AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರ ಆದೇಶ ಒಂದೇ ದಿನದಲ್ಲಿ ಜಾರಿ: 60 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವು

ನಗರದ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಬಿ.ಎಂ. ಕಾವಲು ಬಫರ್ ವಲಯದಲ್ಲಿ 60 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಜಪ್ತಿ ಮಾಡಿಕೊಳ್ಳಲಾಗಿದೆ. ನಿನ್ನೆ ಸಭೆ ನಡೆಸಿ ಒತ್ತುವರಿ ತೆರವುಗೊಳಿಸಲು ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದರು. ಹಾಗಾಗಿ 6.5 ಎಕರೆ ಒತ್ತುವರಿ ಭೂಮಿ ತೆರವು ಮಾಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಸನ್ನ ಗಾಂವ್ಕರ್​
| Edited By: |

Updated on: Jan 03, 2024 | 3:51 PM

Share

ಬೆಂಗಳೂರು, ಜನವರಿ 03: ನಗರದ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಬಿ.ಎಂ. ಕಾವಲು ಬಫರ್ ವಲಯದಲ್ಲಿ 60 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ (encroachment) ತೆರವುಗೊಳಿಸಿ ಜಪ್ತಿ ಮಾಡಿಕೊಳ್ಳಲಾಗಿದೆ. ನಿನ್ನೆ ಸಭೆ ನಡೆಸಿ ಒತ್ತುವರಿ ತೆರವುಗೊಳಿಸಲು ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದರು. ಹಾಗಾಗಿ 6.5 ಎಕರೆ ಒತ್ತುವರಿ ಭೂಮಿ ತೆರವು ಮಾಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ನಗರ ಡಿಸಿಎಫ್​ ರವೀಂದ್ರಕುಮಾರ್, ಎಸಿಎಫ್ ಸುರೇಶ್​ ಆರ್​​ಎಫ್​ಒ ಗೋವಿಂದರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಅರಣ್ಯ ಇಲಾಖೆಯ 20ಕ್ಕೂ ಹೆಚ್ಚು ಸಿಬ್ಬಂದಿಯಿಂದ ಒತ್ತುವರಿ ತೆರವು ಮಾಡಲಾಗಿದೆ.

ಇದನ್ನೂ ಓದಿ: ಹೊಸಕೋಟೆಯಲ್ಲಿ ಬೆಳ್ಳಂ ಬೆಳಿಗ್ಗೆ ಜೆಸಿಬಿ ಘರ್ಜನೆ; ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು

ಈ ಅರಣ್ಯ ಪ್ರದೇಶದಲ್ಲಿ ಸುಮಾರು 6.5 ಎಕರೆ ಭೂಮಿಯನ್ನು ಮಧುಸೂದನಾನಂದ ಸ್ವಾಮಿ ಎನ್ನುವವರು ಒತ್ತುವರಿ ಮಾಡಿಕೊಂಡು ಈ ಭೂಮಿಯನ್ನು ಮಂಜೂರಾತಿ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಅರಣ್ಯ ಭೂಮಿಯನ್ನು ಯಾರಿಗೂ ಮಂಜೂರಾತಿ ಮಾಡಲ್ಲ ಎಂದು ಅರಣ್ಯ ಇಲಾಖೆ ತಿರಸ್ಕಾರ ಮಾಡಿತ್ತು.

ಇಂದು ಬೆಂಗಳೂರು ನಗರ ಡಿಸಿಎಫ್ ರವೀಂದ್ರಕುಮಾರ್, ಎಸಿಎಫ್ ಸುರೇಶ್ ಮತ್ತು ಆರ್‌ಎಫ್ ಗೋವಿಂದರಾಜು ಇವರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿ ಶೆಡ್‌ಗಳನ್ನು ನೆಲಸಮ ಮಾಡಿ ಅರಣ್ಯ ಭೂಮಿ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ, ಆರ್​ಎಫ್​ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು

ಈ ಅರಣ್ಯ ಪ್ರದೇಶದಲ್ಲಿ ಬಿದಿರು ಸೇರಿದಂತೆ ನಾನಾ ಜಾತಿಯ ಮರಗಳನ್ನು ಬೆಳೆಯಲಾಗಿತ್ತು. ಇನ್ನು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಮಧುಸೂದನಾನಂದ ಸ್ವಾಮಿ ಎಂಬುವವರ ವಿರುದ್ಧ ಈಗಾಗಲೇ ಐದು ಪ್ರಕರಣಗಳು ದಾಖಲಾಗಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!