಶವಂತಪುರ ತುಮಕೂರು ಮೆಮು ರೈಲಿಗೆ ಕ್ಯಾತ್ಸಂದ್ರ ಹಾಲ್ಟ್, ಹಿರೇಹಳ್ಳಿ, ದಾಬಾಸ್​​ಪೇಟೆ, ನಿಡವಂಡ, ಮುದ್ದಲಿಂಗನಹಳ್ಳಿ, ದೊಡ್ಡಬೆಲೆ, ಭೈರನಾಯಕನಹಳ್ಳಿ, ಗೊಲ್ಲಹಳ್ಳಿ, ಸೋಲದೇವನಹಳ್ಳಿ ಮತ್ತು ಚಿಕ್ಕಬಾಣಾವರಗಳಲ್ಲಿ ನಿಲುಗಡೆ ಇದೆ.

ಯಶವಂತಪುರ ಹೊಸೂರು ಮೆಮು ರೈಲು

ರೈಲು ಸಂಖ್ಯೆ 06203/06204 ರ ನಿಯಮಿತ ಸೇವೆಗಳು ಸೆಪ್ಟೆಂಬರ್ 28 ರಂದು ಯಶವಂತಪುರ ಮತ್ತು ಹೊಸೂರಿನಿಂದ ಪ್ರಾರಂಭವಾಗುತ್ತವೆ. ರೈಲು ಸಂಖ್ಯೆ 06203 ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಸಂಚರಿಸಲಿದ್ದು, ಯಶವಂತಪುರದಿಂದ ಬೆಳಗ್ಗೆ 10.45ಕ್ಕೆ ಹೊರಟು ಮಧ್ಯಾಹ್ನ 12.30ಕ್ಕೆ ಹೊಸೂರು ತಲುಪಲಿದೆ.

ರೈಲು ಸಂಖ್ಯೆ 06204 ಭಾನುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಹೊಸೂರಿನಿಂದ ಮಧ್ಯಾಹ್ನ 3.20ಕ್ಕೆ ಹೊರಟು ಯಶವಂತಪುರಕ್ಕೆ ಸಂಜೆ 5.15ಕ್ಕೆ ತಲುಪಲಿದೆ.

ಆನೇಕಲ್ ರಸ್ತೆ, ಹೀಲಲಿಗೆ, ಕರ್ಮೇಲರಂ, ಬೆಳ್ಳಂದೂರು ರಸ್ತೆ, ಬಾಣಸವಾಡಿ ಮತ್ತು ಹೆಬ್ಬಾಳಗಳಲ್ಲಿ ನಿಲುಗಡೆ ಇದೆ.

ಬಾಣಸವಾಡಿ ತುಮಕೂರು ಮೆಮು ರೈಲು

ರೈಲು ಸಂಖ್ಯೆ 06205/06206 ಬಾಣಸವಾಡಿ-ತುಮಕೂರು-ಬಾಣಸವಾಡಿ ನಿಯಮಿತ ಸೇವೆಗಳು ಸೆಪ್ಟೆಂಬರ್ 28 ರಂದು ತುಮಕೂರಿನಿಂದ ಮತ್ತು ಸೆಪ್ಟೆಂಬರ್ 30 ರಂದು ಬಾಣಸವಾಡಿಯಿಂದ ಪ್ರಾರಂಭವಾಗಲಿದೆ. ರೈಲು ಸಂಖ್ಯೆ 06205 ಸೋಮವಾರ ಮಾತ್ರ ಸಂಚರಿಸಲಿದ್ದು, ಬಾಣಸವಾಡಿಯಿಂದ ಬೆಳಗ್ಗೆ 6.15ಕ್ಕೆ ಹೊರಟು ತುಮಕೂರಿಗೆ 8.35ಕ್ಕೆ ತಲುಪಲಿದೆ.

ಇದನ್ನೂ ಓದಿ: ಈ ಬೆಂಗ್ಳೂರು ಟ್ರಾಫಿಕ್‌ ಜಾಮ್‌ನಿಂದ ಟ್ರೈನ್‌ಗೂ ಕೂಡಾ ತಪ್ಪಿಸಿಕೊಳ್ಳೋಕೆ ಆಗ್ಲಿಲ್ಲ ನೋಡಿ…

ರೈಲು ಸಂಖ್ಯೆ 06206 ಶನಿವಾರದಂದು ಮಾತ್ರ ಸಂಚರಿಸಲಿದ್ದು, ತುಮಕೂರಿನಿಂದ ರಾತ್ರಿ 7.40ಕ್ಕೆ ಹೊರಟು ರಾತ್ರಿ 10.05ಕ್ಕೆ ಬಾಣಸವಾಡಿ ತಲುಪಲಿದೆ.

ಹೆಬ್ಬಾಳ, ಚಿಕ್ಕಬಾಣಾವರ, ಭೈರನಾಯಕನಹಳ್ಳಿ, ಮುದ್ದಲಿಂಗನಹಳ್ಳಿ, ನಿಡವಂಡ, ದಾಬಾಸ್​ಪೇಟೆ ಮತ್ತು ಕ್ಯಾತ್ಸಂದ್ರ ಹಾಲ್ಟ್ ನಿಲುಗಡೆ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ