Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಹೇಳಿಕೆ; ಸದನ, ಸಭಾಧ್ಯಕ್ಷರ ಗೌರವ ಉಳಿಯಬೇಕಿದ್ರೆ ಕ್ಷಮೆ ಕೇಳಲಿ; ಹೆಚ್​​ಡಿಕೆ

ಸಚಿವ ಜಮೀರ್ ಅಹಮ್ಮದ್​ ಖಾನ್ (Zameer Ahmad Khan)​ ಹೇಳಿಕೆಗೆ ‘ ಸದನ ಹಾಗೂ ಸಭಾಧ್ಯಕ್ಷರ ಗೌರವ ಉಳಿಯಬೇಕಿದ್ರೆ ಕ್ಷಮೆ ಕೇಳಲಿ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ವಾಗ್ದಾಳಿ ನಡೆಸಿದ್ದು, ಇಂತಹ ಚೈಲ್ಡಿಷ್​ಗಳನ್ನು ಇಟ್ಟುಕೊಂಡು ಸದನದ ಗೌರವ ಉಳಿಸಲು ಆಗುತ್ತಾ ಎಂದು ಕಿಡಿಕಾರಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಹೇಳಿಕೆ; ಸದನ, ಸಭಾಧ್ಯಕ್ಷರ ಗೌರವ ಉಳಿಯಬೇಕಿದ್ರೆ ಕ್ಷಮೆ ಕೇಳಲಿ; ಹೆಚ್​​ಡಿಕೆ
ಸಚಿವ ಜಮೀರ್​ ಅಹಮ್ಮದ್​ ಹೇಳಿಕೆಗೆ ಹೆಚ್​ಡಿ ಕುಮಾರಸ್ವಾಮಿ ಗರಂ
Follow us
ಪ್ರಸನ್ನ ಗಾಂವ್ಕರ್​
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 17, 2023 | 4:00 PM

ಬೆಂಗಳೂರು, ನ.17: ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಕರ್ನಾಟಕದ ವಸತಿ ಸಚಿವ ಜಮೀರ್ ಅಹಮ್ಮದ್​ ಖಾನ್ (Zameer Ahmad Khan)​ ಹೇಳಿಕೆಗೆ ‘ ಸದನ ಹಾಗೂ ಸಭಾಧ್ಯಕ್ಷರ ಗೌರವ ಉಳಿಯಬೇಕಿದ್ರೆ ಕ್ಷಮೆ ಕೇಳಲಿ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿ(Bengaluru)ನಲ್ಲಿ ಮಾತನಾಡಿದ ಅವರು ‘ ಖಾದರ್​ ಕಾಂಗ್ರೆಸ್ ಸ್ಪೀಕರ್ ಅಲ್ಲ, 224 ಶಾಸಕರಿಗೆ ರಕ್ಷಣೆ ಕೊಡುವವರು. ಅವರನ್ನು ಒಂದು ಧರ್ಮದ ಸೋಂಕಿಗೆ ಒಳಪಡಿಸುವುದು ಸರಿಯಲ್ಲ. ನಾಳೆ ನಿಮ್ಮ ಸಚಿವರು ಹೀಗೆ ಹೇಳಿದ್ದಾರೆ ಎಂದು ಬಿಜೆಪಿಯ 66 ಜನ ಸ್ಪೀಕರ್​ಗೆ ನಾವು ಗೌರವ ಕೊಡೊಲ್ಲ ಅಂದರೆ ಏನು ಮಾಡ್ತೀರಾ?, ಇಂತಹ ಚೈಲ್ಡಿಷ್​ಗಳನ್ನು ಇಟ್ಟುಕೊಂಡು ಸದನದ ಗೌರವ ಉಳಿಸಲು ಆಗುತ್ತಾ ಎಂದು ಕಿಡಿಕಾರಿದ್ದಾರೆ.

ಸಚಿವ ಜಮೀರ್ ಅಹಮ್ಮದ್​ ಖಾನ್ ಹೇಳಿದ್ದೇನು?

ತೆಲಂಗಾಣ ಚುನಾವಣಾ ಅಖಾಡಕ್ಕೆ ಸಚಿವ ಜಮೀರ್ ಅಹಮ್ಮದ್ ಖಾನ್ ತೆರಳಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್​ನಲ್ಲಿ ತೊಡಗಿರುವ ಅವರು ‘ಇಂದು ಹೈದರಾಬಾದ್​​ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯ ಕಾಂಗ್ರೆಸ್​​ನಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಸ್ಥಾನಮಾನಗಳನ್ನು ಒತ್ತಿ ಒತ್ತಿ ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್​ನಿಂದ ಬರೊಬ್ಬರಿ 9 ಮುಸ್ಲಿಮರು ಗೆದ್ದಿದ್ದಾರೆ ಎಂದರು.

ಇದನ್ನೂ ಓದಿ: ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ: ತೆಲಂಗಾಣದಲ್ಲಿ ಜಮೀರ್ ಅಬ್ಬರದ ಭಾಷಣ

ಅಷ್ಟೇ ಅಲ್ಲ, ಗೆದ್ದಿರುವ 9 ಮುಸ್ಲಿಂ ಶಾಸಕರ ಪೈಕಿ 5 ಶಾಸಕರಿಗೆ ಅಧಿಕಾರ ನೀಡಿದೆ. ನನ್ನನ್ನು ಸಚಿವನಾಗಿ ಕೂಡ ಮಾಡಿದೆ. ಅಲ್ಲದೇ ರಹೀಂ ಖಾನ್​​ ಸಹ ಮಂತ್ರಿ ಆಗಿದ್ದಾರೆ. ಸಲೀಂ ಅಹಮದ್​​​ ಅವರನ್ನು​​​ ಮುಖ್ಯ ಸಚೇತಕರಾಗಿ ಮಾಡಲಾಗಿದೆ. ನಜೀರ್ ಅಹಮದ್​​​​​​​​​ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ. ಇನ್ನು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಯಾವ ಮುಸ್ಲಿಂ ಸ್ಪೀಕರ್ ಆಗಿರಲಿಲ್ಲ. ಮೊದಲ ಬಾರಿಗೆ ಯು.ಟಿ ಖಾದರ್​ ಅವರನ್ನು ವಿಧಾನಸಭಾ ಸ್ಪೀಕರ್​​ ಆಗಿ ನೇಮಿಸಲಾಗಿದೆ. ಈಗ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ ಎಂದು ತೆಲಂಗಾಣ ಚುನಾವಣಾ ಪ್ರಚಾರದಲ್ಲಿ ಜಮೀರ್ ಅಹಮ್ಮದ್​ ಖಾನ್​ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Fri, 17 November 23

ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ