AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು, ಹೊಸೂರು ಮಧ್ಯೆ ಮೂರು ಹೊಸ ಮೆಮು ರೈಲು: ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ವಿವರ

ತುಮಕೂರು ಮತ್ತು ಹೊಸೂರು ಮಧ್ಯೆ ಪ್ರತಿ ದಿನ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ನೈಋತ್ಯ ರೈಲ್ವೆ (ಎಸ್‌ಡಬ್ಲ್ಯುಆರ್) ಮೂರು ಹೊಸ ಮೆಮು ರೈಲುಗಳನ್ನು ಘೋಷಿಸಿದೆ. ಇದರಿಂದಾಗಿ ಬೆಂಗಳೂರಿನಿಂದ ತುಮಕೂರು ಮತ್ತು ಹೊಸೂರಿಗೆ ರೈಲು ಸಂಪರ್ಕವು ಸುಧಾರಿಸಲಿದೆ. ರೈಲುಗಳ ವೇಳಾಪಟ್ಟಿ ಮತ್ತಿತರ ವಿವರ ಇಲ್ಲಿದೆ.

ತುಮಕೂರು, ಹೊಸೂರು ಮಧ್ಯೆ ಮೂರು ಹೊಸ ಮೆಮು ರೈಲು: ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ವಿವರ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Sep 26, 2024 | 8:49 AM

Share

ಬೆಂಗಳೂರು, ಸೆಪ್ಟೆಂಬರ್ 26: ತುಮಕೂರು ಮತ್ತು ಹೊಸೂರು ಮಧ್ಯೆ ಸುಗಮ ಸಂಚಾರಕ್ಕಾಗಿ ನೈಋತ್ಯ ರೈಲ್ವೆ ಮಹತ್ವದ ಕ್ರಮ ಕೈಗೊಂಡಿದೆ. ಉಭಯ ನಿಲ್ದಾಣಗಳ ಮಧ್ಯೆ ಮೂರು ಹೊಸ ಮೆಮು ರೈಲುಗಳನ್ನು ಘೋಷಿಸಲಾಗಿದ್ದು, ಇವುಗಳಲ್ಲಿ ಎರಡು ರೈಲುಗಳು ಯಶವಂತಪುರವನ್ನು ತುಮಕೂರು ಮತ್ತು ಹೊಸೂರಿನೊಂದಿಗೆ ಸಂಪರ್ಕಿಸಲಿವೆ. ಮೂರನೆಯದು ಬಾಣಸವಾಡಿ ಮತ್ತು ತುಮಕೂರು ನಡುವೆ ಸಂಚರಿಸಲಿವೆ. ಎಲ್ಲ ರೈಲುಗಳೂ ತಲಾ ಎಂಟು ಕೋಚ್​ಗಳನ್ನು ಹೊಂದಿರಲಿವೆ.

ನಾಳೆ ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣರಿಂದ ಚಾಲನೆ

ಸೆಪ್ಟೆಂಬರ್ 27 ರಂದು ತುಮಕೂರು ರೈಲ್ವೆ ನಿಲ್ದಾಣದಲ್ಲಿ ರೈಲ್ವೇ ರಾಜ್ಯ ಸಚಿವ ವಿ ಸೋಮಣ್ಣ ಅವರು ರೈಲು ಸಂಖ್ಯೆ 06201 (ತುಮಕೂರು-ಯಶವಂತಪುರ) ಉದ್ಘಾಟನಾ ಓಟಕ್ಕೆ ಚಾಲನೆ ನೀಡಲಿದ್ದಾರೆ.

ಯಶವಂತಪುರ ತುಮಕೂರು ಮೆಮು ರೈಲಿನ ವಿವರ

ರೈಲು ಸಂಖ್ಯೆ 06201/06202 ರ ನಿಯಮಿತ ಸೇವೆಗಳು ಸೆಪ್ಟೆಂಬರ್ 27 ರಂದು ಯಶವಂತಪುರದಿಂದ ಮತ್ತು ಸೆಪ್ಟೆಂಬರ್ 28 ರಂದು ತುಮಕೂರಿನಿಂದ ಪ್ರಾರಂಭವಾಗಲಿವೆ. ರೈಲು ಸಂಖ್ಯೆ 06201 ಭಾನುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸುತ್ತದೆ. ತುಮಕೂರಿನಿಂದ ಬೆಳಗ್ಗೆ 8.45ಕ್ಕೆ ಹೊರಟು 10.25ಕ್ಕೆ ಯಶವಂತಪುರ ತಲುಪಲಿದೆ.

ರೈಲು ಸಂಖ್ಯೆ 06202 ಭಾನುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಯಶವಂತಪುರದಿಂದ ಸಂಜೆ 5.40 ಕ್ಕೆ ಹೊರಟು 7.05 ಕ್ಕೆ ತುಮಕೂರು ತಲುಪಲಿದೆ.

ಯಶವಂತಪುರ ತುಮಕೂರು ಮೆಮು ರೈಲಿಗೆ ಎಲ್ಲೆಲ್ಲಿ ನಿಲುಗಡೆ?

ಯಶವಂತಪುರ ತುಮಕೂರು ಮೆಮು ರೈಲಿಗೆ ಕ್ಯಾತ್ಸಂದ್ರ ಹಾಲ್ಟ್, ಹಿರೇಹಳ್ಳಿ, ದಾಬಾಸ್​​ಪೇಟೆ, ನಿಡವಂಡ, ಮುದ್ದಲಿಂಗನಹಳ್ಳಿ, ದೊಡ್ಡಬೆಲೆ, ಭೈರನಾಯಕನಹಳ್ಳಿ, ಗೊಲ್ಲಹಳ್ಳಿ, ಸೋಲದೇವನಹಳ್ಳಿ ಮತ್ತು ಚಿಕ್ಕಬಾಣಾವರಗಳಲ್ಲಿ ನಿಲುಗಡೆ ಇದೆ.

ಯಶವಂತಪುರ ಹೊಸೂರು ಮೆಮು ರೈಲು

ರೈಲು ಸಂಖ್ಯೆ 06203/06204 ರ ನಿಯಮಿತ ಸೇವೆಗಳು ಸೆಪ್ಟೆಂಬರ್ 28 ರಂದು ಯಶವಂತಪುರ ಮತ್ತು ಹೊಸೂರಿನಿಂದ ಪ್ರಾರಂಭವಾಗುತ್ತವೆ. ರೈಲು ಸಂಖ್ಯೆ 06203 ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಸಂಚರಿಸಲಿದ್ದು, ಯಶವಂತಪುರದಿಂದ ಬೆಳಗ್ಗೆ 10.45ಕ್ಕೆ ಹೊರಟು ಮಧ್ಯಾಹ್ನ 12.30ಕ್ಕೆ ಹೊಸೂರು ತಲುಪಲಿದೆ.

ರೈಲು ಸಂಖ್ಯೆ 06204 ಭಾನುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಹೊಸೂರಿನಿಂದ ಮಧ್ಯಾಹ್ನ 3.20ಕ್ಕೆ ಹೊರಟು ಯಶವಂತಪುರಕ್ಕೆ ಸಂಜೆ 5.15ಕ್ಕೆ ತಲುಪಲಿದೆ.

ಆನೇಕಲ್ ರಸ್ತೆ, ಹೀಲಲಿಗೆ, ಕರ್ಮೇಲರಂ, ಬೆಳ್ಳಂದೂರು ರಸ್ತೆ, ಬಾಣಸವಾಡಿ ಮತ್ತು ಹೆಬ್ಬಾಳಗಳಲ್ಲಿ ನಿಲುಗಡೆ ಇದೆ.

ಬಾಣಸವಾಡಿ ತುಮಕೂರು ಮೆಮು ರೈಲು

ರೈಲು ಸಂಖ್ಯೆ 06205/06206 ಬಾಣಸವಾಡಿ-ತುಮಕೂರು-ಬಾಣಸವಾಡಿ ನಿಯಮಿತ ಸೇವೆಗಳು ಸೆಪ್ಟೆಂಬರ್ 28 ರಂದು ತುಮಕೂರಿನಿಂದ ಮತ್ತು ಸೆಪ್ಟೆಂಬರ್ 30 ರಂದು ಬಾಣಸವಾಡಿಯಿಂದ ಪ್ರಾರಂಭವಾಗಲಿದೆ. ರೈಲು ಸಂಖ್ಯೆ 06205 ಸೋಮವಾರ ಮಾತ್ರ ಸಂಚರಿಸಲಿದ್ದು, ಬಾಣಸವಾಡಿಯಿಂದ ಬೆಳಗ್ಗೆ 6.15ಕ್ಕೆ ಹೊರಟು ತುಮಕೂರಿಗೆ 8.35ಕ್ಕೆ ತಲುಪಲಿದೆ.

ಇದನ್ನೂ ಓದಿ: ಈ ಬೆಂಗ್ಳೂರು ಟ್ರಾಫಿಕ್‌ ಜಾಮ್‌ನಿಂದ ಟ್ರೈನ್‌ಗೂ ಕೂಡಾ ತಪ್ಪಿಸಿಕೊಳ್ಳೋಕೆ ಆಗ್ಲಿಲ್ಲ ನೋಡಿ…

ರೈಲು ಸಂಖ್ಯೆ 06206 ಶನಿವಾರದಂದು ಮಾತ್ರ ಸಂಚರಿಸಲಿದ್ದು, ತುಮಕೂರಿನಿಂದ ರಾತ್ರಿ 7.40ಕ್ಕೆ ಹೊರಟು ರಾತ್ರಿ 10.05ಕ್ಕೆ ಬಾಣಸವಾಡಿ ತಲುಪಲಿದೆ.

ಹೆಬ್ಬಾಳ, ಚಿಕ್ಕಬಾಣಾವರ, ಭೈರನಾಯಕನಹಳ್ಳಿ, ಮುದ್ದಲಿಂಗನಹಳ್ಳಿ, ನಿಡವಂಡ, ದಾಬಾಸ್​ಪೇಟೆ ಮತ್ತು ಕ್ಯಾತ್ಸಂದ್ರ ಹಾಲ್ಟ್ ನಿಲುಗಡೆ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!