AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರ ಆದೇಶ ಒಂದೇ ದಿನದಲ್ಲಿ ಜಾರಿ: 60 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವು

ನಗರದ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಬಿ.ಎಂ. ಕಾವಲು ಬಫರ್ ವಲಯದಲ್ಲಿ 60 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಜಪ್ತಿ ಮಾಡಿಕೊಳ್ಳಲಾಗಿದೆ. ನಿನ್ನೆ ಸಭೆ ನಡೆಸಿ ಒತ್ತುವರಿ ತೆರವುಗೊಳಿಸಲು ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದರು. ಹಾಗಾಗಿ 6.5 ಎಕರೆ ಒತ್ತುವರಿ ಭೂಮಿ ತೆರವು ಮಾಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಸನ್ನ ಗಾಂವ್ಕರ್​
| Edited By: |

Updated on: Jan 03, 2024 | 3:51 PM

Share

ಬೆಂಗಳೂರು, ಜನವರಿ 03: ನಗರದ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಬಿ.ಎಂ. ಕಾವಲು ಬಫರ್ ವಲಯದಲ್ಲಿ 60 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ (encroachment) ತೆರವುಗೊಳಿಸಿ ಜಪ್ತಿ ಮಾಡಿಕೊಳ್ಳಲಾಗಿದೆ. ನಿನ್ನೆ ಸಭೆ ನಡೆಸಿ ಒತ್ತುವರಿ ತೆರವುಗೊಳಿಸಲು ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದರು. ಹಾಗಾಗಿ 6.5 ಎಕರೆ ಒತ್ತುವರಿ ಭೂಮಿ ತೆರವು ಮಾಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ನಗರ ಡಿಸಿಎಫ್​ ರವೀಂದ್ರಕುಮಾರ್, ಎಸಿಎಫ್ ಸುರೇಶ್​ ಆರ್​​ಎಫ್​ಒ ಗೋವಿಂದರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಅರಣ್ಯ ಇಲಾಖೆಯ 20ಕ್ಕೂ ಹೆಚ್ಚು ಸಿಬ್ಬಂದಿಯಿಂದ ಒತ್ತುವರಿ ತೆರವು ಮಾಡಲಾಗಿದೆ.

ಇದನ್ನೂ ಓದಿ: ಹೊಸಕೋಟೆಯಲ್ಲಿ ಬೆಳ್ಳಂ ಬೆಳಿಗ್ಗೆ ಜೆಸಿಬಿ ಘರ್ಜನೆ; ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು

ಈ ಅರಣ್ಯ ಪ್ರದೇಶದಲ್ಲಿ ಸುಮಾರು 6.5 ಎಕರೆ ಭೂಮಿಯನ್ನು ಮಧುಸೂದನಾನಂದ ಸ್ವಾಮಿ ಎನ್ನುವವರು ಒತ್ತುವರಿ ಮಾಡಿಕೊಂಡು ಈ ಭೂಮಿಯನ್ನು ಮಂಜೂರಾತಿ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಅರಣ್ಯ ಭೂಮಿಯನ್ನು ಯಾರಿಗೂ ಮಂಜೂರಾತಿ ಮಾಡಲ್ಲ ಎಂದು ಅರಣ್ಯ ಇಲಾಖೆ ತಿರಸ್ಕಾರ ಮಾಡಿತ್ತು.

ಇಂದು ಬೆಂಗಳೂರು ನಗರ ಡಿಸಿಎಫ್ ರವೀಂದ್ರಕುಮಾರ್, ಎಸಿಎಫ್ ಸುರೇಶ್ ಮತ್ತು ಆರ್‌ಎಫ್ ಗೋವಿಂದರಾಜು ಇವರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿ ಶೆಡ್‌ಗಳನ್ನು ನೆಲಸಮ ಮಾಡಿ ಅರಣ್ಯ ಭೂಮಿ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ, ಆರ್​ಎಫ್​ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು

ಈ ಅರಣ್ಯ ಪ್ರದೇಶದಲ್ಲಿ ಬಿದಿರು ಸೇರಿದಂತೆ ನಾನಾ ಜಾತಿಯ ಮರಗಳನ್ನು ಬೆಳೆಯಲಾಗಿತ್ತು. ಇನ್ನು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಮಧುಸೂದನಾನಂದ ಸ್ವಾಮಿ ಎಂಬುವವರ ವಿರುದ್ಧ ಈಗಾಗಲೇ ಐದು ಪ್ರಕರಣಗಳು ದಾಖಲಾಗಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು