AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಹೇಳಿಕೆ; ಸದನ, ಸಭಾಧ್ಯಕ್ಷರ ಗೌರವ ಉಳಿಯಬೇಕಿದ್ರೆ ಕ್ಷಮೆ ಕೇಳಲಿ; ಹೆಚ್​​ಡಿಕೆ

ಸಚಿವ ಜಮೀರ್ ಅಹಮ್ಮದ್​ ಖಾನ್ (Zameer Ahmad Khan)​ ಹೇಳಿಕೆಗೆ ‘ ಸದನ ಹಾಗೂ ಸಭಾಧ್ಯಕ್ಷರ ಗೌರವ ಉಳಿಯಬೇಕಿದ್ರೆ ಕ್ಷಮೆ ಕೇಳಲಿ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ವಾಗ್ದಾಳಿ ನಡೆಸಿದ್ದು, ಇಂತಹ ಚೈಲ್ಡಿಷ್​ಗಳನ್ನು ಇಟ್ಟುಕೊಂಡು ಸದನದ ಗೌರವ ಉಳಿಸಲು ಆಗುತ್ತಾ ಎಂದು ಕಿಡಿಕಾರಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಹೇಳಿಕೆ; ಸದನ, ಸಭಾಧ್ಯಕ್ಷರ ಗೌರವ ಉಳಿಯಬೇಕಿದ್ರೆ ಕ್ಷಮೆ ಕೇಳಲಿ; ಹೆಚ್​​ಡಿಕೆ
ಸಚಿವ ಜಮೀರ್​ ಅಹಮ್ಮದ್​ ಹೇಳಿಕೆಗೆ ಹೆಚ್​ಡಿ ಕುಮಾರಸ್ವಾಮಿ ಗರಂ
ಪ್ರಸನ್ನ ಗಾಂವ್ಕರ್​
| Edited By: |

Updated on:Nov 17, 2023 | 4:00 PM

Share

ಬೆಂಗಳೂರು, ನ.17: ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಕರ್ನಾಟಕದ ವಸತಿ ಸಚಿವ ಜಮೀರ್ ಅಹಮ್ಮದ್​ ಖಾನ್ (Zameer Ahmad Khan)​ ಹೇಳಿಕೆಗೆ ‘ ಸದನ ಹಾಗೂ ಸಭಾಧ್ಯಕ್ಷರ ಗೌರವ ಉಳಿಯಬೇಕಿದ್ರೆ ಕ್ಷಮೆ ಕೇಳಲಿ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿ(Bengaluru)ನಲ್ಲಿ ಮಾತನಾಡಿದ ಅವರು ‘ ಖಾದರ್​ ಕಾಂಗ್ರೆಸ್ ಸ್ಪೀಕರ್ ಅಲ್ಲ, 224 ಶಾಸಕರಿಗೆ ರಕ್ಷಣೆ ಕೊಡುವವರು. ಅವರನ್ನು ಒಂದು ಧರ್ಮದ ಸೋಂಕಿಗೆ ಒಳಪಡಿಸುವುದು ಸರಿಯಲ್ಲ. ನಾಳೆ ನಿಮ್ಮ ಸಚಿವರು ಹೀಗೆ ಹೇಳಿದ್ದಾರೆ ಎಂದು ಬಿಜೆಪಿಯ 66 ಜನ ಸ್ಪೀಕರ್​ಗೆ ನಾವು ಗೌರವ ಕೊಡೊಲ್ಲ ಅಂದರೆ ಏನು ಮಾಡ್ತೀರಾ?, ಇಂತಹ ಚೈಲ್ಡಿಷ್​ಗಳನ್ನು ಇಟ್ಟುಕೊಂಡು ಸದನದ ಗೌರವ ಉಳಿಸಲು ಆಗುತ್ತಾ ಎಂದು ಕಿಡಿಕಾರಿದ್ದಾರೆ.

ಸಚಿವ ಜಮೀರ್ ಅಹಮ್ಮದ್​ ಖಾನ್ ಹೇಳಿದ್ದೇನು?

ತೆಲಂಗಾಣ ಚುನಾವಣಾ ಅಖಾಡಕ್ಕೆ ಸಚಿವ ಜಮೀರ್ ಅಹಮ್ಮದ್ ಖಾನ್ ತೆರಳಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್​ನಲ್ಲಿ ತೊಡಗಿರುವ ಅವರು ‘ಇಂದು ಹೈದರಾಬಾದ್​​ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯ ಕಾಂಗ್ರೆಸ್​​ನಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಸ್ಥಾನಮಾನಗಳನ್ನು ಒತ್ತಿ ಒತ್ತಿ ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್​ನಿಂದ ಬರೊಬ್ಬರಿ 9 ಮುಸ್ಲಿಮರು ಗೆದ್ದಿದ್ದಾರೆ ಎಂದರು.

ಇದನ್ನೂ ಓದಿ: ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ: ತೆಲಂಗಾಣದಲ್ಲಿ ಜಮೀರ್ ಅಬ್ಬರದ ಭಾಷಣ

ಅಷ್ಟೇ ಅಲ್ಲ, ಗೆದ್ದಿರುವ 9 ಮುಸ್ಲಿಂ ಶಾಸಕರ ಪೈಕಿ 5 ಶಾಸಕರಿಗೆ ಅಧಿಕಾರ ನೀಡಿದೆ. ನನ್ನನ್ನು ಸಚಿವನಾಗಿ ಕೂಡ ಮಾಡಿದೆ. ಅಲ್ಲದೇ ರಹೀಂ ಖಾನ್​​ ಸಹ ಮಂತ್ರಿ ಆಗಿದ್ದಾರೆ. ಸಲೀಂ ಅಹಮದ್​​​ ಅವರನ್ನು​​​ ಮುಖ್ಯ ಸಚೇತಕರಾಗಿ ಮಾಡಲಾಗಿದೆ. ನಜೀರ್ ಅಹಮದ್​​​​​​​​​ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ. ಇನ್ನು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಯಾವ ಮುಸ್ಲಿಂ ಸ್ಪೀಕರ್ ಆಗಿರಲಿಲ್ಲ. ಮೊದಲ ಬಾರಿಗೆ ಯು.ಟಿ ಖಾದರ್​ ಅವರನ್ನು ವಿಧಾನಸಭಾ ಸ್ಪೀಕರ್​​ ಆಗಿ ನೇಮಿಸಲಾಗಿದೆ. ಈಗ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ ಎಂದು ತೆಲಂಗಾಣ ಚುನಾವಣಾ ಪ್ರಚಾರದಲ್ಲಿ ಜಮೀರ್ ಅಹಮ್ಮದ್​ ಖಾನ್​ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Fri, 17 November 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು