Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಷ್ಟ ಹೇಳಿಕೊಂಡು ಬಂದ ವಿದ್ಯಾರ್ಥಿಗೆ ನಿಂತಲ್ಲೇ ವಿಮಾನ ಟಿಕೆಟ್ ಬುಕ್ ಮಾಡಿಕೊಟ್ಟ ಸಚಿವ ಜಮೀರ್ ಅಹ್ಮದ್

Zameer Ahmed Khan: ಹೆಬ್ಬಾಳದ ಕ್ರೆಸೆಂಟ್ ಇಂಗ್ಲಿಷ್ ಶಾಲೆಯ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಮೊಹಮ್ಮದ್ ತಾಹೀರ್ ಆಮೀರ್​ಗೆ ಸಚಿವ ಜಮೀರ್ ಸಹಾಯ ಮಾಡಿದರು. ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುವ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ಸ್ ಸ್ಪರ್ಧೆಯಲ್ಲಿ ಭಾಗಿಯಾಗಲು 60 ಸಾವಿರ ರೂ ವೆಚ್ಚದ ಟಿಕೆಟ್ ಬುಕ್ ಮಾಡಿಕೊಂಡರು. ಟಿಕೆಟ್ ಮಾಡಿಸಿ ಶುಭ ಹಾರೈಸಿದರು.

ಕಷ್ಟ ಹೇಳಿಕೊಂಡು ಬಂದ ವಿದ್ಯಾರ್ಥಿಗೆ ನಿಂತಲ್ಲೇ ವಿಮಾನ ಟಿಕೆಟ್ ಬುಕ್ ಮಾಡಿಕೊಟ್ಟ ಸಚಿವ ಜಮೀರ್ ಅಹ್ಮದ್
ವಿದ್ಯಾರ್ಥಿಗೆ ನಿಂತಲ್ಲೇ ವಿಮಾನ ಟಿಕೆಟ್ ಬುಕ್ ಮಾಡಿಕೊಟ್ಟ ಸಚಿವ ಜಮೀರ್
Follow us
ಪ್ರಸನ್ನ ಗಾಂವ್ಕರ್​
| Updated By: ಆಯೇಷಾ ಬಾನು

Updated on:Aug 23, 2023 | 2:50 PM

ಬೆಂಗಳೂರು, ಆ.23: ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್(Zameer Ahmed Khan) ಸಹಾಯ ಮಾಡಿದ್ದು ಸ್ಥಳದಲ್ಲೇ ವಿಮಾನದ ಟಿಕೆಟ್ ಬುಕ್ ಮಾಡಿಕೊಟ್ಟಿದ್ದಾರೆ. ಸಚಿವ ಜಮೀರ್ ಅಹ್ಮದ್ ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ, ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು. ಈ ವೇಳೆ ಹೆಬ್ಬಾಳದ ಕ್ರೆಸೆಂಟ್ ಇಂಗ್ಲಿಷ್ ಶಾಲೆಯ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಮೊಹಮ್ಮದ್ ತಾಹೀರ್ ಆಮೀರ್​ಗೆ ಸಚಿವ ಜಮೀರ್ ಸಹಾಯ ಮಾಡಿದರು.

ಸೆ.19 ರಿಂದ 24 ವರೆಗೆ ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುವ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ಸ್ ಸ್ಪರ್ಧೆಗೆ ವಿದ್ಯಾರ್ಥಿ ಮೊಹಮ್ಮದ್ ತಾಹೀರ್ ಆಯ್ಕೆ ಆಗಿದ್ದು ಆರ್ಥಿಕ ಸಂಕಷ್ಟದಿಂದಾಗಿ ಇಂಡೋನೇಷ್ಯಾಗೆ ತೆರಳಿ ಸ್ಪರ್ಧೆಯಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಂದು ಸಚಿವ ಜಮೀರ್ ಅಹ್ಮದ್ ಅವರನ್ನು ಭೇಟಿ ಮಾಡಿ ವಿದ್ಯಾರ್ಥಿ ತಾಹೀರ್ ಹಾಗೂ ಕುಟುಂಬ ಅಳಲು ತೋಡಿಕೊಂಡಿತ್ತು. ಸಮಸ್ಯೆ ತಿಳಿಯುತ್ತಿದ್ದಂತೆಯೇ ಸಚಿವ ಜಮೀರ್ ಅಹ್ಮದ್ ತಕ್ಷಣ ತಮ್ಮ ವೈಯಕ್ತಿಕ ವೆಚ್ಚದಲ್ಲಿ ವಿಮಾನದ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ. ಸ್ಥಳದಲ್ಲೇ ಸ್ಪರ್ಧೆಗೆ ಹೋಗಿ ಬರುವ ವಿಮಾನ ವೆಚ್ಚ 60 ಸಾವಿರ ರೂ. ಟಿಕೆಟ್ ಮಾಡಿಸಿ ಶುಭ ಹಾರೈಸಿದ್ದಾರೆ. ಸಚಿವರು ಸಮಸ್ಯೆ ಆಲಿಸಿ ಕ್ಷಣ ಮಾತ್ರದಲ್ಲೇ ಸಹಾಯ ಮಾಡಿದ ಬಗ್ಗೆ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ 8 ಯೋಜನೆಗಳು ಜಾರಿ: ಯಾವುವು? ಜಮೀರ್ ಅಹ್ಮದ್ ಹೇಳಿದ್ದಿಷ್ಟು

ಸಚಿವ ಜಮೀರ್ ಅಹ್ಮದ್ ಖಾನ್ ಸಹಾಯ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಅನೇಕ ಬಾರಿ ಸಹಾಯ ಮಾಡಿದ್ದಾರೆ. ಸಹಾಯ ಕೇಳಿ ತಮ್ಮ ಬಳಿ ಬರುವವರನ್ನು ನಿರಾಸೆ ಮಾಡದೆ ಸಹಾಯ ಮಾಡುವ ಮನೋಭಾವ ಜಮೀರ್ ಅವರದು. ತಮ್ಮ ಜೇಬಲ್ಲಿ ಹಣವಿದ್ದರೆ ಅದು ಎಷ್ಟಿದೆ ಎಂದು ಲೆಕ್ಕವೂ ಹಾಕದೆ ಸಹಾಯಕ್ಕೆ ಕೈವೊಡ್ಡಿದವರಿಗೆ ಅರ್ಪಿಸಿಬಿಡುತ್ತಾರೆ. ಮಾಜಿ ಸಚಿವ ಡಾ. ಸುಧಾಕರ್​ ಸಹಾಯ ಮಾಡದ ಮಹಿಳೆಗೆ ಸ್ಥಳದಲ್ಲೇ ಸಹಾಯ ಮಾಡಿ ಜಮೀರ್ ಮಾನವೀಯತೆ ಮೆರೆದಿದ್ದರು.​

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:56 pm, Wed, 23 August 23

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು